ಬ್ರೇಕಿಂಗ್ ನ್ಯೂಸ್
27-12-22 05:09 pm Mangalore Correspondent ಕ್ರೈಂ
ಮಂಗಳೂರು, ಡಿ.27: ಕಾಟಿಪಳ್ಳ ಜಲೀಲ್ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಕಾಟಿಪಳ್ಳ ನಾಲ್ಕನೇ ಬ್ಲಾಕ್ ಕೃಷ್ಣಾಪುರ ನಿವಾಸಿ ಲಕ್ಷ್ಮೀಶ ದೇವಾಡಿಗ(28) ಬಂಧಿತ.
ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಶೈಲೇಶ್ ಪೂಜಾರಿ, ಸವಿನ್ ಕಾಂಚನ್ ಮತ್ತು ಪವನ್ ಎಂಬವರನ್ನು ಬಂಧಿಸಲಾಗಿತ್ತು. ಇದೀಗ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಲಕ್ಷ್ಮೀಶ ಮತ್ತು ಶೈಲೇಶ್ ಸೇರಿಕೊಂಡು ಜಲೀಲ್ ಕೊಲೆಗೆ ಸಂಚು ಹೆಣೆದಿದ್ದರು ಎನ್ನಲಾಗಿದೆ.


ಶೈಲೇಶ್ ಮತ್ತು ಸವಿನ್ ಕಾಂಚನ್ ರೌಡಿ ಶೀಟರ್ ಗಳಾಗಿದ್ದು ಕೃತ್ಯ ಎಸಗಿದವರು. ಹಿಂದು ಮಹಿಳೆಯ ಜೊತೆಗೆ ಅಕ್ರಮ ಸಂಬಂಧ ಇರಿಸಿಕೊಂಡ ಕಾರಣಕ್ಕೆ ಶೈಲೇಶ್ ಪೂಜಾರಿ, ಜಲೀಲ್ ಜೊತೆಗೆ ಜಟಾಪಟಿ ಮಾಡಿಕೊಂಡಿದ್ದ. ಈ ಹಿಂದೆ ಜಲೀಲ್ ಗೆ, ಮಹಿಳೆಯ ಸಂಬಂಧ ಬಿಡುವಂತೆ ಎಚ್ಚರಿಕೆಯನ್ನೂ ನೀಡಿದ್ದ. ಮೊನ್ನೆ ಶನಿವಾರ ಬೆಳಗ್ಗೆ ಬೈಕಿನಲ್ಲಿ ಸಾಗುತ್ತಿದ್ದಾಗ ಎದುರಿನಲ್ಲಿ ಸಿಕ್ಕಿದ್ದ ಜಲೀಲನಿಗೆ ನಿನ್ನನ್ನು ಬಿಡುವುದಿಲ್ಲ ಎಂದು ಹೇಳಿ ಬೆದರಿಕೆಯನ್ನೂ ಹಾಕಿದ್ದ. ಅದೇ ದಿನ ಮಧ್ಯಾಹ್ನ ಸುರತ್ಕಲ್ಲಿನ ಶೇಂದಿ ಅಂಗಡಿಯಲ್ಲಿ ಕುಳಿತು ಸವಿನ್ ಕಾಂಚನ್ ಬರಹೇಳಿ, ಸಂಜೆ ವೇಳೆಗೆ ಕೃತ್ಯ ಎಸಗುವ ಬಗ್ಗೆ ಪ್ಲಾನ್ ಹಾಕಿದ್ದರು.
ಆರೋಪಿಗಳಲ್ಲಿ ಒಬ್ಬಾತನಿಗೆ ಆ ಮಹಿಳೆಯ ಜೊತೆಗೆ ಸ್ನೇಹ ಇತ್ತು. ಹಾಗಾಗಿ, ಜಲೀಲ್ ಜೊತೆಗೆ ಸಂಬಂಧ ಬಿಟ್ಟು ಬಿಡುವಂತೆ ಆಕೆಗೂ ಸೂಚಿಸಿದ್ದರು. ಆದರೆ ಜಲೀಲ್, ಮಹಿಳೆಗೆ ಸ್ಕೂಟರ್ ತೆಗೆಸಿಕೊಟ್ಟು ತನ್ನ ಸಂಬಂಧ ಮುಂದುವರಿಸಿದ್ದ. ಇದೇ ಸಿಟ್ಟಿನಲ್ಲಿ ನಾಲ್ವರು ಸೇರಿ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
Surathkal Jaleel Murder case, Lakshmish Devadiga fourth accused arrested in Mangalore. Earlier, three persons Shailesh Poojary (21) from Krishnapura, Savin Kanchan (24) from Hejamady and Pavan (23) from Katipalla were arrested. Shailesh and Savin are also the accused in Pinky Nawaz murder attempt case who is the prime accused of the 2018 Deepak Rao murder case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am