ಬ್ರೇಕಿಂಗ್ ನ್ಯೂಸ್
12-11-22 05:55 pm Bangalore Correspondent ಕ್ರೈಂ
ಬೆಂಗಳೂರು, ನ.12: ಯುವಕರ ತಂಡವೊಂದು ತಮ್ಮ ಗೆಳೆಯನನ್ನೇ ಬ್ಲ್ಯಾಕ್ ಮೇಲ್ ಮಾಡಿ 15 ಲಕ್ಷ ರೂ. ಸುಲಿಗೆ ಮಾಡಿ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ. ಅದು ಕೂಡ ತುಂಬಾ ನಂಬಿಕೆ ಇಟ್ಟಿದ್ದ ಗೆಳೆಯರೇ ಯುವಕನ ಸಂಕಷ್ಟದ ಸ್ಥಿತಿಯನ್ನು ಎನ್ಕ್ಯಾಶ್ ಮಾಡಿಕೊಂಡ ವಂಚನೆಯ ಕಥೆ.
ಚಾಮರಾಜಪೇಟೆಯ ಚಿನ್ನಾಭರಣ ವ್ಯಾಪಾರಿಯೊಬ್ಬರ ಪುತ್ರನಿಗೆ ಇತ್ತೀಚೆಗೆ ಇನ್ಸ್ಟಾ ಗ್ರಾಂನಲ್ಲಿ ಯುವತಿಯೊಬ್ಬಳ ಪರಿಚಯ ಆಗಿತ್ತು. ಇಬ್ಬರ ನಡುವೆ ಆತ್ಮೀಯತೆ ಬೆಳೆದು ಪರಸ್ಪರ ಚಾಟಿಂಗ್' ಮಾಡಿಕೊಂಡು ಖಾಸಗಿಯಾಗಿ ವಿಡಿಯೋಕಾಲ್ ನಲ್ಲಿ ಮಾತನಾಡಿಕೊಂಡಿದ್ದರು.

ಕೆಲದಿನಗಳ ಬಳಿಕ ಯುವಕ ಮತ್ತು ಯುವತಿ ಗಲಾಟೆ ಮಾಡಿಕೊಂಡು ಸಂಬಂಧ ಹಳಸಿತ್ತು. ಈ ವಿಚಾರವನ್ನು ಚಿನ್ನದ ವ್ಯಾಪಾರಿಯ ಪುತ್ರ ತನ್ನ ಸ್ನೇಹಿತರ ಬಳಿ ಹೇಳಿಕೊಂಡಿದ್ದ. ಮಾತ್ರವಲ್ಲ, ಖಾಸಗಿ ವಿಡಿಯೊಗಳ ಫೋಟೊಗಳನ್ನು ಶೇರ್ ಮಾಡಿಕೊಂಡಿದ್ದ.
ಸ್ನೇಹಿತನ ಖಾಸಗಿ ವಿಡಿಯೋ ಸ್ಕ್ರೀನ್ ಶಾರ್ಟ್ಗಳನ್ನೇ ಬಂಡವಾಳ ಮಾಡಿಕೊಂಡ ಸ್ನೇಹಿತರು ಅವನಿಂದ ದುಡ್ಡು ಕೀಳಲು ಹವಣಿಸಿದರು. ಯುವತಿ ಜತೆ ಖಾಸಗಿ ವಿಡಿಯೊ ಚಾಟ್ ಮಾಡಿರುವ ವಿಚಾರ ಸಿಸಿಬಿ ಪೊಲೀಸರಿಗೆ ಗೊತ್ತಾಗಿದೆ. ಅವರು ನಿನ್ನನ್ನು ಬಂಧಿಸುತ್ತಾರೆ ಎಂದು ಬ್ಲ್ಯಾಕ್ ಮೇಲ್ ಮಾಡಲು ಶುರು ಮಾಡಿದರು.

ನಮಗೆ ಐಪಿಎಸ್ ಅಧಿಕಾರಿಗಳು ಗೊತ್ತು. ಅವರ ಪರಿಚಯವಿದೆ. ಹೀಗಾಗಿ ವಿವಾದವನ್ನು ಸೆಟಲ್ಮೆಂಟ್ ಮಾಡೋಣ ಎಂದರು. ಹಾಗೆ ಸೆಟಲ್ಮೆಂಟ್ಗೆ ಹಣ ಕೇಳುತ್ತಾರೆ ಎಂದು ದುಡ್ಡಿಗೆ ಬೇಡಿಕೆ ಇಟ್ಟರು.
ಮೊದಲು 99 ಗ್ರಾಂ ತೂಕದ ಚಿನ್ನದ ಬಿಸ್ಕತ್ತನ್ನು ಸ್ನೇಹಿತರಿಗೆ ನೀಡಿದ್ದ ಈ ಯುವಕ. ಆದರೆ, ಅಷ್ಟಕ್ಕೇ ತೃಪ್ತರಾಗದ ಗೆಳೆಯರು ಸಿಸಿಬಿ ಪೊಲೀಸರು ಇನ್ನೂ ಹೆಚ್ಚಿನ ಹಣ ಕೇಳುತ್ತಿದ್ದಾರೆ ಎಂದು ಹೆದರಿಸಿ 3.50 ಲಕ್ಷ ರೂ. ಪಡೆದಿದ್ದರು. ಬ್ಲ್ಯಾಕ್ಮೇಲ್ ಮಾಡಿ ಸಿಸಿಬಿ ಪೊಲೀಸರ ಹೆಸರಲ್ಲಿ ಹಂತ ಹಂತವಾಗಿ 15.90 ಲಕ್ಷ ರೂ. ಪಡೆದರು.
ಈ ನಡುವೆ ಯುವಕನಿಗೆ ತನ್ನ ಸ್ನೇಹಿತರ ಮೇಲೆಯೇ ಅನುಮಾನ ಬಂತು. ಕೊನೆಗೆ ಸಿಸಿಬಿ ಪೊಲೀಸರಲ್ಲಿ ಬೇರೆಯವರ ಮೂಲಕ ವಿಚಾರಿಸಿದಾಗ ಅಲ್ಲಿ ಇಂಥ ಪ್ರಕರಣವೇ ಇಲ್ಲ ಎನ್ನುವುದು ಗೊತ್ತಾಯಿತು.
ಇದಾದ ಬಳಿಕ ಗೆಳೆಯರು ಹಣ ಪಡೆದು ಬ್ಲ್ಯಾಕ್ ಮೇಲ್ ಮಾಡಿರುವ ಬಗ್ಗೆ ತಿಲಕ್ ನಗರ ಠಾಣೆಗೆ ದೂರು ನೀಡಿದ. ಪ್ರಕರಣದ ಬೆನ್ನಲ್ಲೇ ಪೊಲೀಸರು ಸುನಿಲ್, ಹೇಮಂತ್, ಪ್ರವೀಣ್ ಎಂಬುವವರ ವಿರುದ್ಧ ಎಫ್ ಐಆರ್ ದಾಖಲಿಸಿ ಬಂಧಿಸಿದ್ದಾರೆ.
Bangalore Friends blackmail close friend of private video, and loot Rs 15 lakhs by Blackmail.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm