ಬ್ರೇಕಿಂಗ್ ನ್ಯೂಸ್
06-12-22 04:21 pm HK News Desk ಕ್ರೈಂ
ನವದೆಹಲಿ, ಡಿ.6: ಆಸ್ತಿ ವಿವಾದಕ್ಕೆ ಸಂಬಂಧಿಸಿ 24 ವರ್ಷದ ಸೋದರ ಸಂಬಂಧಿಯ ರುಂಡವನ್ನು 20 ವರ್ಷದ ಬುಡಕಟ್ಟು ವ್ಯಕ್ತಿ ಹಾಗೂ ಆತನ ಸ್ನೇಹಿತರು ಕತ್ತರಿಸಿರುವ ಘಟನೆ ಜಾರ್ಖಂಡ್ ರಾಜ್ಯದ ಕುಂತಿ ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಸ್ನೇಹಿತ ಆ ರುಂಡದೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
ಕುಂತಿ ಜಿಲ್ಲೆಯ ಮುರ್ಹು ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಈ ಸಂಬಂಧ ಡಿಸೆಂಬರ್ 2 ರಂದು ಮೃತನ ತಂದೆ ದೂರು ದಾಖಲಿಸಿದ ನಂತರ ಪ್ರಮುಖ ಆರೋಪಿ, ಆತನ ಹೆಂಡತಿ ಸೇರಿ ಆರು ಮಂದಿಯನ್ನು ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತನ್ನ ಮಗ ಕಾನು ಮುಂಡಾ ಮನೆಯಲ್ಲಿ ಒಬ್ಬನೇ ಇದ್ದಾಗ ಆತನ ಸೋದರ ಸಂಬಂಧಿ ಸಾಗರ್ ಮುಂಡಾ ಹಾಗೂ ಆತನ ಸ್ನೇಹಿತರು ಅಪಹರಿಸಿರುವುದಾಗಿ ಗ್ರಾಮಸ್ಥರು ತಿಳಿಸಿದ್ದು ಕೊಲೆಯಾದ ವ್ಯಕ್ತಿಯ ತಂದೆ ದೂರಿನಲ್ಲಿ ಹೇಳಿದ್ದರು. ಕಾನು ಪತ್ತೆಯಾಗದಿದ್ದಾಗ ಅವರ ತಂದೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ.
ಕುಂತಿ ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಅಮಿತ್ ಕುಮಾರ್ ನೇತೃತ್ವದಲ್ಲಿ ಆರೋಪಿಗಳ ಪತ್ತೆಗಾಗಿ ತಂಡವೊಂದನ್ನು ರಚಿಸಲಾಗಿತ್ತು. ಆರೋಪಿಗಳ ಬಂಧನ ನಂತರ ಕುಮಾಂಗ್ ಗೊಪ್ಲಾ ಅರಣ್ಯ ಪ್ರದೇಶದಲ್ಲಿ ಮೃತದೇಹ ಪತ್ತೆಯಾದರೆ, ಅಲ್ಲಿಂದ 15 ಕಿ.ಮೀ ದೂರದಲ್ಲಿರುವ ದುಲ್ವಾ ತುಂಗ್ರಿ ಅರಣ್ಯದಲ್ಲಿ ರುಂಡ ಪತ್ತೆಯಾಗಿದೆ ಎಂದು ಮುರ್ಹು ಪೊಲೀಸ್ ಠಾಣಾಧಿಕಾರಿ ಚುಂಡಮಣಿ ತುಡು ಹೇಳಿದ್ದಾರೆ.
ಆರೋಪಿಗಳು ಕಡಿದ ರುಂಡದೊಂದಿಗೆ ಸೆಲ್ಫಿ ತೆಗೆದುಕೊಂಡು ವಿಕೃತಿ ಮೆರೆದಿದ್ದಾರೆ. ಆರೋಪಿಗಳಿಂದ ಐದು ಮೊಬೈಲ್ ಫೋನ್ ಗಳು, ಮಾರಕಾಸ್ತ್ರಗಳು, ಕೊಡಲಿ ಮತ್ತು ಒಂದು ಕಾರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ. ತುಂಡು ಭೂಮಿಗಾಗಿ ಆರೋಪಿಗಳು ಮತ್ತು ಕೊಲೆಯಾದ ಯುವಕರ ಕುಟುಂಬದ ಮಧ್ಯೆ ದ್ವೇಷವಿತ್ತು. ಇದೇ ಕಾರಣದಿಂದ ಆತನ ತಲೆ ಕಡಿಯಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
A 20-year-old man allegedly beheaded his 24-year-old cousin after abducting him over a land dispute, after which the friends of the accused even took a selfie with the severed head in Jharkhand's Khunti district, said the police on Monday.Following a complaint by the father of the deceased in Murhu village on Friday, cops arrested six people, including the main accused and his wife.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm