ಬ್ರೇಕಿಂಗ್ ನ್ಯೂಸ್
26-11-22 10:05 pm Mangalore Correspondent ಕ್ರೈಂ
ಸುಳ್ಯ, ನ.26 : ಪತ್ನಿಯನ್ನು ಕೊಲೆಗೈದು ಶವವನ್ನು ಗೋಣಿಚೀಲದಲ್ಲಿ ತುಂಬಿಸಿಟ್ಟು ಓಡಿ ಹೋಗಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.
ಸುಳ್ಯದ ಬೀರಮಂಗಲದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಪಶ್ಚಿಮ ಬಂಗಾಲದ ಇಮ್ರಾನ್ ಶೇಖ್ ಎಂಬಾತ ತನ್ನ ಪತ್ನಿಯನ್ನು ಕೊಂದು ಗೋಣಿಯಲ್ಲಿ ತುಂಬಿಸಿಟ್ಟು ಪರಾರಿಯಾಗಿದ್ದ. ಬಾರ್ ಅಂಡ್ ರೆಸ್ಟೋರೆಂಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ತನ್ನ ಪತ್ನಿ ಗರ್ಭಿಣಿಯಾಗಿದ್ದು ಆಕೆಯನ್ನು ಊರಲ್ಲಿ ಬಿಟ್ಟು ಬರುವುದಾಗಿ ಹೊಟೇಲ್ ಮಾಲಕರಲ್ಲಿ ಹೇಳಿದ್ದ. ಆದರೆ ಈ ನಡುವೆ, ಇಮ್ರಾನ್ ಹೇಳದೆ ಕೇಳದೆ ನಾಪತ್ತೆಯಾಗಿದ್ದ. ಆತನ ಮನೆಯಲ್ಲಿ ಪತ್ನಿ ಇದ್ದ ಬಗ್ಗೆ ತಿಳಿದಿದ್ದರಿಂದ ಹೊಟೇಲಿನ ಇತರ ಕೆಲಸಗಾರರು ಮನೆ ಮಾಲೀಕರಿಗೆ ಕೇಳಿದ್ದರು. ಆದರೆ ಮನೆಗೆ ಬೀಗ ಹಾಕಲಾಗಿತ್ತು.
ಬಳಿಕ ಪೊಲೀಸರಿಗೆ ತಿಳಿಸಲಾಗಿ ಮನೆ ಬೀಗ ಒಡೆದು ನೋಡಿದಾಗ ಒಳಭಾಗದಲ್ಲಿ ಗೋಣಿಚೀಲದಲ್ಲಿ ಯುವತಿಯ ಶವ ಸಿಕ್ಕಿತ್ತು. ಟಾಯ್ಲೆಟ್ ಕೋಣೆಯಲ್ಲಿ ಗೋಣಿ ಚೀಲ ಇಡಲಾಗಿತ್ತು. ಪೊಲೀಸರು ಮತ್ತು ಸ್ಥಳೀಯರು ಇಮ್ರಾನ್ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದರು. ಅದರಂತೆ, ಸುಳ್ಯ ಪೊಲೀಸರು ಆರೋಪಿ ಇಮ್ರಾನ್ ಶೇಖ್ ಬಗ್ಗೆ ಹುಡುಕಾಟ ನಡೆಸಿದ್ದಾರೆ. ಆತ ಪಶ್ಚಿಮ ಬಂಗಾಳ ತೆರಳಿರುವ ಬಗ್ಗೆ ಮಾಹಿತಿ ಪಡೆದು ಅಲ್ಲಿನ ಪೊಲೀಸರ ಸಹಾಯ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ.
ಪತ್ನಿಯನ್ನು ಕೊಂದು ಗೋಣಿಯಲ್ಲಿ ತುಂಬಿಟ್ಟು ಪರಾರಿಯಾಗಿದ್ದ ಇಮ್ರಾನ್ ತನ್ನ ಊರಿಗೆ ಹೋಗಿದ್ದ ಎನ್ನಲಾಗಿದೆ. ತನಿಖೆ ನಡೆಸಿದ ಸುಳ್ಯ ಪೊಲೀಸರು ಅಲ್ಲಿನ ಪೋಲೀಸರ ಸಹಾಯ ಪಡೆದು ಬಂಧಿಸಿ, ಸುಳ್ಯಕ್ಕೆ ಕರೆತಂದಿರುವುದಾಗಿ ತಿಳಿದು ಬಂದಿದೆ. ಎಂಟು ತಿಂಗಳ ಹಿಂದೆ ಪತ್ನಿಯೆಂದು ಹೇಳಿ ಯುವತಿಯನ್ನು ಪಶ್ಚಿಮ ಬಂಗಾಳದಿಂದ ಕರೆತಂದಿದ್ದ. ಯಾಕಾಗಿ ಕೊಲೆ ಮಾಡಿದ್ದಾನೆ, ಆಕೆ ಗರ್ಭಿಣಿಯಾಗಿದ್ದಳೇ ಎಂಬ ಬಗ್ಗೆ ಪೊಲೀಸ್ ತನಿಖೆಯಲ್ಲಿ ತಿಳಿದುಬರಬೇಕು.
Police arrested a man, accused of killing his wife and stuffing her body into a gunny bag before escaping from the spot. Imran was working in a hotel in Sullia and used to reside in a rented house at Beeramangala for the past seven months. Few days ago, he told his employer that he is leaving to native place. Imran Sheikh, native of West Bengal is the accused arrested by Sullia police with the help of police of West Bengal. He was brought to Sullia on November 24.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm