ಬ್ರೇಕಿಂಗ್ ನ್ಯೂಸ್
20-02-23 10:25 pm Mangalore Correspondent ಕ್ರೈಂ
ಪುತ್ತೂರು, ಫೆ.20 : ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣಕ್ಕೆ ಹೊರಟಿದ್ದ ಕೆಎಸ್ಸಾರ್ಟಿಸಿ ಬಸ್ ನಲ್ಲಿ ಪ್ರಯಾಣಿಕನೊಬ್ಬ ಮಹಿಳಾ ಕಂಡಕ್ಟರ್ ಮೇಲೆ ಹಲ್ಲೆಗೈದು ಅವಾಚ್ಯವಾಗಿ ನಿಂದಿಸಿದ ಘಟನೆ ನಡೆದಿದೆ.
ಈ ಬಗ್ಗೆ ಸಂತ್ರಸ್ತ ಮಹಿಳಾ ಕಂಡಕ್ಟರ್ ಪುತ್ತೂರು ಠಾಣೆಗೆ ದೂರು ನೀಡಿದ್ದಾರೆ. ಸೋಮವಾರ ಮಧ್ಯಾಹ್ನ ಪುತ್ತೂರಿನಿಂದ ಮಂಗಳೂರಿಗೆ ಹೊರಟಿದ್ದ ಬಸ್ ನಲ್ಲಿ ಕಿಕ್ಕಿರಿದು ತುಂಬುವಷ್ಟು ಪ್ರಯಾಣಿಕರಿದ್ದರು. ಈ ವೇಳೆ, ಬಸ್ಸಿಗೆ ಅಂಗವಿಕಲ ವ್ಯಕ್ತಿಯೊಬ್ಬರು ಹತ್ತಿದ್ದು ಕಂಡಕ್ಟರ್ ಆಗಿದ್ದ ಮಹಿಳೆ ಅಂಗವಿಕಲ ವ್ಯಕ್ತಿಗಳಿಗೆ ಮೀಸಲಾಗಿರುವ ಸೀಟು ಬಿಟ್ಟು ಕೊಡುವಂತೆ ಪ್ರಯಾಣಿಕನಿಗೆ ಹೇಳಿದ್ದಾರೆ.
ಇದರಿಂದ ಸಿಟ್ಟುಗೊಂಡ ಪ್ರಯಾಣಿಕ ವ್ಯಕ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಕಂಡಕ್ಟರ್ ಮಹಿಳೆಯ ಕಾಲರ್ ಹಿಡಿದು ಎಳೆದಿದ್ದಾನೆ. ಅಲ್ಲದೆ, ಹಲ್ಲೆಗೆ ಮುಂದಾಗಿದ್ದು ಅಡ್ಡ ಕೈಹಿಡಿದ ಮಹಿಳೆಯ ಕೈಯನ್ನು ಹಿಡಿದು ತಿರುಚಿದ್ದಾರೆ. ಇದಾಗುತ್ತಲೇ ಚಾಲಕ ಬಸ್ ನಿಲ್ಲಿಸಿ ಕಂಡಕ್ಟರ್ ನೆರವಿಗೆ ಬಂದಿದ್ದಾರೆ. ಬಸ್ ಪುತ್ತೂರು ಹೊರವಲಯದ ಪ್ರಗತಿ ಆಸ್ಪತ್ರೆ ಬಳಿ ನಿಲ್ಲುತ್ತಿದ್ದಂತೆ ಆರೋಪಿ ಪ್ರಯಾಣಿಕ ಬಸ್ ಇಳಿದು ಪರಾರಿಯಾಗಿದ್ದಾನೆ.
ಕಂಡಕ್ಟರ್ ಮಹಿಳೆ, ಆರೋಪಿಯ ಬಗ್ಗೆ ಇತರ ಪ್ರಯಾಣಿಕರ ಜೊತೆಗೆ ಮಾತನಾಡಿದ ವೇಳೆ ಆತನ ಹೆಸರು ಹಸನ್ ಮುರ ಎಂದು ಗೊತ್ತಾಗಿದೆ. ಆರೋಪಿಯ ಹೆಸರು ಉಲ್ಲೇಖಿಸಿ ಕಂಡಕ್ಟರ್ ಪುತ್ತೂರಿನ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ತನ್ನ ಕೈ ತಿರುಚಿದ್ದರಿಂದ ಗಾಯಗೊಂಡಿರುವ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೈ ಹಿಡಿದು ಮಹಿಳೆಯ ಮೈಗೆ ಹಾಕಿದ್ದರಿಂದ ಆರೋಪಿ ವಿರುದ್ಧ ಹಲ್ಲೆ ಮತ್ತು ಮಾನಭಂಗ ಯತ್ನ ಪ್ರಕರಣ ದಾಖಲಾಗಿದೆ.
In a shocking incident, a woman conductor was allegedly assaulted and abused by a passenger of a KSRTC bus which was on its way from Puttur to The State Bank bus stand in Mangaluru.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm