ಬ್ರೇಕಿಂಗ್ ನ್ಯೂಸ್
13-11-22 09:58 pm Mangalore Correspondent ಕ್ರೈಂ
ಬೆಳ್ತಂಗಡಿ, ನ.13: ಒಂಟಿ ಮಹಿಳೆ ವಾಸವಿದ್ದ ಮನೆಗೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಮಹಿಳೆಯನ್ನು ಕಟ್ಟಿಹಾಕಿ, ಮನೆಯಲ್ಲಿದ್ದ ಚಿನ್ನಾಭರಣ ದರೋಡೆಗೈದ ಘಟನೆ ನಡೆದಿದ್ದು, ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾರಾವಿ ಬಳಿಯ ಅರಸಿಕಟ್ಟೆ ಎಂಬಲ್ಲಿ ಪ್ರಭಾವತಿ ನಾಯ್ಕ(67) ಎಂಬ ಮಹಿಳೆಯ ಮನೆಗೆ ನುಗ್ಗಿ ದರೋಡೆ ನಡೆಸಲಾಗಿದೆ. ನ.12ರಂದು ರಾತ್ರಿ ಏಳು ಗಂಟೆಗೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಸುತ್ತುವರಿದು, ಬಂಗಾರವನ್ನು ತಂದು ಕೊಡುವಂತೆ ಹೇಳಿ ಧಮ್ಕಿ ಹಾಕಿದ್ದಾರೆ. ಬೊಬ್ಬೆ ಹೊಡೆದ ಮಹಿಳೆಯ ಕೈಕಾಲನ್ನು ಹಗ್ಗದಿಂದ ಕಟ್ಟಿ ಹಾಕಿದ್ದು, ಬಾಯಿಗೆ ಬಟ್ಟೆ ತುರುಕಿದ್ದಾರೆ. ಬಳಿಕ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ, ಕಿವಿಯಲ್ಲಿದ್ದ ಚಿನ್ನದ ಕಿವಿಯೋಲೆಯನ್ನು ಕಿತ್ತು ತೆಗೆದಿದ್ದಾರೆ.
ಆನಂತರ ಮನೆಯ ಒಳಗೆ ಇರಿಸಿದ್ದ ಕಪಾಟು, ಬೆಡ್ಡನ್ನು ಜಾಲಾಡಿದ್ದು, ಅಲ್ಲಿದ್ದ ಚಿನ್ನವನ್ನೂ ಹೊತ್ತೊಯ್ದಿದ್ದಾರೆ. ಬೆಡ್ ಅಡಿಯಲ್ಲಿ ಇರಿಸಿದ್ದ ಮೂರು ಚಿನ್ನದ ಬಳೆಗಳು, ಮೂರು ಚಿನ್ನದ ಉಂಗುರಗಳು, ಮೂರು ಎಲೆಯ ಚಿನ್ನದ ಚೈನ್ ಒಂದನ್ನು ದೋಚಿದ್ದಾರೆ. ಇದಲ್ಲದೆ, ಅಡುಗೆ ಕೋಣೆಯಲ್ಲಿ ಇಟ್ಟಿದ್ದ 10 ಸಾವಿರ ರೂ. ನಗದನ್ನು ಕಳವು ಮಾಡಿದ್ದಾರೆ. ಅಂದಾಜು 4.60 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಕಳ್ಳರು ದೋಚಿದ್ದು ಪರಾರಿಯಾಗಿದ್ದಾರೆ. ಮಹಿಳೆ ಆನಂತರ ನಿಧಾನಕ್ಕೆ ಕೊಸರಾಡಿಕೊಂಡು ಮನೆಯ ಒಳಗೆ ತೆರಳಿದ್ದು, ಕಳ್ಳರು ನುಗ್ಗಿ ದರೋಡೆ ನಡೆಸಿದ್ದನ್ನು ಸಂಬಂಧಿಕರಿಗೆ ಫೋನ್ ಮಾಡಿ ತಿಳಿಸಿದ್ದಾರೆ. ವೇಣೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳು ತುಳುವಿನಲ್ಲಿ ಮಾತನಾಡುತ್ತಿದ್ದು, ಕೊನೆಗೆ ಹೋಗುವಾಗ ಎಂಕುಲು ಬತ್ತಿನ ಕೆಲಸ ಆಂಡ್(ನಾವು ಬಂದ ಕೆಲಸ ಆಯ್ತು) ಅಂತ ಹೇಳಿ ಹೋಗಿದ್ದಾರೆಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
Mangalore Robbers tie women flee from home with gold worth 4.60 lakhs in Belthangady.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am