ಬ್ರೇಕಿಂಗ್ ನ್ಯೂಸ್
27-12-22 05:09 pm Mangalore Correspondent ಕ್ರೈಂ
ಮಂಗಳೂರು, ಡಿ.27: ಕಾಟಿಪಳ್ಳ ಜಲೀಲ್ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಕಾಟಿಪಳ್ಳ ನಾಲ್ಕನೇ ಬ್ಲಾಕ್ ಕೃಷ್ಣಾಪುರ ನಿವಾಸಿ ಲಕ್ಷ್ಮೀಶ ದೇವಾಡಿಗ(28) ಬಂಧಿತ.
ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಶೈಲೇಶ್ ಪೂಜಾರಿ, ಸವಿನ್ ಕಾಂಚನ್ ಮತ್ತು ಪವನ್ ಎಂಬವರನ್ನು ಬಂಧಿಸಲಾಗಿತ್ತು. ಇದೀಗ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಲಕ್ಷ್ಮೀಶ ಮತ್ತು ಶೈಲೇಶ್ ಸೇರಿಕೊಂಡು ಜಲೀಲ್ ಕೊಲೆಗೆ ಸಂಚು ಹೆಣೆದಿದ್ದರು ಎನ್ನಲಾಗಿದೆ.
ಶೈಲೇಶ್ ಮತ್ತು ಸವಿನ್ ಕಾಂಚನ್ ರೌಡಿ ಶೀಟರ್ ಗಳಾಗಿದ್ದು ಕೃತ್ಯ ಎಸಗಿದವರು. ಹಿಂದು ಮಹಿಳೆಯ ಜೊತೆಗೆ ಅಕ್ರಮ ಸಂಬಂಧ ಇರಿಸಿಕೊಂಡ ಕಾರಣಕ್ಕೆ ಶೈಲೇಶ್ ಪೂಜಾರಿ, ಜಲೀಲ್ ಜೊತೆಗೆ ಜಟಾಪಟಿ ಮಾಡಿಕೊಂಡಿದ್ದ. ಈ ಹಿಂದೆ ಜಲೀಲ್ ಗೆ, ಮಹಿಳೆಯ ಸಂಬಂಧ ಬಿಡುವಂತೆ ಎಚ್ಚರಿಕೆಯನ್ನೂ ನೀಡಿದ್ದ. ಮೊನ್ನೆ ಶನಿವಾರ ಬೆಳಗ್ಗೆ ಬೈಕಿನಲ್ಲಿ ಸಾಗುತ್ತಿದ್ದಾಗ ಎದುರಿನಲ್ಲಿ ಸಿಕ್ಕಿದ್ದ ಜಲೀಲನಿಗೆ ನಿನ್ನನ್ನು ಬಿಡುವುದಿಲ್ಲ ಎಂದು ಹೇಳಿ ಬೆದರಿಕೆಯನ್ನೂ ಹಾಕಿದ್ದ. ಅದೇ ದಿನ ಮಧ್ಯಾಹ್ನ ಸುರತ್ಕಲ್ಲಿನ ಶೇಂದಿ ಅಂಗಡಿಯಲ್ಲಿ ಕುಳಿತು ಸವಿನ್ ಕಾಂಚನ್ ಬರಹೇಳಿ, ಸಂಜೆ ವೇಳೆಗೆ ಕೃತ್ಯ ಎಸಗುವ ಬಗ್ಗೆ ಪ್ಲಾನ್ ಹಾಕಿದ್ದರು.
ಆರೋಪಿಗಳಲ್ಲಿ ಒಬ್ಬಾತನಿಗೆ ಆ ಮಹಿಳೆಯ ಜೊತೆಗೆ ಸ್ನೇಹ ಇತ್ತು. ಹಾಗಾಗಿ, ಜಲೀಲ್ ಜೊತೆಗೆ ಸಂಬಂಧ ಬಿಟ್ಟು ಬಿಡುವಂತೆ ಆಕೆಗೂ ಸೂಚಿಸಿದ್ದರು. ಆದರೆ ಜಲೀಲ್, ಮಹಿಳೆಗೆ ಸ್ಕೂಟರ್ ತೆಗೆಸಿಕೊಟ್ಟು ತನ್ನ ಸಂಬಂಧ ಮುಂದುವರಿಸಿದ್ದ. ಇದೇ ಸಿಟ್ಟಿನಲ್ಲಿ ನಾಲ್ವರು ಸೇರಿ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
Surathkal Jaleel Murder case, Lakshmish Devadiga fourth accused arrested in Mangalore. Earlier, three persons Shailesh Poojary (21) from Krishnapura, Savin Kanchan (24) from Hejamady and Pavan (23) from Katipalla were arrested. Shailesh and Savin are also the accused in Pinky Nawaz murder attempt case who is the prime accused of the 2018 Deepak Rao murder case.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
19-08-25 12:54 pm
Mangalore Correspondent
Ullal Police Raid, Sports Winners, Mangalore:...
19-08-25 12:41 pm
ಮನೆ ಕಳ್ಳತನ ಪ್ರಕರಣ ; 30 ಗ್ರಾಮ್ ಬಂಗಾರ ಸಹಿತ ಆರೋಪ...
17-08-25 10:07 pm
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm