ಬ್ರೇಕಿಂಗ್ ನ್ಯೂಸ್
04-08-20 03:37 pm Headline Karnataka News Network ಕ್ರೈಂ
ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಿಯಾ ವಿರುದ್ಧ ಪಾಟ್ನಾ ಪೊಲೀಸರು 48 ಪುಟಗಳ ಸಾಕ್ಷಿ ಸಂಗ್ರಹಿಸಿದ್ದಾರೆ ಎಂದು ವರದಿಯಾಗಿದೆ.
ಸುಶಾಂತ್ ನಿಧನದ ಬಳಿಕ ಅಜ್ಞಾತ ಸ್ಥಳದಲ್ಲಿರುವ ರಿಯಾ ಚಕ್ರವರ್ತಿ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಇತ್ತೀಚೆಗೆ ವಿಡಿಯೋ ಮೂಲಕ ರಿಯಾ ಚಕ್ರವರ್ತಿ ಸಂದೇಶ ರವಾನಿಸಿದ್ದರು. ಪ್ರಕರಣದ ತನಿಖೆಯನ್ನು ಮುಂಬೈ ಪೊಲೀಸರು ನಡೆಸುತ್ತಿದ್ದು, ಸುಶಾಂತ್ ತಂದೆ ಕೆ.ಕೆ.ಸಿಂಗ್ ಪಾಟ್ನಾದಲ್ಲಿ ರಿಯಾ ಚಕ್ರವರ್ತಿ ಮತ್ತು ಕುಟುಂಬಸ್ಥರ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪಾಟ್ನಾ ಪೊಲೀಸರು ರಿಯಾ ಬಂಧನಕ್ಕಾಗಿ ಸಾಕ್ಷಿ ಸಂಗ್ರಹಿಸುತ್ತಿದ್ದಾರೆ.
ಈಗಾಗಲೇ ಪಾಟ್ನಾ ಪೊಲೀಸರು 48 ಪುಟಗಳಷ್ಟು ಸಾಕ್ಷಿ ಸಂಗ್ರಹಿಸಿದ್ದಾರೆ ಎನ್ನಲಾಗಿದೆ. ಈ 48 ಪುಟಗಳಲ್ಲಿ ರಿಯಾ ಮತ್ತು ಸುಶಾಂತ್ ನಡುವೆ ನಡೆದ ಬ್ಯಾಂಕ್ ವ್ಯವಹಾರಗಳ ಮಾಹಿತಿ ಇದೆ. 13 ಪುಟಗಳಲ್ಲಿ ಸುಶಾಂತ್ ಮಾಜಿ ಗೆಳತಿ, ನಟಿ ಅಂಕಿತಾ ಲೋಖಂಡೆ ಜೊತೆ ವಾಟ್ಸಪ್ ಸಂದೇಶಗಳ ಸ್ಕ್ರೀನ್ ಶಾಟ್, ಆರು ಜನರ ಹೇಳಿಕೆಗಳು ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷಿಯ ಟೆಲಿಫೋನ್ ಹೇಳಿಕೆ ಸಹ ಈ ಪುಟಗಳಲ್ಲಿದೆ ಎಂದು ಪ್ರಕಟವಾಗಿದೆ.
ಈ ಎಲ್ಲ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿ ರಿಯಾ ಚಕ್ರವರ್ತಿಯ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಗೊಳಿಸುವಂತೆ ಪೊಲೀಸರು ಮನವಿ ಮಾಡಿಕೊಳ್ಳಲಿದ್ದಾರೆ. ಸುಶಾಂತ್ ಹೊಂದಿದ್ದ ಮೂರು ಬ್ಯಾಂಕ್ ಖಾತೆಗಳ ಮಾಹಿತಿ, ಯುಪಿಐ ಪೇಮೆಂಟ್, ಸ್ಟೇಟ್ಮೆಂಟ್ ಮತ್ತು ಚಾರ್ಟೆಡ್ ಅಕೌಂಟೆಂಟ್ ಲೇಜರ್ ಬ್ಯಾಲೆನ್ಸ್ ಕಾಪಿಯನ್ನು ಸಹ ಪೊಲೀಸರು ತರಿಸಿಕೊಂಡಿದ್ದಾರೆ.
ಸುಶಾಂತ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಟ್ನಾ ಮತ್ತು ಮುಂಬೈ ಪೊಲೀಸರು ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದ್ದಾರೆ. ಇನ್ನು ಬಿಹಾರ ಸಿಎಂ ನಿತೀಶ್ ಕುಮಾರ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 08:30 pm
HK News Desk
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm