ಬ್ರೇಕಿಂಗ್ ನ್ಯೂಸ್
13-12-22 11:56 am Mangalore Correspondent ಕ್ರೈಂ
ಉಳ್ಳಾಲ, ಡಿ.13 : ತೆಂಗಿನ ಕಾಯಿ ಕೀಳಲೆಂದು ಬಂದ ಪರಿಚಯಸ್ಥ ವ್ಯಕ್ತಿಯೊಬ್ಬ ಮನೆಯಲ್ಲಿ ಒಬ್ಬಂಟಿಯಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದು ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಬಶೀರ್(29)ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ. ವೃತ್ತಿಯಲ್ಲಿ ಪ್ಲಂಬರ್ ಆಗಿರುವ ಬಶೀರ್ ಸೋಮವಾರ ಸಂಜೆ ದೇರಳಕಟ್ಟೆಯ ಸಂಬಂಧಿಕರ ಮನೆಗೆ ತೆರಳಿದ್ದು ಈ ವೇಳೆ ಪಕ್ಕದ ಪರಿಚಯಸ್ಥರ ಮನೆಗೆ ಕಾಯಿ ಕೀಳಲೆಂದು ತೆರಳಿದ್ದಾನೆ. ಮನೆಯಲ್ಲಿ ಒಬ್ಬಂಟಿಯಿದ್ದ ಬಾಲಕಿಯನ್ನ ಕೈ ಹಿಡಿದು ಎಳೆದಿದ್ದು ಬಾಲಕಿ ಕಿರುಚಾಡಿದ್ದಾಳೆ. ಬಾಲಕಿಯ ಕೂಗನ್ನ ಕೇಳಿಸಿದ ನೆರೆಹೊರೆಯವರು ಓಡಿ ಬಂದಿದ್ದು ಅದಾಗಲೇ ಆರೋಪಿ ಸ್ಥಳದಿಂದ ಓಡಿ ಪರಾರಿಯಾಗಿದ್ದ.

ಸಂತ್ರಸ್ತ ಬಾಲಕಿಯ ಕುಟುಂಬವು ಆರೋಪಿ ಬಶೀರ್ ಕುಟುಂಬಕ್ಕೆ ಆಪ್ತರಾಗಿದ್ದು ಕೆಲ ತಿಂಗಳ ಹಿಂದಷ್ಟೆ ನಡೆದಿದ್ದ ಬಶೀರನ ಸೋದರಿಯ ಮದುವೆ ಸಮಾರಂಭದಲ್ಲಿಯೂ ಭಾಗವಹಿಸಿದ್ದರು. ಬಾಲಕಿಯ ಕುಟುಂಬ ಆರೋಪಿಯ ವಿರುದ್ಧ ದೂರು ನೀಡಲು ಹಿಂಜರಿದಿದ್ದು ನೆರೆಹೊರೆಯವರ ಒತ್ತಾಯದ ಮೇರೆಗೆ ಸಂತ್ರಸ್ತ ಬಾಲಕಿಯ ಅಜ್ಜ ಕೊಣಾಜೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಆರೋಪಿಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಪೊಲೀಸರು ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಯನ್ನು ಕೂಡಲೇ ಬಂಧಿಸಬೇಕೆಂದು ಬಜರಂಗದಳ ಆಗ್ರಹಿಸಿದೆ. ಹಿಂದು ಸಮಾಜದ ಮೇಲೆ ಅನ್ಯಮತೀಯರು ಪದೇ ಪದೇ ನಂಬಿಕೆ ದ್ರೋಹ ಎಸಗುತ್ತಿದ್ದು ಬಾಲಕಿಗೆ ಕಿರುಕುಳ ನೀಡಿದ ಆರೋಪಿ ಬಶೀರನನ್ನ ಶೀಘ್ರ ಬಂಧಿಸುವಂತೆ ವಿಶ್ವ ಹಿಂದು ಪರಿಷತ್, ಬಜರಂಗದಳದ ಪ್ರಮುಖರಾದ ಗೋಪಾಲ್ ಕುತ್ತಾರು, ಪದ್ಮನಾಭ ಮರ್ಕೆದು ಆಗ್ರಹಿಸಿದ್ದಾರೆ.
Mangalore Girl sexually harassed in Ullal, Bajarang dal members demand for arrest, POSCO case registered.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm