ಬ್ರೇಕಿಂಗ್ ನ್ಯೂಸ್
06-01-23 06:10 pm Mangalore Correspondent ಕ್ರೈಂ
ಪುತ್ತೂರು, ಜ.6: ಪಿಯುಸಿ ಓದುತ್ತಿದ್ದ ಅಪ್ರಾಪ್ತ ಹುಡುಗಿ ಜೊತೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನನ್ನು ಹೊತ್ತೊಯ್ದು ಹಳೆ ಕಟ್ಟಡದಲ್ಲಿ ಕೂಡಿ ಹಾಕಿ ಹಲ್ಲೆಗೈದ ಘಟನೆ ಸುಬ್ರಹ್ಮಣ್ಯ ಬಳಿ ನಡೆದಿದೆ. 10ರಿಂದ 12 ಜನ ಯುವಕರು ಸೇರಿ ದೊಣ್ಣೆಯಿಂದ ಹಲ್ಲೆಗೈದಿದ್ದಾಗಿ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಲ್ಲುಗುಂಡಿ ನಿವಾಸಿ ಅಫೀದ್(20) ಎಂಬ ಯುವಕನಿಗೆ ಪಿಯುಸಿ ಓದುತ್ತಿದ್ದ 17 ವರ್ಷದ ಯುವತಿ ಇನ್ಸ್ಟಾ ಗ್ರಾಮ್ ನಲ್ಲಿ ಕನೆಕ್ಟ್ ಆಗಿದ್ದು ಜ.5ರಂದು ಸಂಜೆ ಸುಬ್ರಹ್ಮಣ್ಯ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ನಿಂತುಕೊಂಡು ಮಾತನಾಡುತ್ತಿದ್ದರು. ಈ ವೇಳೆ ಯುವಕ ಹುಡುಗಿಗೆ ಚಾಕಲೇಟ್ ನೀಡುತ್ತಿದ್ದಾಗ ಮೂವರು ಅಪರಿಚಿತ ಯುವಕರು ಬಂದು ಅಫೀದ್ ನನ್ನು ಜೀಪಿನಲ್ಲಿ ಬಲವಂತದಿಂದ ಕರೆದೊಯ್ದಿದ್ದಾರೆ. ಬಳಿಕ ಕುಮಾರಧಾರಾ ಜಂಕ್ಷನ್ ಬಳಿಯ ಹಳೇ ಕಟ್ಟಡದಲ್ಲಿ ಯುವಕನನ್ನು ಕೂಡಿ ಹಾಕಿ 10ರಿಂದ 12 ಜನ ಸೇರಿ ಹಲ್ಲೆ ನಡೆಸಿದ್ದಾರೆ. ಆರೋಪಿತ ಯುವಕರು ಎಸ್ ಎಸ್ ಪಿಯು ಎಂದು ಬರೆದಿದ್ದ ಬಿಳಿ ಬಣ್ಣದ ಟೀ ಶರ್ಟ್ ಧರಿಸಿದ್ದರು. ಯಾವುದೋ ಸಂಘಟನೆ ಯುವಕರು ಸೇರಿ ನೈತಿಕ ಪೊಲೀಸ್ ಗಿರಿ ಕೃತ್ಯ ನಡೆಸಿದ್ದಾರೆಂಬ ಆರೋಪ ವ್ಯಕ್ತವಾಗಿದೆ. ಈ ವೇಳೆ, ಒಬ್ಬಾತ ಚೂರಿಯಿಂದ ತಿವಿಯಲು ಯತ್ನಿಸಿದ್ದು ಇನ್ನೊಬ್ಬಾತ ತಡೆದು ಮುಂದೆ ನಮ್ಮ ಹುಡುಗಿಯರ ತಂಟೆಗೆ ಬಂದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಒಡ್ಡಿದ್ದಾನೆಂದು ದೂರಲಾಗಿದೆ.

ಯುವಕನ ವಿರುದ್ಧ ಹುಡುಗಿ ತಂದೆಯಿಂದಲೂ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರತಿ ದೂರು ದಾಖಲಾಗಿದೆ. 17 ವರ್ಷದ ತನ್ನ ಅಪ್ರಾಪ್ತ ಮಗಳನ್ನು ಪ್ರೀತಿಸಲು ಒತ್ತಾಯಿಸಿ ಕೈಹಿಡಿದೆಳೆದು ಮಾನಭಂಗಕ್ಕೆ ಯತ್ನಿಸಿದ್ದಾಗಿ ಯುವಕನ ವಿರುದ್ಧ ದೂರು ನೀಡಿದ್ದಾರೆ. ಆರೋಪಿ ಯುವಕ ಅಫೀದ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Subrahmanya moral policing, mulsim youth brutally thrashed for talking with Hindu girl, posco case registered by girls father stating that his daughter was forced to love.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am