ಬ್ರೇಕಿಂಗ್ ನ್ಯೂಸ್
27-12-22 01:50 pm HK News Desk ಕ್ರೈಂ
ಲಕ್ನೋ, ಡಿ.27 : ಹಿಂದು ಯುವತಿಯನ್ನು ಮದುವೆಯಾಗಿ ಮುಸ್ಲಿಂ ಆಗಿ ಮತಾಂತರಗೊಳಿಸಿದ್ದಲ್ಲದೆ, ಏಳು ವರ್ಷಗಳ ಜೀವನದ ನಂತರ ಆಕೆ ಜೊತೆ ಜಗಳವಾಡಿ ಗಂಡನೇ ವಿದ್ಯುತ್ ಶಾಕ್ ಕೊಟ್ಟು ಕೊಂದು ಹಾಕಿದ ಘಟನೆ ಉತ್ತರ ಪ್ರದೇಶದ ಲಖೀಂಪುರ್ ಜಿಲ್ಲೆಯಲ್ಲಿ ನಡೆದಿದೆ.
ಉಮಾ ಶರ್ಮಾ ಎಂಬ ಯುವತಿ ಮುಸ್ಲಿಂ ಯುವಕ ವಾಸಿಂ ಅಹ್ಮದ್ ಎಂಬವನ ಜೊತೆ ಓಡಿ ಹೋಗಿ ಮದುವೆಯಾಗಿದ್ದಳು. ನಂತರ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದಳು. ಉಮಾ ಶರ್ಮಾಳನ್ನು ಆಕೆಯ ಪತಿ ವಾಸಿಂ ಅಹ್ಮದ್ ಇಸ್ಲಾಂಗೆ ಮತಾಂತರ ಮಾಡಿದ್ದು ಅಕ್ಸಾ ಫಾತಿಮಾ ಎಂದು ಹೆಸರು ಬದಲಿಸಿದ್ದ. ಮದುವೆಯಾಗಿ ಏಳು ವರ್ಷಗಳಾಗಿದ್ದು ಇಬ್ಬರು ಗಂಡು ಮಕ್ಕಳಿದ್ದಾರೆ. ಈ ನಡುವೆ ಮನಸ್ತಾಪ ಉಂಟಾಗಿದ್ದು ಇತ್ತೀಚೆಗೆ ಮನೆಯಲ್ಲಿ ದಿನವೂ ಜಗಳ ಮಾಡುತ್ತಿದ್ದರು. ಇದೇ ಕೋಪದಲ್ಲಿ ಗಂಡ ವಾಸಿಮ್ ಅಹ್ಮದ್, ಪತ್ನಿಗೆ ಕರೆಂಟ್ ಶಾಕ್ ನೀಡಿ ಕೊಲೆ ಮಾಡಿದ್ದಾನೆ. ನಂತರ ತನ್ನ ಮನೆಯ ಕೋಣೆಯಲ್ಲಿ ಗುಂಡಿ ತೋಡಿ ಶವವನ್ನು ಹೂತು ಹಾಕಿದ್ದಾನೆ.
ಘಟನೆ ಸಂದರ್ಭದಲ್ಲಿ ವಾಸಿಮ್ ಅಹ್ಮದ್ ತಾಯಿ ಆಶಿಯಾ ಬೇಗಂ ಊರಿನಲ್ಲಿ ಇರಲಿಲ್ಲ. ಮಗಳ ಮನೆಗೆ ಹೋಗಿದ್ದರು. ಎರಡು ದಿನಗಳ ನಂತರ ಮನೆಗೆ ಬಂದ ತಾಯಿ ಆಶಿಯಾ ಸೊಸೆಯ ಬಗ್ಗೆ ವಿಚಾರಿಸಿದ್ದು ಪತ್ನಿ ಹೊರಗೆ ಹೋಗಿದ್ದಾಳೆ ಎಂದು ಮಗ ಸುಳ್ಳು ಹೇಳಿದ್ದ. ಸೊಸೆ ದಿನ ಕಳೆದರೂ ಕಾಣದಿದ್ದಾಗ ಅತ್ತೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಕೂಡಲೇ ಪೊಲೀಸರು ಮನೆಗೆ ಬಂದು ಪರಿಶೀಲನೆ ನಡೆಸಿದ್ದಾರೆ.
ಮನೆಯ ಒಳಗೆ ನೆಲ ಅಗೆದಿರುವುದನ್ನು ನೋಡಿ ಅನುಮಾನದ ಮೇಲೆ, ಪೊಲೀಸರು ಆ ಜಾಗವನ್ನು ಅಗೆದು ನೋಡಿದಾಗ ಉಮಾ ಶರ್ಮಾಳ ಮೃತದೇಹ ಹೂತಿರುವುದು ಪತ್ತೆಯಾಗಿದೆ. ಆರೋಪಿ ವಾಸಿಮ್ ಅಹ್ಮದ್ನನ್ನು ಪೊಲೀಸರು ಬಂಧಿಸಿದ್ದು ತನಿಖೆ ನಡೆಸುತ್ತಿದ್ದಾರೆ. ಲಖೀಂ ಪುರ್ ಖೇರಿ ಜಿಲ್ಲೆಯ ಹಫೀಜ್ ಪುರ್ ಗ್ರಾಮದಲ್ಲಿ ಘಟನೆ ನಡೆದಿದೆ.
A young Muslim man who fell in love with a Hindu young woman and married her, killed her and buried her under the bed room in Uttar Pradesh. Such a terrible incident took place in Hafijapur village of Lakhimpur Kheri district. Mohammed Wasi brutally killed his wife Uma Sharma alias Aksha Fatima. He beat her, then gave her an electric shock, and then buried her dead body in the room of his house.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
19-08-25 12:54 pm
Mangalore Correspondent
Ullal Police Raid, Sports Winners, Mangalore:...
19-08-25 12:41 pm
ಮನೆ ಕಳ್ಳತನ ಪ್ರಕರಣ ; 30 ಗ್ರಾಮ್ ಬಂಗಾರ ಸಹಿತ ಆರೋಪ...
17-08-25 10:07 pm
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm