ಬ್ರೇಕಿಂಗ್ ನ್ಯೂಸ್
07-01-23 06:22 pm Mangalore Correspondent ಕ್ರೈಂ
ಉಳ್ಳಾಲ, ಜ.7: ಬೈಕಲ್ಲಿ ನಿಷೇಧಿತ ಎಂಡಿಎಂಎ ಮಾದಕ ವಸ್ತುಗಳನ್ನ ಸಾಗಿಸುತ್ತಿದ್ದ ಡ್ರಗ್ ಪೆಡ್ಲರನ್ನ ಕೊಣಾಜೆ ಠಾಣೆ ಪಿಎಸ್ಐ ಶರಣಪ್ಪ ಭಂಢಾರಿ ನೇತೃತ್ವದ ತಂಡ ಬಂಧಿಸಿದ್ದು, ತಿಂಗಳ ಅಂತರದಲ್ಲಿ ಕೊಣಾಜೆ ಪೊಲೀಸರು ಠಾಣಾ ವ್ಯಾಪ್ತಿಯಲ್ಲಿ ಮೂರು ಡ್ರಗ್ಸ್ ಪ್ರಕರಣಗಳ ಭರ್ಜರಿ ಬೇಟೆ ನಡೆಸಿದ್ದಾರೆ.
ಕಾಸರಗೋಡು ಜಿಲ್ಲೆ ಮಂಜೇಶ್ವರ, ಗೇರುಕಟ್ಟೆ ನಿವಾಸಿ ಸದ್ದಾಂ ಅಲಿಯಾಸ್ ಅಬ್ದುಲ್ಲ ಬಂಧಿತ ಡ್ರಗ್ ಪೆಡ್ಲರ್. ನಿನ್ನೆ ಸಂಜೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್ ವಿಜಯ ನಗರ ಎಂಬಲ್ಲಿ ಬಂಧಿತ ಸದ್ದಾಂ ಯಮಾಹ ಎಫ್ ಝಿ ಬೈಕಲ್ಲಿ ನಿಷೇಧಿತ ಎಂ ಡಿಎಂಎ ಮಾದಕ ವಸ್ತುವನ್ನ ಮಾರಾಟ ನಡೆಸುತ್ತಿರುವುದರ ಬಗ್ಗೆ ಖಚಿತ ಮಾಹಿತಿ ಪಡೆದ ಪಿಎಸ್ಐ ಶರಣಪ್ಪ ಮತ್ತು ತಂಡವು ದಾಳಿ ನಡೆಸಿ ಆರೋಪಿಯನ್ನ ಅಮಲು ಪದಾರ್ಥದೊಂದಿಗೆ ವಶಕ್ಕೆ ಪಡೆದಿದೆ.
![]()
ಬಂಧಿತನಿಂದ 40,000 ರೂಪಾಯಿ ಮೌಲ್ಯದ 8 ಗ್ರಾಂ ಎಂಡಿಎಂಎ ಮಾತ್ರೆ, 1,56,000 ಮೌಲ್ಯದ ಬೈಕ್ ಮತ್ತು ಮೊಬೈಲ್ ಫೋನ್ ಗಳನ್ನ ವಶ ಪಡಿಸಿಕೊಂಡಿದ್ದಾರೆ.
ಕೇರಳ-ಕರ್ನಾಟಕ ಗಡಿ ಪ್ರದೇಶ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದಲ್ಲಿ ಕೇರಳಕ್ಕೆ ಡ್ರಗ್ಸ್ ಪೂರೈಕೆಯಾಗುತ್ತಿದೆ. ಕೊಣಾಜೆ ಠಾಣೆಯ ದಕ್ಷ ಪಿಎಸ್ ಐ ಶರಣಪ್ಪ ಮತ್ತು ತಂಡ ಕಳೆದ ಡಿ.17 ರಂದು ಬೋಳಿಯಾರ್ ಮತ್ತು ಡಿ.26 ರಂದು ಚೇಳೂರು ಚೆಕ್ ಪೋಸ್ಟಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ನಿಷೇದೀತ ಗಾಂಜಾ , ಎಮ್ ಡಿಎಮ್ಎ ಸಾಗಾಟ ನಡೆಸುತ್ತಿದ್ದ ಪೆಡ್ಲರ್ಗಳನ್ನ ಬಂಧಿಸಿದ್ದರು.

ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಆನ್ಶುಕುಮಾರ್, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಹಾಗೂ ಎಸಿಪಿ ದಿನಕರ ಶೆಟ್ಟಿಯವರ ನಿರ್ದೇಶನದಂತೆ ಕೊಣಾಜೆ ಇನ್ಸ್ ಪೆಕ್ಟರ್ ಪ್ರಕಾಶ್ ನೇತೃತ್ವದಲ್ಲಿ ಪಿ.ಎಸ್ಸೈ ಶರಣಪ್ಪ ಭಂಡಾರಿ ಹಾಗೂ ಸಿಬ್ಬಂದಿಗಳಾದ ಶಿವಕುಮಾರ್, ಪುರುಷೋತ್ತಮ, ಸುರೇಶ್, ಪ್ರಶಾಂತ್, ದೀಪಕ್, ಶೈಲೇಂದ್ರ, ಮಂಜಪ್ಪ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Mangalore Mdma Drug supply by bike in Ullal, one arrested. In one month span three have been arrested by Konaje police in Ullal.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am