ಬ್ರೇಕಿಂಗ್ ನ್ಯೂಸ್
09-01-23 05:44 pm HK News Desk ಕ್ರೈಂ
ಶಿವಮೊಗ್ಗ, ಜ.8: ಹೊಂಚು ಹಾಕಿ ಮಚ್ಚಿನಿಂದ ಹಲ್ಲೆ ಮಾಡುವ ವೇಳೆ ಭಜರಂಗದಳ ಕಾರ್ಯಕರ್ತನೊಬ್ಬ ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡ ಘಟನೆ ಸಾಗರದ ಖಾಸಗಿ ಬಸ್ ನಿಲ್ದಾಣದ ಬಳಿ ನಡೆದಿದೆ. ಸಮೀರ್ ಎನ್ನುವ ವ್ಯಕ್ತಿ ಹಲ್ಲೆಗೆ ಯತ್ನಿಸಿದ್ದು, ಶೀಘ್ರದಲ್ಲೇ ಆರೋಪಿಯನ್ನು ಬಂಧಿಸದಿದ್ದರೇ ನಾಳೆ ಸಾಗರ ಬಂದ್ ಮಾಡೋದಾಗಿ ಭಜರಂಗದಳದ ಮುಖಂಡರು ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ.
ಸಾಗರದ ಉಪ್ಪಾರ ಕೇರಿ ಗ್ರಾಮದ ಸುನಿಲ್ (28) ಮಚ್ಚಿನೇಟಿನಿಂದ ತಪ್ಪಿಸಿಕೊಂಡ ಕಾರ್ಯಕರ್ತ. ಇವತ್ತು ಬೆಳಗ್ಗೆ 9 ಗಂಟೆ ಸಮಯದಲ್ಲಿ ಸುನಿಲ್ ಜಿಯೋ ಫೈಬರ್ ಕಚೇರಿಯ ಹತ್ತಿರ ಬೈಕ್ನಲ್ಲಿ ಬಂದಿದ್ದಾರೆ. ಈ ವೇಳೆ ಸಮೀರ್ ತನ್ನ ಸ್ಕೂಟಿ ಬೈಕ್ನಲ್ಲಿಟ್ಟಿದ್ದ ಮಚ್ಚು ತೆಗೆದುಕೊಂಡು ಹಲ್ಲೆ ಮಾಡಲು ಮುಂದಾಗಿದ್ದಾನೆ. ತಕ್ಷಣ ಸುನಿಲ್ ಎಚ್ಚೆತ್ತುಕೊಂಡು ಬೈಕ್ ಓಡಿಸಲು ಮುಂದಾಗುತ್ತಾರೆ. ಆಗ ಸಮೀರ್ ಸ್ಕೂಟಿಯಲ್ಲಿ ಸುನಿಲ್ ಬೈಕ್ ಹಿಂಬಾಲಿಸಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಏನಿದು ಪ್ರಕರಣ..?
ಸುನಿಲ್ ಹಾಗೂ ಸಮೀರ್ ಸಾಗರದ ಉಪ್ಪಾರ ಕೇರಿ ನಿವಾಸಿಗಳು. ಹಿಜಾಬ್ ವಿವಾದದಲ್ಲಿ ಇಬ್ಬರ ನಡುವೆ ವೈಷಮ್ಯ ಉಂಟಾಗಿತ್ತು. ಹೀಗಾಗಿ ಸಮೀರ್ ಹಗೆತನ ಸಾಧಿಸಿ ನಿನ್ನೆ ಸುನಿಲ್ಗೆ ಧಮ್ಕಿ ಹಾಕಿದ್ದ. ಮತ್ತೆ ಇವತ್ತು ಹೊಂಚು ಹಾಕಿ ಹಲ್ಲೆ ಮಾಡಿ ಮಚ್ಚಿನಿಂದ ಹೊಡೆಯಲು ಮುಂದಾಗಿದ್ದ ಎನ್ನಲಾಗಿದೆ.
ಸುನಿಲ್ ಮೇಲಿನ ದಾಳಿ ಯತ್ನ ಖಂಡಿಸಿ ಠಾಣಾ ಮುಂದೆ ನೂರಾರು ಭಜರಂಗದಳದ ಕಾರ್ಯರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ಬಗ್ಗೆ ಸಮೀರ್ ವಿರುದ್ಧ ಸಾಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಜರಂಗದಳದ ಕಾರ್ಯಕರ್ತ ಸುನೀಲ್ ಮೇಲೆ ಹಲ್ಲೆಗೆ ಯತ್ನ ಖಂಡಿಸಿ ನಾಳೆ ಸಾಗರ ಟೌನ್ ಬಂದ್ ಗೆ ಕರೆ ಹಿಂದೂಪರ ಸಂಘಟನೆಗಳು ಕರೆ ನೀಡಿದೆ.
Attempt to attack Bajrang Dal activists in Sagara over Hijab row, call for bandh in city. Bajrang Dal activists have warned the Karnataka Police that if they fail to arrest the accused, who tried to attack and kill a Bajrang Dal activist, by Monday evening, they would stage a bandh in Sagara town of Karnataka. 28-year-old Sunil, a resident of Upparakeri in Sagara had managed to escape attack from local resident Sameer. The accused Sameer allegedly tried to attack Sunil with a machete and he even chased him on bike.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm