ಬ್ರೇಕಿಂಗ್ ನ್ಯೂಸ್
20-02-23 10:25 pm Mangalore Correspondent ಕ್ರೈಂ
ಪುತ್ತೂರು, ಫೆ.20 : ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣಕ್ಕೆ ಹೊರಟಿದ್ದ ಕೆಎಸ್ಸಾರ್ಟಿಸಿ ಬಸ್ ನಲ್ಲಿ ಪ್ರಯಾಣಿಕನೊಬ್ಬ ಮಹಿಳಾ ಕಂಡಕ್ಟರ್ ಮೇಲೆ ಹಲ್ಲೆಗೈದು ಅವಾಚ್ಯವಾಗಿ ನಿಂದಿಸಿದ ಘಟನೆ ನಡೆದಿದೆ.
ಈ ಬಗ್ಗೆ ಸಂತ್ರಸ್ತ ಮಹಿಳಾ ಕಂಡಕ್ಟರ್ ಪುತ್ತೂರು ಠಾಣೆಗೆ ದೂರು ನೀಡಿದ್ದಾರೆ. ಸೋಮವಾರ ಮಧ್ಯಾಹ್ನ ಪುತ್ತೂರಿನಿಂದ ಮಂಗಳೂರಿಗೆ ಹೊರಟಿದ್ದ ಬಸ್ ನಲ್ಲಿ ಕಿಕ್ಕಿರಿದು ತುಂಬುವಷ್ಟು ಪ್ರಯಾಣಿಕರಿದ್ದರು. ಈ ವೇಳೆ, ಬಸ್ಸಿಗೆ ಅಂಗವಿಕಲ ವ್ಯಕ್ತಿಯೊಬ್ಬರು ಹತ್ತಿದ್ದು ಕಂಡಕ್ಟರ್ ಆಗಿದ್ದ ಮಹಿಳೆ ಅಂಗವಿಕಲ ವ್ಯಕ್ತಿಗಳಿಗೆ ಮೀಸಲಾಗಿರುವ ಸೀಟು ಬಿಟ್ಟು ಕೊಡುವಂತೆ ಪ್ರಯಾಣಿಕನಿಗೆ ಹೇಳಿದ್ದಾರೆ.
ಇದರಿಂದ ಸಿಟ್ಟುಗೊಂಡ ಪ್ರಯಾಣಿಕ ವ್ಯಕ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಕಂಡಕ್ಟರ್ ಮಹಿಳೆಯ ಕಾಲರ್ ಹಿಡಿದು ಎಳೆದಿದ್ದಾನೆ. ಅಲ್ಲದೆ, ಹಲ್ಲೆಗೆ ಮುಂದಾಗಿದ್ದು ಅಡ್ಡ ಕೈಹಿಡಿದ ಮಹಿಳೆಯ ಕೈಯನ್ನು ಹಿಡಿದು ತಿರುಚಿದ್ದಾರೆ. ಇದಾಗುತ್ತಲೇ ಚಾಲಕ ಬಸ್ ನಿಲ್ಲಿಸಿ ಕಂಡಕ್ಟರ್ ನೆರವಿಗೆ ಬಂದಿದ್ದಾರೆ. ಬಸ್ ಪುತ್ತೂರು ಹೊರವಲಯದ ಪ್ರಗತಿ ಆಸ್ಪತ್ರೆ ಬಳಿ ನಿಲ್ಲುತ್ತಿದ್ದಂತೆ ಆರೋಪಿ ಪ್ರಯಾಣಿಕ ಬಸ್ ಇಳಿದು ಪರಾರಿಯಾಗಿದ್ದಾನೆ.
ಕಂಡಕ್ಟರ್ ಮಹಿಳೆ, ಆರೋಪಿಯ ಬಗ್ಗೆ ಇತರ ಪ್ರಯಾಣಿಕರ ಜೊತೆಗೆ ಮಾತನಾಡಿದ ವೇಳೆ ಆತನ ಹೆಸರು ಹಸನ್ ಮುರ ಎಂದು ಗೊತ್ತಾಗಿದೆ. ಆರೋಪಿಯ ಹೆಸರು ಉಲ್ಲೇಖಿಸಿ ಕಂಡಕ್ಟರ್ ಪುತ್ತೂರಿನ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ತನ್ನ ಕೈ ತಿರುಚಿದ್ದರಿಂದ ಗಾಯಗೊಂಡಿರುವ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೈ ಹಿಡಿದು ಮಹಿಳೆಯ ಮೈಗೆ ಹಾಕಿದ್ದರಿಂದ ಆರೋಪಿ ವಿರುದ್ಧ ಹಲ್ಲೆ ಮತ್ತು ಮಾನಭಂಗ ಯತ್ನ ಪ್ರಕರಣ ದಾಖಲಾಗಿದೆ.
In a shocking incident, a woman conductor was allegedly assaulted and abused by a passenger of a KSRTC bus which was on its way from Puttur to The State Bank bus stand in Mangaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am