ಬ್ರೇಕಿಂಗ್ ನ್ಯೂಸ್
23-02-23 10:16 pm HK News Desk ಕ್ರೈಂ
ಮಂಜೇಶ್ವರ, ಫೆ.23: ಇಲ್ಲಿನ ಮೀಯಪದವಿನಲ್ಲಿ ಬುಧವಾರ ರಾತ್ರಿ ಎರಡು ಲಾರಿಗಳನ್ನು ಅಡ್ಡಗಟ್ಟಿದ ತಂಡವೊಂದು ಪಿಸ್ತೂಲ್ ತೋರಿಸಿ ದರೋಡೆಗೈದ ಘಟನೆ ನಡೆದಿದ್ದು, ಮಂಜೇಶ್ವರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ ಒಂದು ಪಿಸ್ತೂಲ್, ನಾಲ್ಕು ಜೀವಂತ ಗುಂಡು ಮತ್ತು ಕಾರನ್ನು ವಶಕ್ಕೆ ಪಡೆಯಲಾಗಿದೆ. ಬುಧವಾರ ಸಂಜೆ ಆರೋಪಿಗಳ ತಂಡ ಎರಡು ಲಾರಿಯನ್ನು ತಡೆದು ನಿಲ್ಲಿಸಿ, ಚಾಲಕರನ್ನು ಬಲವಂತದಿಂದ ಕೆಳಕ್ಕಿಳಿಸಿ ಬಳಿಕ ಲಾರಿಯನ್ನು ಡ್ರೈವ್ ಮಾಡಿಕೊಂಡು ಹೋಗಿದ್ದರು. ಲಾರಿಯ ಚಾಲಕರಲ್ಲಿದ್ದ ಮೊಬೈಲ್ ಮತ್ತು ಹಣವನ್ನು ಕಿತ್ತುಕೊಂಡು ದರೋಡೆಗೈದು ತಂಡ ಪರಾರಿಯಾಗಿತ್ತು.
ಮಂಜೇಶ್ವರ ಪೊಲೀಸರು ವಿಷಯ ತಿಳಿದು ಆರೋಪಿಗಳಿದ್ದ ಲಾರಿಯನ್ನು ಬೆನ್ನಟ್ಟಿದ್ದರು. ಆರೋಪಿಗಳು ಲಾರಿಯನ್ನು ಪೈವಳಿಕೆ- ಕೊಮ್ಮಂಗಲ ರಸ್ತೆಯಲ್ಲಿ ಬಿಟ್ಟು ಪರಾರಿಯಾಗಲು ಯತ್ನಿಸಿದ್ದಾರೆ. ಅಷ್ಟರಲ್ಲಿ ಪೊಲೀಸರು ಇಬ್ಬರನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ. ಆನಂತರ, ಕಾರು ಮತ್ತು ಇನ್ನಿಬ್ಬರು ಆರೋಪಿಗಳನ್ನೂ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಹಾರಾಷ್ಟ್ರ ನಾಸಿಕ್ ಮೂಲದ ರಾಕೇಶ್ ಕಿಶೋರ್ (25), ಸೋಂಕಾಲ್ ನಿವಾಸಿ ಹೈದರ್ ಆಲಿ(26), ಪೈವಳಿಕೆ ಕಲಾಯಿ ನಿವಾಸಿ ಸಯಾಫ್(22) ಮತ್ತು ಮೀಯಪದವು ನಿವಾಸಿ ಮೊಹಮ್ಮದ್ ಸಫ್ವಾನ್(24) ಎಂದು ಗುರುತಿಸಲಾಗಿದೆ.
ಮೀಯಪದವು ನಿವಾಸಿ, ನಟೋರಿಯಸ್ ರೌಡಿಶೀಟರ್ ಅಬ್ದುಲ್ ರಹಿಮಾನ್ ನೇತೃತ್ವದಲ್ಲಿ ದರೋಡೆಗೆ ಸಂಚು ರೂಪಿಸಲಾಗಿತ್ತು. ರಹಿಮಾನ್ 25ಕ್ಕೂ ಹೆಚ್ಚು ಪ್ರಕರಣಗಳನ್ನು ಎದುರಿಸುತ್ತಿದ್ದು, ಇತ್ತೀಚೆಗಷ್ಟೇ ಜೈಲಿನಿಂದ ಜಾಮೀನಿನಲ್ಲಿ ಬಿಡುಗಡೆಯಾಗಿದ್ದ. ಪ್ರಕರಣದಲ್ಲಿ ಅಬ್ದುಲ್ ರಹಿಮಾನ್ ಪೊಲೀಸರಿಗೆ ಸಿಗದೆ ಪರಾರಿಯಾಗಿದ್ದಾನೆ.
A gang brandished a revolver and drove away two lorries at Miyapadavu on Wednesday, February 22 in the evening. Police have arrested four accused in this connection. A pistol, four live bullets and a car were confiscated by the police from the arrested persons. The gang was demanding hafta at Miyapadavu at about 6 pm on Wednesday. They brandished a pistol, threatened and forced the drivers to get down from the lorry, robbed them of mobile and cash and drove away the lorries.
18-08-25 10:47 pm
Bangalore Correspondent
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am