ಬ್ರೇಕಿಂಗ್ ನ್ಯೂಸ್
15-11-22 10:15 pm Bangalore Correspondent ಕ್ರೈಂ
ಬೆಂಗಳೂರು, ನ.15 : ಖಾತೆಯಲ್ಲಿ ತಪ್ಪಾಗಿ ಬಂದಿರುವ ಹೆಸರನ್ನು ಸರಿ ಮಾಡಿಕೊಡಲು 10 ಲಕ್ಷ ರೂ.ಗೆ ಬೇಡಿಕೆ ಒಡ್ಡಿದ್ದ ವಿಶೇಷ ತಹಸೀಲ್ದಾರ್ ಆಗಿದ್ದ ಮಹಿಳಾ ಅಧಿಕಾರಿ ಮತ್ತು ಆಕೆಯ ಏಜೆಂಟ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ನಗರ ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ವರ್ಷಾ ಒಡೆಯರ್ ಮತ್ತು ಏಜೆಂಟ್ ರಮೇಶ್ ಲೋಕಾಯಕ್ತ ಬಲೆಗೆ ಸಿಲುಕಿದವರು.
ಬೆಂಗಳೂರು ಉತ್ತರ ತಾಲೂಕು ದಾಸನಪುರ ಹೋಬಳಿ ಕೆಂಗನಹಳ್ಳಿಯ ಕಾಂತರಾಜು, ತನಗೆ ಸೇರಿದ ಜಮೀನಿನ ಖಾತೆಯಲ್ಲಿ ಹೆಸರು ಬದಲಾಗಿದೆ. ಅದನ್ನು ಸರಿ ಮಾಡುವಂತೆ ವಿಶೇಷ ತಹಸೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಕೈಗೆತ್ತಿಕೊಂಡ ವರ್ಷಾ ಒಡೆಯರ್, ಹೆಸರು ಸರಿ ಮಾಡಲು 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಒಡ್ಡಿದ್ದರು. ನೊಂದ ಅರ್ಜಿದಾರ ಕಾಂತರಾಜು, ಈ ಕುರಿತು ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ್ದ ಲೋಕಾಯುಕ್ತ ಪೊಲೀಸರು, ಮಂಗಳವಾರ ಸಂಜೆ ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ಕಚೇರಿಯಲ್ಲಿ ಅಧಿಕಾರಿ ಮುಂಗಡ 5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಮಾಡಿದ್ದಾರೆ.
ಇದೇ ವೇಳೆ ಹಣ ಸ್ವೀಕರಿಸುತ್ತಿದ್ದ ಮಧ್ಯವರ್ತಿ ರಮೇಶ್ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2014ನೇ ಕೆಪಿಎಸ್ಸಿ ನಡೆಸಿದ ಕರ್ನಾಟಕ ಆಡಳಿತ ಸೇವೆಯಲ್ಲಿ ಆಯ್ಕೆಯಾಗಿದ್ದ ವರ್ಷಾ ಒಡೆಯರ್, ಚಾಮರಾಜನಗರ ಮತ್ತು ಕನಕಪುರದಲ್ಲಿ ತಹಸೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು. ಇದಾದ ಮೇಲೆ ಬೆಂಗಳೂರು ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ಹುದ್ದೆಗೆ ವರ್ಗಾವಣೆಗೊಂಡಿದ್ದರು. ಇದೀಗ ಲಂಚಕ್ಕೆ ಕೈಚಾಚಿ ಜೈಲು ಸೇರಿದ್ದಾರೆ.
Woman tahsildar caught red handed while taking bribe of 10 lakhs in Bangalore.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm