ಬ್ರೇಕಿಂಗ್ ನ್ಯೂಸ್
06-01-23 06:10 pm Mangalore Correspondent ಕ್ರೈಂ
ಪುತ್ತೂರು, ಜ.6: ಪಿಯುಸಿ ಓದುತ್ತಿದ್ದ ಅಪ್ರಾಪ್ತ ಹುಡುಗಿ ಜೊತೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನನ್ನು ಹೊತ್ತೊಯ್ದು ಹಳೆ ಕಟ್ಟಡದಲ್ಲಿ ಕೂಡಿ ಹಾಕಿ ಹಲ್ಲೆಗೈದ ಘಟನೆ ಸುಬ್ರಹ್ಮಣ್ಯ ಬಳಿ ನಡೆದಿದೆ. 10ರಿಂದ 12 ಜನ ಯುವಕರು ಸೇರಿ ದೊಣ್ಣೆಯಿಂದ ಹಲ್ಲೆಗೈದಿದ್ದಾಗಿ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಲ್ಲುಗುಂಡಿ ನಿವಾಸಿ ಅಫೀದ್(20) ಎಂಬ ಯುವಕನಿಗೆ ಪಿಯುಸಿ ಓದುತ್ತಿದ್ದ 17 ವರ್ಷದ ಯುವತಿ ಇನ್ಸ್ಟಾ ಗ್ರಾಮ್ ನಲ್ಲಿ ಕನೆಕ್ಟ್ ಆಗಿದ್ದು ಜ.5ರಂದು ಸಂಜೆ ಸುಬ್ರಹ್ಮಣ್ಯ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ನಿಂತುಕೊಂಡು ಮಾತನಾಡುತ್ತಿದ್ದರು. ಈ ವೇಳೆ ಯುವಕ ಹುಡುಗಿಗೆ ಚಾಕಲೇಟ್ ನೀಡುತ್ತಿದ್ದಾಗ ಮೂವರು ಅಪರಿಚಿತ ಯುವಕರು ಬಂದು ಅಫೀದ್ ನನ್ನು ಜೀಪಿನಲ್ಲಿ ಬಲವಂತದಿಂದ ಕರೆದೊಯ್ದಿದ್ದಾರೆ. ಬಳಿಕ ಕುಮಾರಧಾರಾ ಜಂಕ್ಷನ್ ಬಳಿಯ ಹಳೇ ಕಟ್ಟಡದಲ್ಲಿ ಯುವಕನನ್ನು ಕೂಡಿ ಹಾಕಿ 10ರಿಂದ 12 ಜನ ಸೇರಿ ಹಲ್ಲೆ ನಡೆಸಿದ್ದಾರೆ. ಆರೋಪಿತ ಯುವಕರು ಎಸ್ ಎಸ್ ಪಿಯು ಎಂದು ಬರೆದಿದ್ದ ಬಿಳಿ ಬಣ್ಣದ ಟೀ ಶರ್ಟ್ ಧರಿಸಿದ್ದರು. ಯಾವುದೋ ಸಂಘಟನೆ ಯುವಕರು ಸೇರಿ ನೈತಿಕ ಪೊಲೀಸ್ ಗಿರಿ ಕೃತ್ಯ ನಡೆಸಿದ್ದಾರೆಂಬ ಆರೋಪ ವ್ಯಕ್ತವಾಗಿದೆ. ಈ ವೇಳೆ, ಒಬ್ಬಾತ ಚೂರಿಯಿಂದ ತಿವಿಯಲು ಯತ್ನಿಸಿದ್ದು ಇನ್ನೊಬ್ಬಾತ ತಡೆದು ಮುಂದೆ ನಮ್ಮ ಹುಡುಗಿಯರ ತಂಟೆಗೆ ಬಂದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಒಡ್ಡಿದ್ದಾನೆಂದು ದೂರಲಾಗಿದೆ.

ಯುವಕನ ವಿರುದ್ಧ ಹುಡುಗಿ ತಂದೆಯಿಂದಲೂ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರತಿ ದೂರು ದಾಖಲಾಗಿದೆ. 17 ವರ್ಷದ ತನ್ನ ಅಪ್ರಾಪ್ತ ಮಗಳನ್ನು ಪ್ರೀತಿಸಲು ಒತ್ತಾಯಿಸಿ ಕೈಹಿಡಿದೆಳೆದು ಮಾನಭಂಗಕ್ಕೆ ಯತ್ನಿಸಿದ್ದಾಗಿ ಯುವಕನ ವಿರುದ್ಧ ದೂರು ನೀಡಿದ್ದಾರೆ. ಆರೋಪಿ ಯುವಕ ಅಫೀದ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Subrahmanya moral policing, mulsim youth brutally thrashed for talking with Hindu girl, posco case registered by girls father stating that his daughter was forced to love.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 11:41 am
Udupi Correspondent
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm