ಬ್ರೇಕಿಂಗ್ ನ್ಯೂಸ್
24-02-23 01:23 pm Mangalore Correspondent ಕ್ರೈಂ
ಪುತ್ತೂರು, ಫೆ.24: ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಸೆರೆಹಿಡಿದು ಅದನ್ನು ಬೇರೆ ಕಡೆಗೆ ಒಯ್ಯಲು ಯತ್ನಿಸುತ್ತಿದ್ದಾಗ ಅರಣ್ಯ ಇಲಾಖೆ ಅಧಿಕಾರಿಗಳ ವಾಹನದ ಮೇಲೆ ಕಲ್ಲು ತೂರಾಟ ನಡೆಸಿ ದಾಂಧಲೆ ಎಬ್ಬಿಸಿದ ಘಟನೆ ಕಡಬ ತಾಲೂಕಿನ ಕೊಂಬಾರಿನಲ್ಲಿ ನಡೆದಿದ್ದು ಪ್ರಕರಣ ಸಂಬಂಧಿಸಿ ಪೊಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಮೂರು ದಿನಗಳ ಕಾರ್ಯಾಚರಣೆ ಬಳಿಕ ಗುರುವಾರ ಸಂಜೆ ಕಾಡಾನೆಯನ್ನು ಸೆರೆ ಹಿಡಿಯಲಾಗಿತ್ತು. ಸುಬ್ರಹ್ಮಣ್ಯ ಅರಣ್ಯ ವಲಯದ ಕೊಂಬಾರು ಗ್ರಾಮದಲ್ಲಿ ಆನೆ ಸೆರೆಹಿಡಿದು ರಾತ್ರಿ ವೇಳೆ, ಅದನ್ನು ದುಬಾರೆಯ ಆನೆ ಬಿಡಾರಕ್ಕೆ ಕರೆದೊಯ್ದು ಬಿಟ್ಟು ಬರಲು ಮುಂದಾಗಿದ್ದರು. ಆದರೆ ರಾತ್ರಿ 9 ಗಂಟೆ ಸುಮಾರಿಗೆ ಆನೆಯನ್ನು ಲಾರಿಗೆ ಹಾಕಿ ಬೇರೆ ಕಡೆ ಒಯ್ಯಲು ಮುಂದಾದಾಗ ಸ್ಥಳೀಯರು ಅಡ್ಡಗಟ್ಟಿದ್ದು ಇಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಸೆರೆಹಿಡಿದು ಒಟ್ಟಿಗೆ ತೆಗೆದುಕೊಂಡು ಹೋಗಬೇಕು ಎಂದು ವಾಗ್ವಾದ ಮಾಡಿದ್ದಾರೆ.

ಆದರೆ ಅರಣ್ಯ ಸಿಬಂದಿ ಸೆರೆಹಿಡಿದ ಕಾಡಾನೆಯನ್ನು ಇಲ್ಲಿ ಉಳಿಸಿಕೊಳ್ಳುವಂತಿಲ್ಲ. ಇದನ್ನು ಬಿಟ್ಟು ಬಂದು ಬೇರೆ ಕಾಡಾನೆಗಳನ್ನು ಸೆರೆ ಹಿಡಿಯುವುದಾಗಿ ಹೇಳಿದ್ದಕ್ಕೆ ಸ್ಥಳೀಯರು ಕೇಳಲಿಲ್ಲ. ಸ್ಥಳಕ್ಕೆ ಬಂದ ಪೊಲೀಸರು ಸೇರಿದ್ದ ಜನರನ್ನು ದೂರಕ್ಕೆ ಹೋಗುವಂತೆ ಲಾಟಿ ಹಿಡಿದು ಗದರಿದ್ದಾರೆ. ಇದರಿಂದ ರೊಚ್ಚಿಗೆದ್ದ ಒಂದಷ್ಟು ಜನ ಪೊಲೀಸರು ಮತ್ತು ಅರಣ್ಯಾಧಿಕಾರಿಗಳ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಬಗ್ಗೆ ಪಂಜ ವಲಯದ ಉಪವಲಯ ಅರಣ್ಯಾಧಿಕಾರಿ ಕಡಬ ಠಾಣೆಗೆ ದೂರು ನೀಡಿದ್ದಾರೆ.
ಪೊಲೀಸರು ಜೀವ ಬೆದರಿಕೆ ಸೇರಿ ವಿವಿಧ ಸೆಕ್ಷನ್ ಗಳಡಿ ಕೇಸು ದಾಖಲಿಸಿದ್ದು ಏಳು ಮಂದಿಯನ್ನು ಬಂಧಿಸಿದ್ದಾರೆ.
ಕಾಡಾನೆ ಸೆರೆ ಬೆನ್ನಲ್ಲೇ ಅರಣ್ಯಾಧಿಕಾರಿಗಳ ವಿರುದ್ಧ ತಿರುಗಿದ ಸ್ಥಳೀಯರ ಆಕ್ರೋಶ ; ಕಲ್ಲು ತೂರಾಟ, ಪೊಲೀಸರ ವಾಹನ ಜಖಂ
Kadaba Villagers pelt stones at forest authorities after elephants capture seven arrested.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 05:25 pm
Mangalore Correspondent
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm