ಬ್ರೇಕಿಂಗ್ ನ್ಯೂಸ್
24-12-22 04:36 pm HK News Desk ಕ್ರೈಂ
ಕಾನ್ಪುರ, ಡಿ.24: ಉತ್ತರ ಪ್ರದೇಶದ ಕಾನ್ಪುರದಲ್ಲಿ ಎಸ್ ಬಿಐ ಬ್ಯಾಂಕಿನ ಗೋಡೆ ಕೊರೆದು ಕಳ್ಳರು ನುಗ್ಗಿದ್ದು ಲಾಕರ್ ಒಡೆದು 1.8 ಕಿಲೋ ಗ್ರಾಮ್ ತೂಕದ ಚಿನ್ನಾಭರಣ ದೋಚಿದ್ದಾರೆ.
ಕಟ್ಟಡದ ಅಡಿಪಾಯದ ಕೆಳಗೆ ಐದು ಮೀಟರ್ ಆಳದ ವರೆಗೂ ಅಗೆದು, ಸುರಂಗ ಕೊರೆದು ಬ್ಯಾಂಕಿನ ಒಳ ನುಗ್ಗಿದ್ದಾರೆ. ಬಳಿಕ ಸ್ಟ್ರಾಂಗ್ರೂಮ್ ನುಗ್ಗಿದ ಕಳ್ಳರು, 1.8 ಕೆಜಿ ಚಿನ್ನವನ್ನು ಕಳವು ಮಾಡಿದ್ದಾರೆ. ಇದು ರಾಜ್ಯದಲ್ಲಿ ಕಳೆದ 25 ವರ್ಷಗಳಲ್ಲಿ ನಡೆದ ಅತಿದೊಡ್ಡ ಕಳ್ಳತನ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಎಂದಿನಂತೆ ಬ್ಯಾಂಕ್ಗೆ ಬಂದ ಉದ್ಯೋಗಿಗಳಿಗೆ, ಕಳ್ಳತನ ಆಗಿರುವುದು ಪತ್ತೆಯಾಗಿದೆ. ಕಳ್ಳರು ಎಂಟು ಮೀಟರ್ ಉದ್ದ, ಮೂರು ಅಡಿ ಆಳದ ಸುರಂಗವನ್ನು ತೋಡಿದ್ದಾರೆ. ಸುರಂಗದ ಹೊರಬದಿ ಪೊದೆಗಳಿಂದ ಆವೃತವಾಗಿತ್ತು. ಹೀಗಾಗಿ ಸುರಂಗ ಕೊರೆದಿರುವುದು ಬೇರೆಯವರಿಗೆ ಗೊತ್ತಾಗಿರಲಿಲ್ಲ.

"ಸುರಂಗ ಕೊರೆಯಲು ಕಳ್ಳರು ದಿನಗಳನ್ನು ತೆಗೆದುಕೊಂಡಿರಬಹುದು. ಅಷ್ಟು ನಿಖರತೆಯಿಂದ ಒಳಗಡೆ ಸರಿಯಾದ ಸ್ಥಳಕ್ಕೆ ಗುರಿ ಇಟ್ಟು ಸುರಂಗ ಮಾಡಿದ್ದಾರೆ. ಕಳ್ಳರಿಗೆ ಪ್ರಮುಖ ಮಾಹಿತಿಯನ್ನು ಒಳಗಿನವರೇ ರವಾನಿಸಿದ್ದಾರೆ ಎಂಬ ಶಂಕೆಯಿದೆ" ಎಂದು ಕಾನ್ಪುರ ಪೊಲೀಸ್ ಕಮಿಷನರ್ ಬಿಪಿ ಜೋಗ್ದಂಡ್ ಹೇಳಿದ್ದಾರೆ.

29 ಜನರು ಸಾಲಕ್ಕಾಗಿ ಅಡಮಾನವಿಟ್ಟ ಚಿನ್ನವನ್ನು ಆ ಲಾಕರ್ನಲ್ಲಿ ಇಡಲಾಗಿತ್ತು. ಲಾಕರ್ ಬಾಗಿಲು ಒಡೆಯಲು ಕಳ್ಳರು ಗ್ಯಾಸ್ ಕಟ್ಟರ್ ಬಳಸಿದ್ದಾರೆ ಎಂದು ಬ್ಯಾಂಕ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಕಳ್ಳತನದ ವೇಳೆ ಎಚ್ಚರಿಕೆಯ ಹೆಜ್ಜೆ ಇಟ್ಟಿರುವ ದರೋಡೆಕೋರರು, ಸ್ಟ್ರಾಂಗ್ರೂಮ್ನಲ್ಲಿರುವ ಏಕೈಕ ಸಿಸಿಟಿವಿ ಕ್ಯಾಮರಾವನ್ನು ಬೇರೆ ಕಡೆಗೆ ತಿರುಗಿಸಿದ್ದರು.
)
ಲಾಕರಿನಲ್ಲಿದ್ದ 1.812 ಕೆಜಿ ತೂಕದ ಎಲ್ಲಾ ಚಿನ್ನವನ್ನು ಹೊತ್ತೊಯ್ದಿರುವ ಕಳ್ಳರು ಅದರ ಪಕ್ಕದ ಲಾಕರ್ನಲ್ಲಿ ಇಟ್ಟಿದ್ದ 35 ಲಕ್ಷ ರೂಪಾಯಿ ನಗದಿನಲ್ಲಿ ಒಂದು ರೂಪಾಯಿಯನ್ನೂ ಮುಟ್ಟಿಲ್ಲ ಎನ್ನುವುದು ವಿಶೇಷ.
Thieves broke open a chest at a bank in Uttar Pradesh's Kanpur and stole gold worth ₹ 1 crore. They entered the bank's vault through a 10-feet-long tunnel, the police said today. They dug the four-feet-wide tunnel from an empty plot adjacent to the State Bank of India's Bhanuti branch, the police said.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm