ಬ್ರೇಕಿಂಗ್ ನ್ಯೂಸ್
14-10-20 05:58 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 14: ಕೋಣಾಜೆ ಠಾಣೆ ವ್ಯಾಪ್ತಿಯ ಹೂಹಾಕುವ ಕಲ್ಲು ಸಮೀಪದ ಬೆಳ್ಳೇರಿ ಬಳಿ ಮಹಿಳೆಯನ್ನು ಅತ್ಯಾಚಾರಗೈದು ಕೊಲೆ ಮಾಡಿದ ಪ್ರಕರಣ ತಿರುವು ಪಡೆದುಕೊಂಡಿದ್ದು, ಘಟನೆಗೆ ಸಂಬಂಧಿಸಿ ಪ್ರಮುಖ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಸಕಲೇಶಪುರ ಮೂಲದ ಮಹಮ್ಮದ್ ಅಶ್ರಫ್(30) ಎಂದು ಗುರುತಿಸಲಾಗಿದೆ. ಈತ ವಿಹಾಹಿತನಾಗಿದ್ದು ಇಬ್ಬರು ಪುತ್ರಿಯರಿದ್ದಾರೆ. ಬಾಕ್ರಬೈಲಿನ ಪಾತೂರು ನಿವಾಸಿ ಯುವತಿಯನ್ನು ಮದುವೆಯಾಗಿದ್ದ ಅಶ್ರಫ್, ಅಲ್ಲಿಯೇ ವಾಸವಿದ್ದ. ಸ್ಥಳೀಯವಾಗಿ ಕೂಲಿ ಕೆಲಸಕ್ಕೂ ಹೋಗುತ್ತಿದ್ದ. ಇತ್ತೀಚೆಗೆ ಮಹಿಳೆಯ ಸೋದರನ ಮನೆಗೆ ಕೂಲಿ ಕೆಲಸಕ್ಕೆ ಹೋಗಿದ್ದ ವೇಳೆ ಮಹಿಳೆ ಒಂಟಿಯಾಗಿರುವ ವಿಷಯ ತಿಳಿದುಬಂದಿತ್ತು. ಹೀಗಾಗಿ ಮಹಿಳೆಯ ಮನೆಗೆ ಕನ್ನ ಹಾಕಿದ್ದಲ್ಲದೆ, ಅಡ್ಡ ಬಂದ ಮಹಿಳೆಯ ಮೇಲೆ ಹಲ್ಲೆಗೈದು ಅತ್ಯಾಚಾರ ಮಾಡಿದ್ದ. ಕೊನೆಗೆ ಮಹಿಳೆಯನ್ನು ಕೊಲೆಗೈದು ಪ್ರಕರಣ ಗೊತ್ತಾಗಬಾರದೆಂದು ಬೆಂಕಿ ಕೊಟ್ಟು ಸುಟ್ಟು ಹಾಕಿದ್ದ. ಆನಂತರ ಮನೆಯಲ್ಲಿ ಸಿಕ್ಕಿದ್ದ ಸ್ವಲ್ಪ ಚಿನ್ನ ಮತ್ತು ನಗದನ್ನು ದೋಚಿಕೊಂಡು ಹೋಗಿದ್ದ.
ಪ್ರಕರಣದ ಬಳಿಕ ಸಾದಾ ಸೀದ ಎನ್ನುವಂತಿದ್ದ ಅಶ್ರಫ್ ನನ್ನು ಗುಮಾನಿ ಮೇರೆಗೆ ವಶಕ್ಕೆ ಪಡೆದು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ವಿಚಾರಣೆಯಲ್ಲಿ ತನ್ನ ಕೃತ್ಯವನ್ನು ಆರೋಪಿ ಒಪ್ಪಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಬೆಳ್ಳೇರಿಯ ಅವಿವಾಹಿತೆ ಮಹಿಳೆ ಕುಸುಮ(53) ತಮ್ಮ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು. ಸೆ.26 ರಂದು ಮಹಿಳೆಯ ಸಹೋದರ ಕರೆ ಮಾಡಿದಾಗ ಫೋನ್ ರಿಸೀವ್ ಮಾಡದ್ದರಿಂದ ಸ್ಥಳೀಯರಲ್ಲಿ ಹೋಗಿ ನೋಡುವಂತೆ ತಿಳಿಸಿದ್ದರೆನ್ನಲಾಗಿದೆ. ಈ ಸಂದರ್ಭದಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ಘಟನೆ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶವಕ್ಕೆ ಮನೆಯೊಳಗೇ ಬೆಂಕಿ ಹಾಕಿದ್ದರಿಂದ ಅರ್ಧ ಸುಟ್ಟ ರೀತಿಯಲ್ಲಿತ್ತು. ಅಲ್ಲದೆ, ಮನೆಯ ಕರ್ಟನ್ ಕೂಡ ಹೊತ್ತಿಕೊಂಡಿತ್ತು. ಅತ್ಯಾಚಾರ, ಕೊಲೆಯೆಂದು ಸುದ್ದಿಯೂ ಹಬ್ಬಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳೀಯ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಮನೆಯ ಆಸುಪಾಸಿನಲ್ಲಿ ಕೂಲಿ ಕೆಲಸಕ್ಕೆ ಬರುತ್ತಿದ್ದವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಹಂತಕ ಸಿಕ್ಕಿಬಿದ್ದಿದ್ದಾನೆ.
Konaje police have succeeded in arresting the accused who allegedly raped and murdered a lady from Belleri in Balepuni village, Bantwal taluk.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am