ಬ್ರೇಕಿಂಗ್ ನ್ಯೂಸ್
13-10-20 03:49 pm Headline Karnataka News Network ಕ್ರೈಂ
ರಾಂಚಿ, ಅಕ್ಟೋಬರ್ 13: 5ನೇ ತರಗತಿ ಓದುತ್ತಿದ್ದ ಬಾಲಕಿಯನ್ನು ಅಪಹರಿಸಿದ ಐವರು ಬಾಲಕರು ರಾತ್ರಿಯಿಡೀ ಗ್ಯಾಂಗ್ ರೇಪ್ ನಡೆಸಿದ ಘಟನೆ ಜಾರ್ಖಂಡ್ ರಾಜ್ಯದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಶನಿವಾರ ರಾತ್ರಿ ಬಾಲಕಿಯನ್ನು ಆಕೆಯ ಮನೆಯಿಂದಲೇ ಬಾಲಕರು ಸೇರಿ ಅಪಹರಿಸಿ, ಒಯ್ದಿದ್ದರು. ಅಂದು ರಾತ್ರಿಯಿಡೀ ಸಾಮೂಹಿಕ ಅತ್ಯಾಚಾರ ನಡೆಸಿದ್ದು ಮರುದಿನ ಬಾಲಕಿ ತನ್ನ ಮನೆ ಸೇರಿದ್ದಳು. ವಿಷಯ ಅರಿತು ಕ್ರೋಧಗೊಂಡ ಹೆತ್ತವರು ಬಾಲಕರನ್ನು ಹಿಡಿದು, ಕೈ ಮತ್ತು ಕಾಲಿಗೆ ಕಡಿದು ಹಲ್ಲೆ ನಡೆಸಿದ್ದಾರೆ. ಗಂಭೀರ ಗಾಯಗೊಂಡ ಬಾಲಕರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಾಲಕರನ್ನು ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ಅತ್ಯಾಚಾರ ಪ್ರಕರಣ ಬಯಲಿಗೆ ಬಂದಿದೆ. ಬಾಲಕರ ಹೆತ್ತವರು ಮತ್ತು ಬಾಲಕಿಯ ಕಡೆಯವರು ಬೇರೆ ಬೇರೆ ಸಮುದಾಯಕ್ಕೆ ಸೇರಿದವರಾಗಿದ್ದು, ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರುವ ಭಯದಲ್ಲಿ ಬಾಲಕರ ಕಡೆಯವರು ಬಾಲಕಿಯ ಮನೆಯವರಿಗೆ ಬೆದರಿಕೆ ಹಾಕಿದ್ದಾರೆ. ಬಾಲಕಿಯನ್ನು ಕೊಲ್ಲುವುದಾಗಿ ಮತ್ತು ಮನೆಯನ್ನು ಬೆಂಕಿ ಹಾಕಿ ಸುಡುವುದಾಗಿ ಬೆದರಿಸಿದ್ದಾರೆ.
ಆನಂತರ ಸಂತ್ರಸ್ತರ ಊರಿನಲ್ಲಿ ಇದೇ ವಿಚಾರ ಎರಡು ಸಮುದಾಯಗಳ ನಡುವೆ ಸಂಘರ್ಷ ಏರ್ಪಡುವಂತಾಗಿತ್ತು. ಇದಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಿದ್ದು, ಐವರು ಬಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇಬ್ಬರು ಆರೋಪಿಗಳಿಗೆ ಬಾಲಕಿ ಕಡೆಯವರು ಗಂಭೀರವಾಗಿ ಗಾಯಗೊಳಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರೆ, ಇನ್ನು ಮೂವರ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ.
Five boys gang-raped a 5th-grade girl in Gumla district of Jharkhand overnight. The accused had kidnapped the girl from home. The case is of late Saturday night. An attempt was made to quell the case on Sunday
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm