ಬ್ರೇಕಿಂಗ್ ನ್ಯೂಸ್
13-10-20 01:37 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 13: ಹಾಲಿನ ಟೆಂಪೋದಲ್ಲಿ ಗೋಮಾಂಸ ಸಾಗಿಸುತ್ತಿದ್ದ ಪ್ರಕರಣದಲ್ಲಿ ಪೊಲೀಸರು ಮಹಜರು ಪೂರ್ತಿಗೊಳಿಸಿದ್ದು ಟೆಂಪೋದಲ್ಲಿ ಒಂದು ಸಾವಿರ ಕೇಜಿಗೂ ಹೆಚ್ಚು ಗೋಮಾಂಸ ಇತ್ತೆಂದು ಪೊಲೀಸರು ಖಚಿತಪಡಿಸಿದ್ದಾರೆ. ಅಲ್ಲದೆ, ಹಾಸನದಿಂದ ಮಾಂಸವನ್ನು ತರಲಾಗುತ್ತಿತ್ತು ಎಂದು ಆರೋಪಿ ಬಾಯಿ ಬಿಟ್ಟಿದ್ದಾಗಿ ಮಾಹಿತಿ ನೀಡಿದ್ದಾರೆ.
ಹಾಲಿನ ಟೆಂಪೋದಲ್ಲಿ ಗೋಮಾಂಸ ಸಾಗಾಟದ ಬಗ್ಗೆ ಖಚಿತ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ್ದರು. ಬಿ.ಸಿ.ರೋಡ್ ಕಡೆಯಿಂದ ಬರುತ್ತಿದ್ದ ಹಾಲಿನ ವಾಹನವನ್ನು ಪಂಪ್ವೆಲ್ ಸರ್ಕಲ್ ಬಳಿ ನಿಲ್ಲಿಸಲು ಯತ್ನಿಸಿದ್ದು ನುಗ್ಗಿ ಬಂದ ವಾಹನವನ್ನು ಕಾರ್ಯಕರ್ತರು ಹಂಪನಕಟ್ಟೆಯಲ್ಲಿ ತಡೆದಿದ್ದರು. ಘಟನೆಯಲ್ಲಿ ಇಬ್ಬರು ಪರಾರಿಯಾಗಿದ್ದರು. ಒಬ್ಬ ಸಿಕ್ಕಿಬಿದ್ದಿದ್ದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.


ಪರಿಶೀಲನೆ ವೇಳೆ ಟೆಂಪೋ ಒಳಭಾಗದಲ್ಲಿ ಗೋಣಿ ಚೀಲದಲ್ಲಿ ಅಡಗಿಸಿಟ್ಟ ಗೋವುಗಳ ಮಾಂಸ ಪತ್ತೆಯಾಗಿತ್ತು. ಇದೀಗ ಮಹಜರು ವೇಳೆ ಒಂದು ಸಾವಿರ ಕೆಜಿಗೂ ಹೆಚ್ಚು ಮಾಂಸ ಇರುವುದು ಬೆಳಕಿಗೆ ಬಂದಿದೆ.
ಅಕ್ರಮ ಗೋಸಾಗಾಟ ವಿಚಾರದಲ್ಲಿ ಪೊಲೀಸರು ನಿಗಾ ಇಟ್ಟಿರುವ ಹಿನ್ನೆಲೆಯಲ್ಲಿ ಖದೀಮರು ಹಾಲಿನ ಟೆಂಪೋವನ್ನು ಸಾಗಾಟಕ್ಕೆ ಬಳಸಿದ್ದರು. ಹಾಸನದಿಂದ ಆರೋಕ್ಯಾ ಹಾಲನ್ನು ಮಂಗಳೂರಿಗೆ ತರುವ ನೆಪದಲ್ಲಿ ಪೊಲೀಸರನ್ನು ಯಾಮಾರಿಸಲು ತಂತ್ರ ಹೂಡಿದ್ದರು. ಆದರೆ, ಈ ಬಗ್ಗೆ ಸುಳಿವು ಪಡೆದ ಬಜರಂಗದಳ ಕಾರ್ಯಕರ್ತರು ಖದೀಮರ ಜಾಲವನ್ನು ಭೇದಿಸಿದ್ದಾರೆ. ಈ ಹಿಂದೆಯೂ ಇದೇ ರೀತಿ ಹಾಲಿನ ವಾಹನದಲ್ಲಿ ಗೋಮಾಂಸ ಸಾಗಾಟ ಆಗುತ್ತಿತ್ತೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The Mangalore police have found one thousand kilos of beef meat packed inside the milk van were Bajarang Dal activists have chased the van and caught it hold at Venlock Hospital, Mangalore here on 13 Oct, Tuesday, 2020
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm