ಬ್ರೇಕಿಂಗ್ ನ್ಯೂಸ್
14-10-20 05:58 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 14: ಕೋಣಾಜೆ ಠಾಣೆ ವ್ಯಾಪ್ತಿಯ ಹೂಹಾಕುವ ಕಲ್ಲು ಸಮೀಪದ ಬೆಳ್ಳೇರಿ ಬಳಿ ಮಹಿಳೆಯನ್ನು ಅತ್ಯಾಚಾರಗೈದು ಕೊಲೆ ಮಾಡಿದ ಪ್ರಕರಣ ತಿರುವು ಪಡೆದುಕೊಂಡಿದ್ದು, ಘಟನೆಗೆ ಸಂಬಂಧಿಸಿ ಪ್ರಮುಖ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಸಕಲೇಶಪುರ ಮೂಲದ ಮಹಮ್ಮದ್ ಅಶ್ರಫ್(30) ಎಂದು ಗುರುತಿಸಲಾಗಿದೆ. ಈತ ವಿಹಾಹಿತನಾಗಿದ್ದು ಇಬ್ಬರು ಪುತ್ರಿಯರಿದ್ದಾರೆ. ಬಾಕ್ರಬೈಲಿನ ಪಾತೂರು ನಿವಾಸಿ ಯುವತಿಯನ್ನು ಮದುವೆಯಾಗಿದ್ದ ಅಶ್ರಫ್, ಅಲ್ಲಿಯೇ ವಾಸವಿದ್ದ. ಸ್ಥಳೀಯವಾಗಿ ಕೂಲಿ ಕೆಲಸಕ್ಕೂ ಹೋಗುತ್ತಿದ್ದ. ಇತ್ತೀಚೆಗೆ ಮಹಿಳೆಯ ಸೋದರನ ಮನೆಗೆ ಕೂಲಿ ಕೆಲಸಕ್ಕೆ ಹೋಗಿದ್ದ ವೇಳೆ ಮಹಿಳೆ ಒಂಟಿಯಾಗಿರುವ ವಿಷಯ ತಿಳಿದುಬಂದಿತ್ತು. ಹೀಗಾಗಿ ಮಹಿಳೆಯ ಮನೆಗೆ ಕನ್ನ ಹಾಕಿದ್ದಲ್ಲದೆ, ಅಡ್ಡ ಬಂದ ಮಹಿಳೆಯ ಮೇಲೆ ಹಲ್ಲೆಗೈದು ಅತ್ಯಾಚಾರ ಮಾಡಿದ್ದ. ಕೊನೆಗೆ ಮಹಿಳೆಯನ್ನು ಕೊಲೆಗೈದು ಪ್ರಕರಣ ಗೊತ್ತಾಗಬಾರದೆಂದು ಬೆಂಕಿ ಕೊಟ್ಟು ಸುಟ್ಟು ಹಾಕಿದ್ದ. ಆನಂತರ ಮನೆಯಲ್ಲಿ ಸಿಕ್ಕಿದ್ದ ಸ್ವಲ್ಪ ಚಿನ್ನ ಮತ್ತು ನಗದನ್ನು ದೋಚಿಕೊಂಡು ಹೋಗಿದ್ದ.
ಪ್ರಕರಣದ ಬಳಿಕ ಸಾದಾ ಸೀದ ಎನ್ನುವಂತಿದ್ದ ಅಶ್ರಫ್ ನನ್ನು ಗುಮಾನಿ ಮೇರೆಗೆ ವಶಕ್ಕೆ ಪಡೆದು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ವಿಚಾರಣೆಯಲ್ಲಿ ತನ್ನ ಕೃತ್ಯವನ್ನು ಆರೋಪಿ ಒಪ್ಪಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಬೆಳ್ಳೇರಿಯ ಅವಿವಾಹಿತೆ ಮಹಿಳೆ ಕುಸುಮ(53) ತಮ್ಮ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು. ಸೆ.26 ರಂದು ಮಹಿಳೆಯ ಸಹೋದರ ಕರೆ ಮಾಡಿದಾಗ ಫೋನ್ ರಿಸೀವ್ ಮಾಡದ್ದರಿಂದ ಸ್ಥಳೀಯರಲ್ಲಿ ಹೋಗಿ ನೋಡುವಂತೆ ತಿಳಿಸಿದ್ದರೆನ್ನಲಾಗಿದೆ. ಈ ಸಂದರ್ಭದಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ಘಟನೆ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶವಕ್ಕೆ ಮನೆಯೊಳಗೇ ಬೆಂಕಿ ಹಾಕಿದ್ದರಿಂದ ಅರ್ಧ ಸುಟ್ಟ ರೀತಿಯಲ್ಲಿತ್ತು. ಅಲ್ಲದೆ, ಮನೆಯ ಕರ್ಟನ್ ಕೂಡ ಹೊತ್ತಿಕೊಂಡಿತ್ತು. ಅತ್ಯಾಚಾರ, ಕೊಲೆಯೆಂದು ಸುದ್ದಿಯೂ ಹಬ್ಬಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳೀಯ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಮನೆಯ ಆಸುಪಾಸಿನಲ್ಲಿ ಕೂಲಿ ಕೆಲಸಕ್ಕೆ ಬರುತ್ತಿದ್ದವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಹಂತಕ ಸಿಕ್ಕಿಬಿದ್ದಿದ್ದಾನೆ.
Konaje police have succeeded in arresting the accused who allegedly raped and murdered a lady from Belleri in Balepuni village, Bantwal taluk.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:27 am
HK News Staffer
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm