ಬ್ರೇಕಿಂಗ್ ನ್ಯೂಸ್
03-02-23 11:38 pm Mangaluru Correspondent ಕ್ರೈಂ
ಮಂಗಳೂರು, ಫೆ.3: ಧೂಳೆಬ್ಬಿಸಿಕೊಂಡು ಹೋಗಬೇಡ ಎಂದು ಬುದ್ಧಿವಾದ ಹೇಳಿದ ವ್ಯಕ್ತಿಯನ್ನು ಟಿಪ್ಪರ್ ಹಾಯಿಸಿ ಚಾಲಕನೇ ಕೊಲೆಗೈದ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ. ಕೋಟೆಬಾಗಿಲು ನಿವಾಸಿ ಫಯಾಜ್ (63) ಕೊಲೆಯಾದವರು.
ಶುಕ್ರವಾರ ಮಧ್ಯಾಹ್ನ ಮಸೀದಿಗೆ ತೆರಳುತ್ತಿದ್ದಾಗ ಟಿಪ್ಪರ್ ಚಾಲಕ ಹ್ಯಾರಿಸ್ ಬಳಿ ಧೂಳು ಎಬ್ಬಿಸಿಕೊಂಡು ಸಾಗುತ್ತಿದ್ದ ಬಗ್ಗೆ ಪ್ರಶ್ನೆ ಮಾಡಿದ್ದರು. ಶಾಲಾ ಮಕ್ಕಳು ಹೋಗುವ ದಾರಿ, ಈ ರೀತಿ ಯಾಕೆ ಹೋಗುತ್ತೀಯಾ ಎಂದು ಕೇಳಿದ್ದರು. ಅದಕ್ಕೆ ಹ್ಯಾರಿಸ್, ನೀನು ಯಾರು ಕೇಳಲು ಎಂದು ಮರು ಪ್ರಶ್ನೆ ಮಾಡಿದ್ದು ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು.
ಆನಂತರ ಮಸೀದಿಯಿಂದ ಮರಳುತ್ತಿದ್ದಾಗ ಇದೇ ವಿಚಾರದಲ್ಲಿ ಇಬ್ಬರ ಮಧ್ಯೆ ಜಗಳ ಆಗಿದೆ. ಟಿಪ್ಪರ್ ಬಾಗಿಲಿನ ಬಳಿ ಹತ್ತಿ ನಿಂತಿದ್ದ ಫಯಾಜ್ ಮೇಲೆ ರಾಡಿನಿಂದ ಹ್ಯಾರಿಸ್ ಹಲ್ಲೆ ಮಾಡಿದ್ದಾನೆ. ಇದರಿಂದ ಸಿಟ್ಟಿಗೆದ್ದ ಫಯಾಜ್ ಬಾಗಿಲು ತೆಗೆದು ಒಳಗೆ ನುಗ್ಗಲು ಯತ್ನಿಸಿದ್ದು ಇದೇ ವೇಳೆ ಹ್ಯಾರಿಸ್ ಟಿಪ್ಪರ್ ಚಾಲನೆ ಮಾಡಿಕೊಂಡು ಹೋಗಿದ್ದಾನೆ. ಬಾಗಿಲಿನಲ್ಲಿ ನೇತಾಡಿಕೊಂಡಿದ್ದ ಫಯಾಜ್ ಕೆಳಕ್ಕೆ ಬಿದ್ದಿದ್ದು ಅದೇ ಟಿಪ್ಪರಿನ ಹಿಂದಿನ ಚಕ್ರ ಫಯಾಜ್ ಕಾಲು, ತೊಡೆಯ ಭಾಗದಿಂದ ಹರಿದು ಹೋಗಿದೆ.
ಕೂಡಲೇ ಫಯಾಜ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಹ್ಯಾರಿಸ್ ಟಿಪ್ಪರ್ ಬಿಟ್ಟು ಪರಾರಿಯಾಗಿದ್ದಾನೆ. ಮೂಡುಬಿದ್ರೆ ಠಾಣೆಯಲ್ಲಿ ಕೊಲೆ ಕೇಸು ದಾಖಲಾಗಿದೆ.
Moodbidri murder man moved down by a tipper truck driver over silly issue. Mangaluru city and Moodbidri town witnessed one each gruesome murder on Friday, February 3, when an unidentified miscreant stabbed a jewellery shop worker to death and a tipper truck driver mowed down an elderly man under the wheels of his vehicle, respectively.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am