ಬ್ರೇಕಿಂಗ್ ನ್ಯೂಸ್
22-10-20 06:09 pm Udupi Correspondent ಕ್ರೈಂ
ಉಡುಪಿ, ಅಕ್ಟೋಬರ್ 22: ವಯಸ್ಸಾದ ಒಂಟಿ ಹೆಂಗಸರು ಹಾಗೂ ಗಂಡಸರನ್ನು ಮರುಳು ಮಾತುಗಳಿಂದ ವಂಚಿಸಿ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ ನಾಲ್ವರು ಅಂತರ್ ರಾಜ್ಯ ಸರಕಳ್ಳರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಇರಾನಿ ಗ್ಯಾಂಗ್ಗೆ ಸೇರಿದ ಮಹಾರಾಷ್ಟ್ರದ ಅಹ್ಮದ್ನಗರ ಜಿಲ್ಲೆ ಶ್ರೀರಾಮಪುರದ ಝಾಕಿರ್ ಹುಸೈನ್ (26), ಕಂಬರ್ ರಹೀಮ್ ಮಿರ್ಜಾ (32), ಅಕ್ಷಯ್ ಸಂಜಯ್ ಗೋಸಾವಿ (22) ಹಾಗೂ ಶಾರುಖ್ ಬಂದೇನವಾಝ್ ಶೇಖ್ (24) ಎಂದು ಗುರುತಿಸಲಾಗಿದೆ.
ಹೊಸದಿಲ್ಲಿ, ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಇವರ ವಿರುದ್ಧ ಪ್ರಕರಣಗಳಿವೆ. ವಯಸ್ಸಾದ ಒಂಟಿ ಮಹಿಳೆಯರು ನಡೆದುಕೊಂಡು ಹೋಗುವಾಗ ಮಾತಿಗೆಳೆದು ನಾವು ಪೊಲೀಸರು, ಮುಂದೆ ಗಲಾಟೆ ನಡೆಯುತ್ತಿದೆ. ನಿಮ್ಮ ಚಿನ್ನಾಭರಣಗಳನ್ನು ಬ್ಯಾಗ್ನಲ್ಲಿ ಹಾಕಿಕೊಂಡು ಹೋಗಿ ಎಂದು ಹೇಳಿ ಅವರಲ್ಲಿದ್ದ ಚಿನ್ನಾಭರಣಗಳನ್ನು ಪಡೆದು ಬ್ಯಾಗಿನಲ್ಲಿ ಹಾಕುವಂತೆ ನಂಬಿಸಿ, ಮೋಸದಿಂದ ಎಗರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆ ವೇಳೆ ಇವರು ನಡೆಸಿದ ಕೃತ್ಯಗಳಲ್ಲಿ ಉಡುಪಿ ನಗರ-1, ಕುಂದಾಪುರ-1, ವಿಜಯಪುರ-4, ಚಿಕ್ಕಮಗಳೂರು-1, ಬಂಟ್ವಾಳ-1 ಹಾಗೂ ಮಂಗಳೂರು ಉರ್ವಾದಲ್ಲಿ ಒಂದು ಪ್ರಕರಣ ದಾಖಲಾಗಿರುವುದು ತಿಳಿದು ಬಂದಿದೆ.
ನಾಲ್ವರು ಆರೋಪಿಗಳನ್ನು ಬಂಧಿಸುವ ವೇಳೆ ಮಂಗಳೂರಿನ ಪ್ರಕರಣದ 12 ಗ್ರಾಂ ತೂಕದ ಚಿನ್ನದ ಚೈನ್ ಸಿಕ್ಕಿದ್ದು ಅವರಿಂದ ಕೃತ್ಯಕ್ಕೆ ಬಳಸಿದ ಕಾರು, ಹೊಂಡಾ ಶೈನ್ ಬೈಕ್, ಎರಡು ಹೆಲ್ಮೆಟ್ ಹಾಗೂ ನಗದು 5,100 ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕರಾದ ವಿಷ್ಣುವರ್ಧನ್ ಎನ್ ಅವರ ನಿರ್ದೇಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ ಹಾಗೂ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಟಿ.ಆರ್. ಜೈಶಂಕರ್ ಅವರ ಮಾರ್ಗದರ್ಶನದಲ್ಲಿ ಉಡುಪಿ ನಗರ ವೃತ್ತದ ಸಿಪಿಐ ಮಂಜುನಾಥ, ಡಿಸಿಐಬಿ ಪೊಲೀಸ್ ನಿರೀಕ್ಷಕ ಮಂಜುನಾಥ ಡಿ.ಆರ್. ಹಾಗೂ ಸಿಬ್ಬಂದಿಗಳು ನಡೆಸಿದ್ದರು.
Udupi Police have arrested four members belonging to the infamous Irani gang from the city. The arrested are identified as Zakhir Hussain (26), Kambar Rahim Mirza (32), Akshay Sanjaya Gosavi (22), and Shaharuk Bande Nawaz Sheikh (24).
16-03-26 03:36 pm
HK News Staffer
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am