ಬ್ರೇಕಿಂಗ್ ನ್ಯೂಸ್
21-01-23 05:13 pm HK News Desk ಕ್ರೈಂ
ಮಹಾರಾಷ್ಟ್ರ, ಜ.21 : ಗರ್ಭಿಣಿಯಾಗಲು ಮಹಿಳೆಯೊಬ್ಬರಿಗೆ ಪುಡಿಮಾಡಿದ ಮಾನವನ ಮೂಳೆಗಳನ್ನು ತಿನ್ನುವಂತೆ ಆಕೆಯ ಪತಿ ಹಾಗೂ ಅತ್ತೆ ಒತ್ತಾಯಿಸಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಸಂತ್ರಸ್ತೆ ನೀಡಿದ ಎರಡು ಪ್ರತ್ಯೇಕ ದೂರಿನನ್ವಯ ಪುಣೆ ಪೊಲೀಸರು ಆಕೆಯ ಪತಿ, ಅತ್ತೆ –ಮಾವ ಸೇರಿದಂತೆ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
7 ಮಂದಿ ಆರೋಪಿಗಳ ವಿರುದ್ಧ ಮೂಢನಂಬಿಕೆ ವಿರೋಧಿ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ 498 ಎ, 323, 504, 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪುಣೆ ನಗರದ ಉಪ ಪೊಲೀಸ್ ಆಯುಕ್ತ ಸುಹೇಲ್ ಶರ್ಮಾ ಮಾಹಿತಿ ನೀಡಿದ್ದಾರೆ.
ಪತಿಯ ಕುಟುಂಬದವರು ಮದುವೆಯಾದ ಆರಂಭದ ದಿನಗಳಲ್ಲಿ ತವರು ಮನೆಯಿಂದ ನಗದು, ಚಿನ್ನದ ಆಭರಣಗಳನ್ನು ತರುವಂತೆ ಒತ್ತಾಯಿಸಿ ವರದಕ್ಷಿಣೆ ಕಿರುಕುಳ ನೀಡಿದ್ದರು ಎಂದು ದೂರಿನಲ್ಲಿ ಸಂತ್ರಸ್ತೆ ಆರೋಪಿಸಿದ್ದಾರೆ.
ಮೂಢನಂಬಿಕೆಗಳಿಂದ ಪ್ರಭಾವಿತರಾಗಿದ್ದ ಪತಿ ಹಾಗೂ ಅತ್ತೆ ಮಾಟಗಾರರ ಸಲಹೆ ಕೇಳುತ್ತಿದ್ದರು. ಅಲ್ಲದೆ ಅಮಾವಾಸ್ಯೆ ಬಂತೆದರೆ ಅನೇಕ ಮೂಢನಂಬಿಕೆಯ ಆಚರಣೆಗಳನ್ನು ಮಾಡಲು ಒತ್ತಾಯಿಸುತ್ತಿದ್ದರು. ಅಷ್ಟೇ ಅಲ್ಲದೇ ರಾತ್ರಿ ವೇಳೆ ಸ್ಮಶಾನಕ್ಕೆ ಕಳುಹಿಸುವುದು ಜೊತೆಗೆ ಸತ್ತ ಮಾನವರ ಮೂಳೆಗಳನ್ನು ತಿನ್ನಲು ಬಲವಂತ ಮಾಡುತ್ತಿದ್ದರು ಎಂಬ ಸಂತ್ರಸ್ತೆ ಮತ್ತೊಂದು ದೂರು ದಾಖಲಿಸಿದ್ದಾರೆ.
ಸ್ಥಳ ಪರಿಶೀಲನೆ ನಡೆಸುತ್ತಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸುವುದಾಗಿ ಎಸಿಪಿ ಶ್ರೇಣಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
In a shocking incident, a woman was allegedly forced by her in-laws and husband to eat powdered human bones as a part of a black magic ritual advised by the local occultist to conceive a child. Following a complaint by the woman, Pune Police on Wednesday registered an FIR or police case against seven people including the husband, in-laws and the occultist.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am