ಬ್ರೇಕಿಂಗ್ ನ್ಯೂಸ್
24-12-22 11:58 am Mangalore Correspondent ಕ್ರೈಂ
ಮೂಡುಬಿದ್ರೆ, ಡಿ.24: ಮನೆಯೊಂದರಲ್ಲಿ ಅಕ್ರಮವಾಗಿ ದನಗಳನ್ನು ಕಡಿದು ಮಾಂಸ ಮಾಡುತ್ತಿದ್ದ ಜಾಗಕ್ಕೆ ಬೆಳ್ಳಂಬೆಳಗ್ಗೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರ ಜೊತೆಗೆ ದಾಳಿ ನಡೆಸಿದ ಘಟನೆ ಆಲಂಗಾರಿನಲ್ಲಿ ನಡೆದಿದೆ.
ಅಲಂಗಾರು ಆಶ್ರಯ ಕಾಲೋನಿಯಲ್ಲಿರುವ ಗಿಲ್ಬರ್ಟ್ ಮಿರಾಂಡ ಎಂಬವನ ಮನೆಯಲ್ಲಿ ಅಕ್ರಮ ಕಸಾಯಿ ಖಾನೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದಿದ್ದ ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರು ಬೆಳಗ್ಗೆ ನಾಲ್ಕು ಗಂಟೆಗೆ ಎಂಟ್ರಿ ಕೊಟ್ಟಿದ್ದಾರೆ. ಈ ವೇಳೆ, ಮನೆಯ ಒಳಗಿನ ಕೋಣೆಯಲ್ಲಿ ದನವನ್ನು ಕಡಿದು ಮಾಂಸ ಮಾಡುತ್ತಿದ್ದರು. ಇದಲ್ಲದೆ, ಕಡಿಯಲು ತಂದಿದ್ದ ನಾಲ್ಕು ಸಣ್ಣ ಪ್ರಾಯದ ಕರುಗಳನ್ನು ಒಳಗಡೆ ಕಟ್ಟಿದ್ದರು. ಭಾರೀ ಪ್ರಮಾಣದ ದನದ ಮಾಂಸ ಮತ್ತು ನಾಲ್ಕು ಗೋವುಗಳನ್ನು ವಶಕ್ಕೆ ಪಡೆಯಲಾಗಿದೆ.



ಆನಂತರ, ಮನೆ ಪಕ್ಕದ ತೋಟದಲ್ಲಿ ಅಗೆದು ನೋಡಿದಾಗ ಹಲವಾರು ದನದ ತಲೆಯ ಭಾಗಗಳು ಪತ್ತೆಯಾಗಿವೆ. ಆಲಂಗಾರು ನಿವಾಸಿಗಳಾದ ಕ್ಲಾರಿನ್ ಆಲ್ವಿನ್ ಮತ್ತು ಗಿಲ್ಬರ್ಟ್ ಮಿರಾಂಡ ಬಂಧಿತರು. ಮೂಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2020ರ ಗೋಹತ್ಯೆ ನಿಷೇಧ ಕಾಯ್ದೆ ಪ್ರಕಾರ, ಲೈಸನ್ಸ್ ರಹಿತ ಯಾವುದೇ ಜಾಗದಲ್ಲಿ ಗೋವುಗಳನ್ನು ಕಡಿಯುವಂತಿಲ್ಲ. ಅಕ್ರಮ ಕಸಾಯಿಖಾನೆ ಪತ್ತೆಯಾದಲ್ಲಿ ಆ ಜಾಗವನ್ನು ಸರಕಾರದ ವಶಕ್ಕೆ ಪಡೆಯಬೇಕು. ಮನೆಯಾಗಿದ್ದರೆ, ಕಟ್ಟಡ ಕಂದಾಯ ಇಲಾಖೆಗೆ ಸೇರುತ್ತದೆ. ಈ ರೀತಿಯ ಕಠಿಣ ಕ್ರಮದಿಂದಾಗಿ ಅಕ್ರಮ ಕಸಾಯಿಖಾನೆ ಕಡಿಮೆಯಾಗಿತ್ತು. 13 ವಯಸ್ಸಿನ ಒಳಗಿನ ಗೋವುಗಳನ್ನು ಕಡಿಯುವಂತಿಲ್ಲ ಎಂಬ ನಿಯಮದಿಂದಾಗಿ ಅಧಿಕೃತ ಕಸಾಯಿಖಾನೆಗಳಿಗೆ ಮಾಂಸಕ್ಕಾಗಿ ಗೋವುಗಳ ಪೂರೈಕೆ ಆಗುತ್ತಿಲ್ಲ. ಗೋಹತ್ಯೆ ಕಾನೂನು ಬಂದ ಬಳಿಕ ದಕ್ಷಿಣ ಕನ್ನಡ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಅಕ್ರಮ ಗೋಹತ್ಯೆಗೆ ಕಡಿವಾಣ ಬಿದ್ದಿದೆ. ಮಂಗಳೂರು ನಗರ ವ್ಯಾಪ್ತಿಯಲ್ಲಿ ನಾಲ್ಕು ಕಡೆ ಗೋಹತ್ಯೆ ನಡೆಸಿದ ಜಾಗವನ್ನು ಸರಕಾರದ ವಶಕ್ಕೆ ಪಡೆಯಲಾಗಿದೆ.
Mangalore Illegal Sluaughter house inside home in Moodbidri, hindu jagarana vedike raids house
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm