ಬ್ರೇಕಿಂಗ್ ನ್ಯೂಸ್
07-02-23 08:46 pm Udupi Correspondent ಕ್ರೈಂ
ಉಡುಪಿ, ಫೆ.7 : ಎರಡು ದಿನಗಳ ಹಿಂದೆ ಪಾಂಗಾಳದಲ್ಲಿ ನಡೆದ ರಿಯಲ್ ಎಸ್ಟೇಟ್ ಉದ್ಯಮಿ ಶರತ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಕಾಪು ಪೊಲೀಸರು ಸುರತ್ಕಲ್ ಮೂಲದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಮಂಗಳೂರಿನ ಸುರತ್ಕಲ್ ಪರಿಸರದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿಗಳಿವೆ. ಪಾಂಗಾಳ ಸೇತುವೆಯ ಬಳಿ ಭಾನುವಾರ ಸಂಜೆ ಶರತ್ ಶೆಟ್ಟಿ ಅವರನ್ನು ಇಬ್ಬರು ಯುವಕರು ಮಾತನಾಡುವ ನೆಪದಲ್ಲಿ ಕರೆದು ಹಾಡಹಗಲೇ ಕಡಿದು ಹತ್ಯೆ ಮಾಡಿದ್ದರು. ಹತ್ಯೆ ಬಳಿಕ ಮೂವರು ಯುವಕರು ಒಂದೇ ಬೈಕಿನಲ್ಲಿ ಪರಾರಿಯಾಗುತ್ತಿರುವ ವಿಡಿಯೋ ಲಭ್ಯವಾಗಿತ್ತು. ಅದರಲ್ಲಿ ಒಬ್ಬಾತ ಕೈಯಲ್ಲಿ ತಲವಾರು ಹಿಡಿದುಕೊಂಡೇ ಬೈಕಿನಲ್ಲಿ ತೆರಳಿರುವುದು ಕಂಡುಬಂದಿತ್ತು. ಅಲ್ಲದೆ, ಇನ್ನೊಬ್ಬ ಯುವಕ ಆ ಬೈಕಿನ ಹಿಂದೆಯೇ ಓಡುತ್ತಾ ಸಾಗಿದ್ದು ದಾಖಲಾಗಿತ್ತು.
![]()
ತನಿಖೆ ಆರಂಭಿಸಿದ ಪೊಲೀಸರು ಹಲವು ಕೋನಗಳಿಂದ ತನಿಖೆ ನಡೆಸಿದ್ದು, ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಮಾಹಿತಿ ಪ್ರಕಾರ, ಶರತ್ ಶೆಟ್ಟಿ ಕೊಲೆಯ ಹಿಂದೆ ಹುಡುಗಿ ವಿಚಾರ ಇದೆ ಎನ್ನುವ ಸಂಗತಿ ಬೆಳಕಿಗೆ ಬಂದಿದೆ. ಈ ಕೃತ್ಯಕ್ಕೆ ಹಲವರು ಕೈಜೋಡಿಸಿದ್ದಾರೆ ಎನ್ನಲಾಗುತ್ತಿದೆ. ಶರತ್ ಶೆಟ್ಟಿ ಅವಿವಾಹಿತನಾಗಿದ್ದು, ಕಾಪು ಮತ್ತು ಉಡುಪಿಯಲ್ಲಿ ಜಾಗದ ವ್ಯವಹಾರ ನಡೆಸುತ್ತಿದ್ದ.

ರಿಯಲ್ ಎಸ್ಟೇಟ್ ವಹಿವಾಟಿನ ವಿಚಾರದಲ್ಲಿ ಹಲವರು ವೈಷಮ್ಯವನ್ನೂ ಕಟ್ಟಿಕೊಂಡಿದ್ದ. ಹುಡುಗಿ ವಿಚಾರದಲ್ಲಿ ಕೊಲೆಗೆ ಸಂಚು ರೂಪಿಸಿದ್ದ ವ್ಯಕ್ತಿಗೆ ರಿಯಲ್ ಎಸ್ಟೇಟ್ ಕುಳಗಳು ಸಹಕಾರ ನೀಡಿರುವ ಸಂಶಯಗಳೂ ಕೇಳಿಬರತೊಡಗಿವೆ. ಸದ್ಯಕ್ಕೆ ಕಾಪು ಪೊಲೀಸರು ಸುರತ್ಕಲ್ ಮತ್ತು ಕಾಟಿಪಳ್ಳ ಪರಿಸರದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಇನ್ನೂ ಮೂವರು ಆರೋಪಿಗಳ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ. ಉಡುಪಿ ಎಸ್ಪಿ ಮಚೇಂದ್ರ ಹಾಕೆ ನೇತೃತ್ವದಲ್ಲಿ ಕಾಪು ವೃತ್ತ ನಿರೀಕ್ಷಕ ಕೆಸಿ ಪೂವಯ್ಯ, ಕಾಪು ಠಾಣೆ ಎಸ್ಐ ಸುಮಾ ಬಿ., ಕ್ರೈಮ್ ಪಿಎಸ್ಐ ಭರತೇಶ್ ತನಿಖೆ ನಡೆಸುತ್ತಿದ್ದಾರೆ.
ರಿಯಲ್ ಎಸ್ಟೇಟ್ ನಡೆಸುತ್ತಿದ್ದ ವ್ಯಕ್ತಿಯ ಬರ್ಬರ ಹತ್ಯೆ ; ಪಾಂಗಾಳ ಸೇತುವೆ ಬಳಿ ಕೃತ್ಯ
Udupi real estate relator Sharath shetty murder, two from mangalore surathkal arrested by Kapu police. Love matter has resulted to murder. A youth was hacked to death by a gang of miscreants in Pangala here on Sunday, February 5 evening. The victim is identified as Sharath Shetty, a resident of Pangala. He was involved in real estate business. The incident took place near Pangala Temple on National Highway 66. Sharath Shetty was attending Bhootada Kola in the temple premises when the miscreants allegedly called him out.
Later, the gang, reportedly, attacked him with sharp weapons.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm