ಬ್ರೇಕಿಂಗ್ ನ್ಯೂಸ್
13-10-20 05:39 pm Headline Karnataka News Network ಕ್ರೈಂ
ನವದೆಹಲಿ, ಅಕ್ಟೋಬರ್ 13: ರಾಜಧಾನಿ ದೆಹಲಿ ಪೊಲೀಸರು ಫೇಕ್ ಕ್ಯಾಬ್ ರಾಕೆಟ್ ಒಂದನ್ನು ಭೇದಿಸಿದ್ದಾರೆ. ಉಬರ್, ಓಲಾ ರೀತಿಯ ಟ್ರಾವೆಲ್ಸ್ ಕ್ಯಾಬ್ ಏಪ್ ಮಾಡುವುದಾಗಿ ಹೇಳಿ ಒಂದು ಸಾವಿರಕ್ಕೂ ಹೆಚ್ಚು ಮಂದಿಯಿಂದ ಹಣ ಪಡೆದು 250 ಕೋಟಿ ರೂಪಾಯಿ ವಂಚಿಸಿರುವ ಪ್ರಕರಣ ಇದಾಗಿದ್ದು, ಪ್ರಕರಣದ ರೂವಾರಿ ಮಹಿಳೆಯನ್ನು ದೆಹಲಿಯ ಆರ್ಥಿಕ ಅಪರಾಧ ವಿಭಾಗದ ಪೊಲೀಸರು ಗೋವಾದಲ್ಲಿ ಬಂಧಿಸಿದ್ದಾರೆ.
ಕೇರಳ ಮೂಲದ ಡೈಸಿ ಮೆನನ್ ಬಂಧಿತ ಮಹಿಳೆಯಾಗಿದ್ದು, ‘’ಹೆಲ್ಲೋ ಟ್ಯಾಕ್ಸಿ’’ ಹೆಸರಲ್ಲಿ ಏಪ್ ಅಭಿವೃದ್ಧಿ ಪಡಿಸುವುದಾಗಿ ಜನರನ್ನು ನಂಬಿಸಿ ವಂಚಿಸಿದ್ದಾಳೆ. ಎಸ್ಎಂಪಿ ಇಂಡೆಕ್ಸ್ ಎನ್ನುವ ಕಂಪನಿ ಸ್ಥಾಪಿಸಿ, ಅದರ ಮೂಲಕ ಡಬಲ್ ರಿಟರ್ನ್ ಆಮಿಷವೊಡ್ಡಿ ಹಣ ಹೂಡಿಕೆ ಮಾಡಿಸುತ್ತಿದ್ದರು. ಹೆಲ್ಲೋ ಟ್ಯಾಕ್ಸಿಗೆ ಹಣ ಹೂಡಿದರೆ ವನ್ ಟು ಡಬಲ್ ಹಣವನ್ನು ಹಿಂತಿರುಗಿಸುತ್ತೇವೆ ಎಂದು ಹೂಡಿಕೆದಾರರನ್ನು ನಂಬಿಸುತ್ತಿದ್ದರು.
ಆರಂಭದಲ್ಲಿ ಒಂದಷ್ಟು ಹಣವನ್ನು ಹಿಂತಿರುಗಿಸುತ್ತಿದ್ದುದು ಹೂಡಿಕೆದಾರರಲ್ಲಿ ನಂಬಿಕೆ ಬೆಳೆದಿತ್ತು. ಆದರೆ ಕಂಪನಿಯವರು ಕೋಟಿಗಟ್ಟಲೆ ಹಣ ಸಂಗ್ರಹ ಆಗುತ್ತಿದ್ದಂತೆ ಕಚೇರಿಗೆ ಬಾಗಿಲು ಎಳೆದಿದ್ದಾರೆ. ಇದರಿಂದ ಭಯಗೊಂಡ ಹೂಡಿಕೆದಾರರು ಪೊಲೀಸರಿಗೆ ದೂರು ಕೊಟ್ಟಿದ್ದರು.

ಈ ನಡುವೆ, ಪೊಲೀಸರು ಹಿಂದೆ ಬಿದ್ದಿದ್ದಾರೆ ಎನ್ನುವ ಮಾಹಿತಿ ತಿಳಿದ ಆರೋಪಿಗಳು ಕಂಪನಿಯ ಕಚೇರಿಯನ್ನು ಸ್ಥಳಾಂತರ ಮಾಡತೊಡಗಿದ್ದರು. ಆರಂಭದದಲ್ಲಿ ಗಾಜಿಯಾಬಾದ್ ನಲ್ಲಿ ಕಚೇರಿ ಇತ್ತು. ಆನಂತ್ರ ಪತ್ಪರ್ ಗಂಜ್, ಆಬಳಿಕ ರೋಹಿಣಿ ಎಂಬಲ್ಲಿಗೆ ಸ್ಥಳಾಂತರ ಮಾಡಿ ಹೂಡಿಕೆದಾರರ ವಿಶ್ವಾಸ ಉಳಿಸಿಕೊಳ್ಳುವ ಯತ್ನ ಮಾಡಿದ್ರು. ಇದೇ ವೇಳೆ, ಪೊಲೀಸರು ಕಂಪನಿಯ ಬ್ಯಾಂಕ್ ಖಾತೆಯನ್ನು ಸೀಜ್ ಮಾಡಿದ್ದು, 3.2 ಕೋಟಿ ರೂಪಾಯಿ ಜಪ್ತಿ ಮಾಡಿದ್ದಾರೆ.ಅಲ್ಲದೆ, ಕಂಪನಿ ಕಡೆಯಿಂದ ಖರೀದಿಸಿದ್ದ 3.5 ಕೋಟಿ ರೂಪಾಯಿ ಮೌಲ್ಯದ 60 ಹೊಸ ಹ್ಯೂಂಡೈ ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಳೆದ ಆಗಸ್ಟ್ ನಲ್ಲಿ ನಿರ್ದೇಶಕರಲ್ಲಿ ಒಬ್ಬನಾದ ರಾಜೇಶ್ ಮಹ್ತೋ ಎಂಬಾತನ ಬಂಧನವಾಗಿತ್ತು. ಆತ ನೀಡಿದ ಮಾಹಿತಿ ಪ್ರಕಾರ, ಪೊಲೀಸರು ಪ್ರಮುಖ ರೂವಾರಿ ಎನ್ನಲಾಗುವ ಡೈಸಿ ಮೆನನ್ ಎನ್ನುವ ಮಹಿಳೆಯನ್ನು ಬಂಧಿಸಿದ್ದಾರೆ. ಕಂಪನಿಯ ನಿರ್ದೇಶಕರು ಸೇರಿಕೊಂಡು ಸ್ಟಾರ್ ಹೊಟೇಲ್ ಗಳಲ್ಲಿ ಹೂಡಿಕೆದಾರರನ್ನು ಕರೆಸಿ, ಕಾರ್ಯಕ್ರಮ ಮಾಡುತ್ತಿದ್ದರು. ಸೆಮಿನಾರ್ ಆಯೋಜಿಸುವ ಮೂಲಕ ಹೂಡಿಕೆದಾರರನ್ನು ಆಕರ್ಷಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
Delhi Police’s Economic Offences Wing (EOW) has arrested a woman who was a director of a company that allegedly duped around 1,000 people of Rs 250 crore by eliciting them to invest in their new cab aggregator project called "Hello Taxi".
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm