ಬ್ರೇಕಿಂಗ್ ನ್ಯೂಸ್
26-11-22 01:38 pm HK News Desk ಕ್ರೈಂ
ಬೇಗುಸರಾಯ್ ನ.26: ನಿಲ್ಲಿಸಿದ್ದ ರೈಲು ಇಂಜಿನ್ ಬಿಡಿ ಭಾಗಗಳನ್ನು ಕದಿಯಲು ಕಳ್ಳರು ಹಳಿಯ ಅಡಿಭಾಗದಿಂದಲೇ ಸುರಂಗ ಕೊರೆದ ಘಟನೆ ಬಿಹಾರದ ಬೇಗುಸರಾಯ್ನಲ್ಲಿ ನಡೆದಿದೆ.
ಬಿಹಾರದ ಬೇಗುಸರಾಯ್ ಜಿಲ್ಲೆಯ ಗರ್ಹರಾ ರೈಲ್ವೇ ಯಾರ್ಡ್ಗೆ ಕಳ್ಳರ ಗುಂಪೊಂದು ಸುರಂಗ ಕೊರೆದು ರಿಪೇರಿಗಾಗಿ ಯಾರ್ಡ್ನಲ್ಲಿ ಇರಿಸಲಾಗಿದ್ದ ರೈಲಿನ ಎಂಜಿನ್ ಅನ್ನು ಭಾಗಶಃ ಕದ್ದಿದ್ದಾರೆ. ರೈಲ್ವೇ ಯಾರ್ಡ್ಗೆ ದುರಸ್ತಿಗಾಗಿ ಇರಿಸಲಾಗಿದ್ದ ರೈಲು ಎಂಜಿನ್ ಕಳ್ಳತನಕ್ಕೆ ಸಂಬಂಧಿಸಿ ಸ್ಥಳೀಯ ಬರೌನಿ ಪೊಲೀಸ್ ಠಾಣೆಯಲ್ಲಿ ಕಳೆದ ವಾರ ಪ್ರಕರಣ ದಾಖಲಾಗಿತ್ತು. ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ವಿಚಾರಣೆ ವೇಳೆ, ರೈಲ್ವೇ ಯಾರ್ಡ್ಗೆ ಸುರಂಗ ಕೊರೆದು, ಅದರ ಮೂಲಕ ಇಂಜಿನ್ ಬಿಡಿ ಭಾಗಗಳು ಮತ್ತು ಇತರ ವಸ್ತುಗಳನ್ನು ಗೋಣಿಚೀಲಗಳಲ್ಲಿ ಸಾಗಿಸುತ್ತಿದ್ದಾಗಿ ತಿಳಿಸಿದ್ದಾರೆ.
ಬಂಧಿತರು ವಿಚಾರಣೆಯಲ್ಲಿ ಗುಜರಿ ಗೋಡೌನ್ ಬಗ್ಗೆಯೂ ತಿಳಿಸಿದ್ದು, ಮುಜಫರ್ಪುರ ಜಿಲ್ಲೆಯ ಪ್ರಭಾತ್ ನಗರ ಪ್ರದೇಶದಲ್ಲಿನ ಸ್ಕ್ರ್ಯಾಪ್ ಗೋಡೌನ್ನಲ್ಲಿ ಶೋಧ ನಡೆಸಲಾಗಿದೆ. ಅಲ್ಲಿ ಪೊಲೀಸರು ರೈಲುಗಳಲ್ಲಿ ಬಳಸುವ ಉಪಕರಣಗಳನ್ನು ಹೊಂದಿದ್ದ 13 ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ.
![]()
ವಶಪಡಿಸಿಕೊಂಡ ವಸ್ತುಗಳಲ್ಲಿ ಎಂಜಿನ್ ಭಾಗಗಳು, ವಿಂಟೇಜ್ ರೈಲು ಎಂಜಿನ್ಗಳ ಚಕ್ರಗಳು ಮತ್ತು ಭಾರವಾದ ಕಬ್ಬಿಣದ ಬಿಡಿಭಾಗಗಳು ಸೇರಿವೆ. ಸದ್ಯ ಸ್ಕ್ರ್ಯಾಪ್ ಗೋಡೌನ್ ಮಾಲೀಕರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಪೊಲೀಸರ ಪ್ರಕಾರ, ಈ ಗ್ಯಾಂಗ್ ಸ್ಟೀಲ್ ಬ್ರಿಡ್ಜ್ಗಳನ್ನು ಬಿಚ್ಚುವುದು ಮತ್ತು ಅವುಗಳ ಭಾಗಗಳನ್ನು ಕದಿಯುವಲ್ಲಿ ಸಹ ತೊಡಗಿಸಿಕೊಂಡಿದೆ. ಕಳೆದ ವರ್ಷ, ಸಮಸ್ತಿಪುರ ಲೋಕೋ ಡೀಸೆಲ್ ಶೆಡ್ನ ರೈಲ್ವೇ ಇಂಜಿನಿಯರ್ ಒಬ್ಬರನ್ನು ಪುರ್ನಿಯಾ ನ್ಯಾಯಾಲಯದ ಆವರಣದಲ್ಲಿ ಇರಿಸಲಾಗಿದ್ದ ಹಳೆಯ ಸ್ಟೀಮ್ ಎಂಜಿನ್ ಅನ್ನು ಮಾರಾಟ ಮಾಡಿದ ಆರೋಪದಲ್ಲಿ ಅಮಾನತು ಮಾಡಲಾಗಿತ್ತು.
A group of unidentified men dug a tunnel to the Garhara railway yard in Bihar's Begusarai district and stole an entire diesel engine of a train, which was kept at the yard for repairs, part by part, said police on Friday. P S Dubey, the inspector of Railway Protection Force (RPF), Muzaffarpur, said three people were arrested after a case was registered last week at the Barauni police station for the theft of the diesel engine brought for repairs to the Garhara yard.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm