ಬ್ರೇಕಿಂಗ್ ನ್ಯೂಸ್
03-02-23 11:38 pm Mangaluru Correspondent ಕ್ರೈಂ
ಮಂಗಳೂರು, ಫೆ.3: ಧೂಳೆಬ್ಬಿಸಿಕೊಂಡು ಹೋಗಬೇಡ ಎಂದು ಬುದ್ಧಿವಾದ ಹೇಳಿದ ವ್ಯಕ್ತಿಯನ್ನು ಟಿಪ್ಪರ್ ಹಾಯಿಸಿ ಚಾಲಕನೇ ಕೊಲೆಗೈದ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ. ಕೋಟೆಬಾಗಿಲು ನಿವಾಸಿ ಫಯಾಜ್ (63) ಕೊಲೆಯಾದವರು.
ಶುಕ್ರವಾರ ಮಧ್ಯಾಹ್ನ ಮಸೀದಿಗೆ ತೆರಳುತ್ತಿದ್ದಾಗ ಟಿಪ್ಪರ್ ಚಾಲಕ ಹ್ಯಾರಿಸ್ ಬಳಿ ಧೂಳು ಎಬ್ಬಿಸಿಕೊಂಡು ಸಾಗುತ್ತಿದ್ದ ಬಗ್ಗೆ ಪ್ರಶ್ನೆ ಮಾಡಿದ್ದರು. ಶಾಲಾ ಮಕ್ಕಳು ಹೋಗುವ ದಾರಿ, ಈ ರೀತಿ ಯಾಕೆ ಹೋಗುತ್ತೀಯಾ ಎಂದು ಕೇಳಿದ್ದರು. ಅದಕ್ಕೆ ಹ್ಯಾರಿಸ್, ನೀನು ಯಾರು ಕೇಳಲು ಎಂದು ಮರು ಪ್ರಶ್ನೆ ಮಾಡಿದ್ದು ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು.
ಆನಂತರ ಮಸೀದಿಯಿಂದ ಮರಳುತ್ತಿದ್ದಾಗ ಇದೇ ವಿಚಾರದಲ್ಲಿ ಇಬ್ಬರ ಮಧ್ಯೆ ಜಗಳ ಆಗಿದೆ. ಟಿಪ್ಪರ್ ಬಾಗಿಲಿನ ಬಳಿ ಹತ್ತಿ ನಿಂತಿದ್ದ ಫಯಾಜ್ ಮೇಲೆ ರಾಡಿನಿಂದ ಹ್ಯಾರಿಸ್ ಹಲ್ಲೆ ಮಾಡಿದ್ದಾನೆ. ಇದರಿಂದ ಸಿಟ್ಟಿಗೆದ್ದ ಫಯಾಜ್ ಬಾಗಿಲು ತೆಗೆದು ಒಳಗೆ ನುಗ್ಗಲು ಯತ್ನಿಸಿದ್ದು ಇದೇ ವೇಳೆ ಹ್ಯಾರಿಸ್ ಟಿಪ್ಪರ್ ಚಾಲನೆ ಮಾಡಿಕೊಂಡು ಹೋಗಿದ್ದಾನೆ. ಬಾಗಿಲಿನಲ್ಲಿ ನೇತಾಡಿಕೊಂಡಿದ್ದ ಫಯಾಜ್ ಕೆಳಕ್ಕೆ ಬಿದ್ದಿದ್ದು ಅದೇ ಟಿಪ್ಪರಿನ ಹಿಂದಿನ ಚಕ್ರ ಫಯಾಜ್ ಕಾಲು, ತೊಡೆಯ ಭಾಗದಿಂದ ಹರಿದು ಹೋಗಿದೆ.
ಕೂಡಲೇ ಫಯಾಜ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಹ್ಯಾರಿಸ್ ಟಿಪ್ಪರ್ ಬಿಟ್ಟು ಪರಾರಿಯಾಗಿದ್ದಾನೆ. ಮೂಡುಬಿದ್ರೆ ಠಾಣೆಯಲ್ಲಿ ಕೊಲೆ ಕೇಸು ದಾಖಲಾಗಿದೆ.
Moodbidri murder man moved down by a tipper truck driver over silly issue. Mangaluru city and Moodbidri town witnessed one each gruesome murder on Friday, February 3, when an unidentified miscreant stabbed a jewellery shop worker to death and a tipper truck driver mowed down an elderly man under the wheels of his vehicle, respectively.
03-02-26 05:03 pm
HK News Desk
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm