ಬ್ರೇಕಿಂಗ್ ನ್ಯೂಸ್
20-02-23 10:25 pm Mangalore Correspondent ಕ್ರೈಂ
ಪುತ್ತೂರು, ಫೆ.20 : ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣಕ್ಕೆ ಹೊರಟಿದ್ದ ಕೆಎಸ್ಸಾರ್ಟಿಸಿ ಬಸ್ ನಲ್ಲಿ ಪ್ರಯಾಣಿಕನೊಬ್ಬ ಮಹಿಳಾ ಕಂಡಕ್ಟರ್ ಮೇಲೆ ಹಲ್ಲೆಗೈದು ಅವಾಚ್ಯವಾಗಿ ನಿಂದಿಸಿದ ಘಟನೆ ನಡೆದಿದೆ.
ಈ ಬಗ್ಗೆ ಸಂತ್ರಸ್ತ ಮಹಿಳಾ ಕಂಡಕ್ಟರ್ ಪುತ್ತೂರು ಠಾಣೆಗೆ ದೂರು ನೀಡಿದ್ದಾರೆ. ಸೋಮವಾರ ಮಧ್ಯಾಹ್ನ ಪುತ್ತೂರಿನಿಂದ ಮಂಗಳೂರಿಗೆ ಹೊರಟಿದ್ದ ಬಸ್ ನಲ್ಲಿ ಕಿಕ್ಕಿರಿದು ತುಂಬುವಷ್ಟು ಪ್ರಯಾಣಿಕರಿದ್ದರು. ಈ ವೇಳೆ, ಬಸ್ಸಿಗೆ ಅಂಗವಿಕಲ ವ್ಯಕ್ತಿಯೊಬ್ಬರು ಹತ್ತಿದ್ದು ಕಂಡಕ್ಟರ್ ಆಗಿದ್ದ ಮಹಿಳೆ ಅಂಗವಿಕಲ ವ್ಯಕ್ತಿಗಳಿಗೆ ಮೀಸಲಾಗಿರುವ ಸೀಟು ಬಿಟ್ಟು ಕೊಡುವಂತೆ ಪ್ರಯಾಣಿಕನಿಗೆ ಹೇಳಿದ್ದಾರೆ.
ಇದರಿಂದ ಸಿಟ್ಟುಗೊಂಡ ಪ್ರಯಾಣಿಕ ವ್ಯಕ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಕಂಡಕ್ಟರ್ ಮಹಿಳೆಯ ಕಾಲರ್ ಹಿಡಿದು ಎಳೆದಿದ್ದಾನೆ. ಅಲ್ಲದೆ, ಹಲ್ಲೆಗೆ ಮುಂದಾಗಿದ್ದು ಅಡ್ಡ ಕೈಹಿಡಿದ ಮಹಿಳೆಯ ಕೈಯನ್ನು ಹಿಡಿದು ತಿರುಚಿದ್ದಾರೆ. ಇದಾಗುತ್ತಲೇ ಚಾಲಕ ಬಸ್ ನಿಲ್ಲಿಸಿ ಕಂಡಕ್ಟರ್ ನೆರವಿಗೆ ಬಂದಿದ್ದಾರೆ. ಬಸ್ ಪುತ್ತೂರು ಹೊರವಲಯದ ಪ್ರಗತಿ ಆಸ್ಪತ್ರೆ ಬಳಿ ನಿಲ್ಲುತ್ತಿದ್ದಂತೆ ಆರೋಪಿ ಪ್ರಯಾಣಿಕ ಬಸ್ ಇಳಿದು ಪರಾರಿಯಾಗಿದ್ದಾನೆ.
ಕಂಡಕ್ಟರ್ ಮಹಿಳೆ, ಆರೋಪಿಯ ಬಗ್ಗೆ ಇತರ ಪ್ರಯಾಣಿಕರ ಜೊತೆಗೆ ಮಾತನಾಡಿದ ವೇಳೆ ಆತನ ಹೆಸರು ಹಸನ್ ಮುರ ಎಂದು ಗೊತ್ತಾಗಿದೆ. ಆರೋಪಿಯ ಹೆಸರು ಉಲ್ಲೇಖಿಸಿ ಕಂಡಕ್ಟರ್ ಪುತ್ತೂರಿನ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ತನ್ನ ಕೈ ತಿರುಚಿದ್ದರಿಂದ ಗಾಯಗೊಂಡಿರುವ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೈ ಹಿಡಿದು ಮಹಿಳೆಯ ಮೈಗೆ ಹಾಕಿದ್ದರಿಂದ ಆರೋಪಿ ವಿರುದ್ಧ ಹಲ್ಲೆ ಮತ್ತು ಮಾನಭಂಗ ಯತ್ನ ಪ್ರಕರಣ ದಾಖಲಾಗಿದೆ.
In a shocking incident, a woman conductor was allegedly assaulted and abused by a passenger of a KSRTC bus which was on its way from Puttur to The State Bank bus stand in Mangaluru.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 05:25 pm
Mangalore Correspondent
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm