ಬ್ರೇಕಿಂಗ್ ನ್ಯೂಸ್
07-01-23 06:22 pm Mangalore Correspondent ಕ್ರೈಂ
ಉಳ್ಳಾಲ, ಜ.7: ಬೈಕಲ್ಲಿ ನಿಷೇಧಿತ ಎಂಡಿಎಂಎ ಮಾದಕ ವಸ್ತುಗಳನ್ನ ಸಾಗಿಸುತ್ತಿದ್ದ ಡ್ರಗ್ ಪೆಡ್ಲರನ್ನ ಕೊಣಾಜೆ ಠಾಣೆ ಪಿಎಸ್ಐ ಶರಣಪ್ಪ ಭಂಢಾರಿ ನೇತೃತ್ವದ ತಂಡ ಬಂಧಿಸಿದ್ದು, ತಿಂಗಳ ಅಂತರದಲ್ಲಿ ಕೊಣಾಜೆ ಪೊಲೀಸರು ಠಾಣಾ ವ್ಯಾಪ್ತಿಯಲ್ಲಿ ಮೂರು ಡ್ರಗ್ಸ್ ಪ್ರಕರಣಗಳ ಭರ್ಜರಿ ಬೇಟೆ ನಡೆಸಿದ್ದಾರೆ.
ಕಾಸರಗೋಡು ಜಿಲ್ಲೆ ಮಂಜೇಶ್ವರ, ಗೇರುಕಟ್ಟೆ ನಿವಾಸಿ ಸದ್ದಾಂ ಅಲಿಯಾಸ್ ಅಬ್ದುಲ್ಲ ಬಂಧಿತ ಡ್ರಗ್ ಪೆಡ್ಲರ್. ನಿನ್ನೆ ಸಂಜೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್ ವಿಜಯ ನಗರ ಎಂಬಲ್ಲಿ ಬಂಧಿತ ಸದ್ದಾಂ ಯಮಾಹ ಎಫ್ ಝಿ ಬೈಕಲ್ಲಿ ನಿಷೇಧಿತ ಎಂ ಡಿಎಂಎ ಮಾದಕ ವಸ್ತುವನ್ನ ಮಾರಾಟ ನಡೆಸುತ್ತಿರುವುದರ ಬಗ್ಗೆ ಖಚಿತ ಮಾಹಿತಿ ಪಡೆದ ಪಿಎಸ್ಐ ಶರಣಪ್ಪ ಮತ್ತು ತಂಡವು ದಾಳಿ ನಡೆಸಿ ಆರೋಪಿಯನ್ನ ಅಮಲು ಪದಾರ್ಥದೊಂದಿಗೆ ವಶಕ್ಕೆ ಪಡೆದಿದೆ.
![]()
ಬಂಧಿತನಿಂದ 40,000 ರೂಪಾಯಿ ಮೌಲ್ಯದ 8 ಗ್ರಾಂ ಎಂಡಿಎಂಎ ಮಾತ್ರೆ, 1,56,000 ಮೌಲ್ಯದ ಬೈಕ್ ಮತ್ತು ಮೊಬೈಲ್ ಫೋನ್ ಗಳನ್ನ ವಶ ಪಡಿಸಿಕೊಂಡಿದ್ದಾರೆ.
ಕೇರಳ-ಕರ್ನಾಟಕ ಗಡಿ ಪ್ರದೇಶ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದಲ್ಲಿ ಕೇರಳಕ್ಕೆ ಡ್ರಗ್ಸ್ ಪೂರೈಕೆಯಾಗುತ್ತಿದೆ. ಕೊಣಾಜೆ ಠಾಣೆಯ ದಕ್ಷ ಪಿಎಸ್ ಐ ಶರಣಪ್ಪ ಮತ್ತು ತಂಡ ಕಳೆದ ಡಿ.17 ರಂದು ಬೋಳಿಯಾರ್ ಮತ್ತು ಡಿ.26 ರಂದು ಚೇಳೂರು ಚೆಕ್ ಪೋಸ್ಟಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ನಿಷೇದೀತ ಗಾಂಜಾ , ಎಮ್ ಡಿಎಮ್ಎ ಸಾಗಾಟ ನಡೆಸುತ್ತಿದ್ದ ಪೆಡ್ಲರ್ಗಳನ್ನ ಬಂಧಿಸಿದ್ದರು.

ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಆನ್ಶುಕುಮಾರ್, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಹಾಗೂ ಎಸಿಪಿ ದಿನಕರ ಶೆಟ್ಟಿಯವರ ನಿರ್ದೇಶನದಂತೆ ಕೊಣಾಜೆ ಇನ್ಸ್ ಪೆಕ್ಟರ್ ಪ್ರಕಾಶ್ ನೇತೃತ್ವದಲ್ಲಿ ಪಿ.ಎಸ್ಸೈ ಶರಣಪ್ಪ ಭಂಡಾರಿ ಹಾಗೂ ಸಿಬ್ಬಂದಿಗಳಾದ ಶಿವಕುಮಾರ್, ಪುರುಷೋತ್ತಮ, ಸುರೇಶ್, ಪ್ರಶಾಂತ್, ದೀಪಕ್, ಶೈಲೇಂದ್ರ, ಮಂಜಪ್ಪ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Mangalore Mdma Drug supply by bike in Ullal, one arrested. In one month span three have been arrested by Konaje police in Ullal.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm