ಬ್ರೇಕಿಂಗ್ ನ್ಯೂಸ್
21-12-22 08:56 pm HK News Desk ಕ್ರೈಂ
ಗದಗ, ಡಿ.21 : ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕನೊಬ್ಬ ನಾಲ್ಕನೇ ತರಗತಿ ವಿದ್ಯಾರ್ಥಿಯನ್ನು ಹತ್ಯೆಗೈದು ಇಬ್ಬರು ಶಿಕ್ಷಕರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಘಟನೆ ಭಾರೀ ಸಂಚಲನ ಉಂಟು ಮಾಡಿತ್ತು. ಶಿಕ್ಷಕನಿಗೆ ಅಂಥ ಹಗೆಯೇನಿತ್ತು ಎನ್ನುವ ಪ್ರಶ್ನೆ, ಅನುಮಾನಗಳು ಕೇಳಿಬಂದಿದ್ದವು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಕೊಲೆ ಹಿಂದಿನ ಸತ್ಯವನ್ನು ಬಯಲಿಗೆಳೆದಿದ್ದಾರೆ. ಶಿಕ್ಷಕಿ ಮೇಲಿನ ಪ್ರೇಮವೇ ಕೊಲೆಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಎಸ್ಪಿ ಶಿವಪ್ರಕಾಶ ದೇವರಾಜು, ಕೊಲೆ ಆರೋಪಿ ಮುತ್ತು ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿದ್ದ. ಮೃತ ಬಾಲಕನ ತಾಯಿ ಗೀತಾ ಬಾರಕೇರಿ ಮೇಲೆ ಹೊಂದಿದ್ದ ಅತಿರೇಕದ ಪ್ರೇಮವೇ ಕೊಲೆಗೆ ಕಾರಣ ಆಗಿರಬಹುದು. ಅವರಿಬ್ಬರ ವಾಟ್ಸ್ಆ್ಯಪ್ ಸಂದೇಶಗಳಿಂದ ಇಂಥದೊಂದು ಅನುಮಾನ ವ್ಯಕ್ತವಾಗುತ್ತಿದೆ. ಈ ಬಗ್ಗೆ ಹೆಚ್ಚಿನ ವಿಚಾರಣೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಸರ್ಕಾರಿ ಶಾಲೆಯಲ್ಲಿ ಗೀತಾ ಬಾರಕೇರ, ಮುತ್ತು ಹಡಗಲಿ ಅತಿಥಿ ಶಿಕ್ಷಕರಾಗಿದ್ದರು. ಸಂಗನಗೌಡ ಪಾಟೀಲ ಅದೇ ಶಾಲೆಯ ಇನ್ನೊಬ್ಬ ಶಿಕ್ಷಕ. ಗೀತಾ ಬಾರಕೇರ ಅವರ ಪುತ್ರ ಭರತ್ ಅದೇ ಶಾಲೆಯಲ್ಲಿ ನಾಲ್ಕನೇ ತರಗತಿಯ ವಿದ್ಯಾರ್ಥಿಯಾಗಿದ್ದ. ಗೀತಾ ಬಾರಕೇರ ಮತ್ತು ಮುತ್ತು ಹಡಗಲಿ ನಡುವೆ ವಾಟ್ಸ್ಆ್ಯಪ್ನಲ್ಲಿ ಸಂದೇಶಗಳು ವಿನಿಮಯ ಆಗಿದ್ದವು. ಸಂಗನಗೌಡ ಪಾಟೀಲ ಜತೆಗೂ ಗೀತಾ ಸಲುಗೆ ಹೊಂದಿದ್ದಳು. ಇತ್ತೀಚೆಗೆ ಶಾಲೆ ವತಿಯಿಂದ ಶೈಕ್ಷಣಿಕ ಪ್ರವಾಸಕ್ಕೆ ಹೋದ ಸಂದರ್ಭದಲ್ಲಿ ಗೀತಾ ಮತ್ತು ಸಂಗನಗೌಡ ನಡುವಿನ ಸಲುಗೆ ವಿಷಯ ಮುತ್ತು ಹಡಗಲಿಗೆ ಗೊತ್ತಾಗಿ ಕ್ಯಾತೆ ತೆಗೆದಿದ್ದ ಎನ್ನುವುದು ತನಿಖೆಯಲ್ಲಿ ಗೊತ್ತಾಗಿದೆ.
ಶೈಕ್ಷಣಿಕ ಪ್ರವಾಸದ ನಂತರದ ದಿನಗಳಲ್ಲಿ ಮುತ್ತು ಹಡಗಲಿ, ಗೀತಾ ಮತ್ತು ಸಂಗನಗೌಡ ಮೇಲೆ ಕತ್ತಿ ಮಸೆಯುತ್ತಿದ್ದ. ಸೋಮವಾರ ಬೆಳಗ್ಗೆ ಶಾಲೆಯ ಕೊಠಡಿಯಿಂದ ಬಾಲಕ ಭರತನನ್ನು ಹೊರಗೆ ಕರೆದು ಹಲ್ಲೆ ನಡೆಸಿದ್ದ. ಅಲ್ಲದೆ, ಬಾಲಕನನ್ನು ಎತ್ತಿ ಗೋಡೆಗೆ ಎಸೆದು ತೀವ್ರ ಗಾಯಪಡಿಸಿದ್ದ. ಕೆಳಕ್ಕೆ ಬಿದ್ದ ಬಾಲಕನನ್ನು ಮತ್ತೆ ಎತ್ತಿ ಕೊಠಡಿಯಿಂದ ದೂರಕ್ಕೆ ಎಸೆದಿದ್ದನು. ತೀವ್ರ ರಕ್ತಸಾವ್ರದಿಂದ ಬಾಲಕ ಮೃತಪಟ್ಟಿದ್ದಾನೆ. ಬಾಲಕನ ಚೀರಾಟ ಕೇಳಿ ತಪ್ಪಿಸಲು ಓಡಿಬಂದ ಗೀತಾಳನ್ನು ಬೆದರಿಸಿ ಬೆನ್ನತ್ತಿ ತಲೆಗೆ ಸಲಿಕೆಯಿಂದ ಹೊಡೆದಿದ್ದಾನೆ. ಸಂಗನಗೌಡ ಪಾಟೀಲ್ ಮೇಲೂ ಹಲ್ಲೆ ಮಾಡಿದ್ದಾನೆ. ಪ್ರಶ್ನಿಸಲು ಬಂದ ಮುಖ್ಯಶಿಕ್ಷಕ ಬಸವರಾಜ ಯಾವಗಲ್ ಮೇಲೂ ಹಲ್ಲೆಗೆ ಮುಂದಾಗಿದ್ದ. ಅಷ್ಟರಲ್ಲಿ ಮುಖ್ಯ ಶಿಕ್ಷಕರು ತಪ್ಪಿಸಿಕೊಂಡಿದ್ದಾರೆ ಎಂದು ಘಟನೆ ಕುರಿತು ಎಸ್ಪಿ ವಿವರಿಸಿದ್ದಾರೆ.
ತನ್ನ ಜೊತೆಗಿದ್ದ ಪ್ರೀತಿಯನ್ನು ಬದಿಗೊತ್ತಿ ಶಿಕ್ಷಕಿ ಗೀತಾ ಬೇರೊಬ್ಬನ ಜೊತೆ ಸುತ್ತಾಟಕ್ಕೆ ಮುಂದಾಗಿದ್ದರಿಂದ ಭಗ್ನಪ್ರೇಮಿ ಮುತ್ತು ಹಡಗಲಿ ಅದರ ಸಿಟ್ಟನ್ನು ಬಾಲಕನ ಮೇಲೆ ತೀರಿಸಿಕೊಂಡಿದ್ದಾನೆ ಎನ್ನಲಾಗುತ್ತಿದೆ.
A class 4 student died on Monday, December 19, in Karnataka’s Gadag district after he was beaten up with an iron rod and then thrown down from the first floor by his teacher.The Times of India identified the accused as Muthappa Yellapa Hadagali (33), who taught at the Adarsh Primary School in Hadli village.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm