ಬ್ರೇಕಿಂಗ್ ನ್ಯೂಸ್
17-10-20 09:19 pm Dilip: Bengaluru Correspondent ಕ್ರೈಂ
ಬೆಂಗಳೂರು, ಅಕ್ಟೋಬರ್ 17: ಮನೀಶ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನ ಬಂಧಿಸಿದ್ದು ಈ ವೇಳೆ ಇಬ್ಬರ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಬಂಧಿತರನ್ನು ಶಶಿಕಿರಣ್ ಅಲಿಯಾಸ್ ಮುನ್ನಾ (45), ಗಣೇಶ್ (39), ನಿತ್ಯ (29) ಮತ್ತು ಅಕ್ಷಯ್ (32) ಎಂದು ಗುರುತಿಸಲಾಗಿದೆ. ಈ ವೇಳೆ ಇಬ್ಬರು ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದು ಪ್ರತಿಯಾಗಿ ಕಾಲಿಗೆ ಗುಂಡು ಹಾರಿಸಿದ್ದಾರೆ.
ಆರೋಪಿಗಳನ್ನು ವಶಕ್ಕೆ ಪಡೆದ ಬಳಿಕ, ಪೊಲೀಸರು ಮನೀಶ್ ಶೆಟ್ಟಿಯನ್ನು ಹತ್ಯೆಗೈಯಲು ಬಳಸಿದ್ದ ಮಾರಕಾಸ್ತ್ರಗಳನ್ನ ಜಪ್ತಿ ಮಾಡಲು ಮುಂದಾಗಿದ್ದರು. ಇದಕ್ಕಾಗಿ, ಹೊಸೂರು ರಸ್ತೆಯ ಬಾರ್ಲೆನ್ ಸ್ಮಶಾನ ಬಳಿ ಪೊಲೀಸರು ತಪಾಸಣೆ ಮಾಡಿದ್ದರು. ಆದರೆ, ಆರೋಪಿಗಳು ಈ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ, ಪರಾರಿಯಾಗಲು ನೋಡಿದ್ದಾರೆ ಎನ್ನಲಾಗುತ್ತಿದೆ. ಪೊಲೀಸರು ಫೈರಿಂಗ್ ನಿಂದ ಗಾಯಗೊಂಡಿರುವ ಅಕ್ಷಯ್ ಹಾಗೂ ಶಶಿಕಿರಣ್ ಎಂಬಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಂಧಿತರ ಪೈಕಿ ಶಶಿಕಿರಣ್ ಮತ್ತು ನಿತ್ಯ ಕೊಡಗು ಮೂಲದವರು ಎನ್ನಲಾಗುತ್ತಿದ್ದು, ಗಣೇಶ್ ಮತ್ತು ಅಕ್ಷಯ್ ಮಂಗಳೂರಿನವರು ಎನ್ನುವ ಮಾಹಿತಿ ಸಿಕ್ಕಿದೆ.
ಬೆಂಗಳೂರಿನ ಬ್ರಿಗೇಟ್ ರಸ್ತೆಯಲ್ಲಿರುವ ಡುಯೆಟ್ ಬಾರ್ ಮಾಲೀಕ ಮನೀಶ್ ಶೆಟ್ಟಿಯನ್ನು ಗುರುವಾರ ರಾತ್ರಿ ಹತ್ಯೆ ಮಾಡಲಾಗಿತ್ತು. ದರೋಡೆ, ಕೊಲೆ ಸೇರಿ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದ ಮನೀಶ್ ವಿರುದ್ಧ ರೌಡಿ ಶೀಟ್ ಓಪನ್ ಮಾಡಲಾಗಿತ್ತು. ಇತ್ತೀಚೆಗೆ ಪಕ್ಕದ ಇನ್ನೊಂದು ಬಾರ್ ಮಾಲೀಕನ ಜೊತೆ ಗಲಾಟೆ ಮಾಡಿಕೊಂಡಿದ್ದ ಮನೀಶ್ ನನ್ನು ಸುಪಾರಿ ಕೊಟ್ಟು ಕೊಲ್ಲಿಸಲಾಗಿದೆ ಎನ್ನುವ ಮಾಹಿತಿ ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
In connection to the shootout and murder of Bangalore bar owner Manish Shetty, the Bangalore police have succeeding in arresting 4 accused. It is stated two of the accused attacked on the police in which police firing has taken place.
16-03-26 03:36 pm
HK News Staffer
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am