ಬ್ರೇಕಿಂಗ್ ನ್ಯೂಸ್
17-01-23 08:49 pm Mangalore Correspondent ಕ್ರೈಂ
ಪುತ್ತೂರು, ಜ.17: ದಲಿತ ಯುವತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದು, ಕೆಲವೇ ಗಂಟೆಗಳಲ್ಲಿ ಪ್ರಕರಣದ ಹಿನ್ನೆಲೆಯನ್ನು ಭೇದಿಸಿದ್ದಾರೆ. ತನ್ನ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಪ್ರಿಯತಮನೇ ಕೊಲೆ ಕೃತ್ಯ ನಡೆಸಿದ್ದಾನೆ ಅನ್ನುವ ವಿಷಯವನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಸುಳ್ಯ ತಾಲೂಕಿನ ಕನಕಮಜಲು ನಿವಾಸಿ ಉಮೇಶ್ ಎಂಬಾತನನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪುತ್ತೂರು ತಾಲೂಕಿನ ಮುಂಡೂರು ಬಳಿಯ ಕಂಪ ಎಂಬಲ್ಲಿ ವಾಸವಿದ್ದ ಗುರುವಪ್ಪ ಎಂಬವರ ಪುತ್ರಿ ಜಯಶ್ರೀ(23) ಎಂಬ ಯುವತಿಯನ್ನು ಸಂಬಂಧಿಕನೇ ಆಗಿರುವ ಉಮೇಶ್ ಪ್ರೀತಿಸುತ್ತಿದ್ದ. ಕೆಲವೊಮ್ಮೆ ಈಕೆಯ ಮನೆಗೆ ಬಂದು ಹೋಗುತ್ತಿದ್ದ ಉಮೇಶನ ನಡತೆ ಬಗ್ಗೆ ಜಯಶ್ರೀಗೆ ಸಂಶಯಗಳಿದ್ದವು. ಹೀಗಾಗಿ ಆತನನ್ನು ಉದ್ದೇಶಪೂರ್ವಕ ದೂರ ಮಾಡಿದ್ದಳು. ಇದರಿಂದ ಅಸಮಾಧಾನಗೊಂಡಿದ್ದ ಉಮೇಶ, ಇಂದು ಬೆಳಗ್ಗೆ ನೇರವಾಗಿ ಜಯಶ್ರೀ ಮನೆಗೆ ನುಗ್ಗಿದ್ದು, ತನ್ನಲ್ಲಿದ್ದ ಚೂರಿಯಿಂದ ಇರಿದು ಹತ್ಯೆ ಮಾಡಿದ್ದಾನೆ.
ಹೊಟ್ಟೆಗೆ ಚೂರಿಯಿಂದ ಇರಿಯಲ್ಪಟ್ಟಿದ್ದ ಜಯಶ್ರೀ ಮನೆಯಿಂದ ಹೊರಗೆ ಬಂದು ಬೊಬ್ಬೆ ಹಾಕಿದ್ದು, ಆನಂತರ ಮನೆ ಅಂಗಳದಲ್ಲಿಯೇ ರಕ್ತದ ಮಡುವಿನಲ್ಲಿ ಬಿದ್ದಿದ್ದಳು. ಇಷ್ಟಾಗುತ್ತಲೇ ಉಮೇಶ ಅಲ್ಲಿಂದ ನಾಪತ್ತೆಯಾಗಿದ್ದ. ಜಯಶ್ರೀ ಮನೆಯಲ್ಲಿ ಆ ಸಂದರ್ಭದಲ್ಲಿ ಒಬ್ಬಂಟಿಯಾಗಿದ್ದಳು. ತಾಯಿ ತೋಟದ ಕೆಲಸಕ್ಕೆ ಹೋಗಿದ್ದರೆ, ಆಕೆಯ ತಮ್ಮ ಮನೆಯ ಹೊರಗಡೆ ಯಾವುದೋ ಕೆಲಸಕ್ಕಾಗಿ ಹೋಗಿದ್ದ. ಆನಂತರ, ಮಗಳ ಬೊಬ್ಬೆ ಕೇಳಿ ತಾಯಿ ಮನೆಗೆ ಬಂದು ನೋಡಿದಾಗ ರಕ್ತದ ಮಡುವಿನಲ್ಲಿ ಬಿದ್ದುಕೊಂಡಿದ್ದಳು. ಆಕೆಯನ್ನು ಕೂಡಲೇ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಒಯ್ದಿದ್ದು, ಅಷ್ಟರಲ್ಲಿ ಸಾವನ್ನಪ್ಪಿದ್ದಳು. ಘಟನೆ ಬಗ್ಗೆ ತಾಯಿ ಪುತ್ತೂರು ಪೊಲೀಸರಿಗೆ ದೂರು ನೀಡಿದ್ದರು.
ಪುತ್ತೂರು ಪೊಲೀಸರು ಆಕೆಯ ಮೊಬೈಲ್ ಸಂಪರ್ಕ ಆಧರಿಸಿ ತನಿಖೆ ಕೈಗೊಂಡಿದ್ದು, ಕೆಲವೇ ಗಂಟೆಗಳ ಅಂತರದಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಸಂಜೆಯೇ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ತಾಯಿ ಮತ್ತು ತಮ್ಮನನ್ನೂ ವಿಚಾರಣೆ ನಡೆಸಿದ್ದರು. ಉಮೇಶ ಸುಳ್ಯ ತಾಲೂಕಿನ ಕನಕಮಜಲು ನಿವಾಸಿಯಾಗಿದ್ದು, ಕೃತ್ಯದ ಬಳಿಕ ಸುಳ್ಯಕ್ಕೆ ಪರಾರಿಯಾಗಿದ್ದ. ಅಲ್ಲಿಂದಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಯಶ್ರೀಯನ್ನು ಕೇವಲ ಪ್ರೀತಿಯ ಕಾರಣಕ್ಕೆ ಕೊಲೆ ಮಾಡಿದ್ದೋ, ಇತರೇ ಕಾರಣ ಇದೆಯೇ ಅನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Puttur girl murder case, rejection of love reason for murder clarifies SP.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:18 pm
Mangalore Correspondent
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm