ಬ್ರೇಕಿಂಗ್ ನ್ಯೂಸ್
08-02-23 08:33 pm Bangalore Correspondent ಕ್ರೈಂ
ಬೆಂಗಳೂರು, ಫೆ.8 : ಮೊಮ್ಮಗಳ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದ ಆಕೆಯ 70 ವರ್ಷ ವಯಸ್ಸಿನ ತಾತನಿಗೆ 20 ವರ್ಷ ಸೆರೆವಾಸ 1 ಲಕ್ಷದ 30 ಸಾವಿರ ದಂಡ ವಿಧಿಸಿ ಬೆಂಗಳೂರಿನ ಫಾಸ್ಟ್ ಟ್ಯ್ರಾಕ್ ಸೆಷನ್ ಕೋರ್ಟ್ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.
ನಗರದ ಕುಮಾರಸ್ವಾಮಿ ಲೇಔಟ್ನಲ್ಲಿ ಪೋಷಕರೊಂದಿಗೆ ಬಾಲಕಿ ವಾಸವಿದ್ದಳು. ಆರೋಪಿ ವೃದ್ಧ ಸಹ ಅವರೊಂದಿಗೆ ವಾಸವಿದ್ದರು. ಅಶ್ಲೀಲ ವಿಡಿಯೋಗಳನ್ನ ವೀಕ್ಷಿಸುವ ಅಭ್ಯಾಸ ಹೊಂದಿದ್ದ ಆರೋಪಿ, ಬಾಲಕಿಯ ಪೋಷಕರು ಕೆಲಸಕ್ಕೆ ಹೋದಾಗ ಮೊಮ್ಮಗಳನ್ನ ಆಟವಾಡಿಸುವ ನೆಪದಲ್ಲಿ ಆಕೆಯ ಮೈಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರಂತೆ.

ಸತತ ಐದು ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ ; ಅಶ್ಲೀಲ ವಿಡಿಯೋ ವೀಕ್ಷಿಸುವಂತೆ ಕಿರಿಕುಳ :
3ನೇ ತರಗತಿಯಿಂದ 8ನೇ ತರಗತಿವರೆಗೂ ಮೊಮ್ಮಗಳಿಗೆ ಅಶ್ಲೀಲ ವಿಡಿಯೋ ತೋರಿಸಿ, ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಬೆದರಿಸಿ ಲೈಂಗಿಕ ದೌರ್ಜನ್ಯವೆಸಗಿದ್ದರಂತೆ. ಮಾತ್ರವಲ್ಲ, ಕೃತ್ಯದ ಕುರಿತು ಯಾರಿಗಾದರೂ ತಿಳಿಸಿದರೆ ಬಾಲಕಿಯ ತಂದೆಯನ್ನ ಸಾಯಿಸುವುದಾಗಿ ಬೆದರಿಕೆ ಹಾಕಿದ್ದರಂತೆ.
ಮೂರು ವರ್ಷಗಳ ಹಿಂದೆ ಬೆಳಕಿಗೆ ಬಂದಿದ್ದ ಪ್ರಕರಣ:
ಸತತ ಐದು ವರ್ಷಗಳ ಕಾಲ ಬಾಲಕಿ ತನ್ನ ಮೇಲೆ ನಡೆದಿದ್ದ ದೌರ್ಜನ್ಯ ಸಹಿಸಿಕೊಂಡಿದ್ದಳು. ಬಳಿಕ 2020ರಲ್ಲಿ 8ನೇ ತರಗತಿ ಓದುತ್ತಿದ್ದ ಬಾಲಕಿ ಕೃತ್ಯದ ಕುರಿತು ಕೊನೆಗೂ ತನ್ನ ಪೋಷಕರಿಗೆ ಈ ಕುರಿತು ತಿಳಿಸಿದ್ದಳು.

ಪೊಲೀಸರಿಗೆ ದೂರು ನೀಡಿದ್ದ ಪೋಷಕರು:
ಬಳಿಕ ಆಕೆಯ ಪೋಷಕರು ಕುಮಾರಸ್ವಾಮಿ ಲೇಔಟ್ ಠಾಣೆಗೆ ನೀಡಿದ ದೂರಿನನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ದೂರುದಾರರ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ಪಿ.ಕೃಷ್ಣವೇಣಿ ವಾದ ಮಂಡಿಸಿದ್ದರು.
A fast-track court for Protection of Children from Sexual Of ences (Pocso) Act cases in the city on Tuesday sentenced a 70-year-old man to undergo 20-year imprisonment The septuagenarian was convicted of sexually assaulting his minor granddaughter in the years between 2015 and 2020.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am