ಬ್ರೇಕಿಂಗ್ ನ್ಯೂಸ್
02-03-23 09:29 pm Bangalore Correspondent ಕ್ರೈಂ
ಬೆಂಗಳೂರು, ಮಾ.2: ಅಪಾರ್ಟ್ಮೆಂಟ್ ಮೇಲೆ 15 ಕೋಟಿ ಸಾಲ ಇದೆಯೆಂದು ಹೇಳಿ ಬ್ಯಾಂಕ್ ಸಿಬಂದಿ ಏಕಾಏಕಿ ನ್ಯಾಯಾಲಯದ ಆದೇಶದ ನೆಪದಲ್ಲಿ 29 ಮನೆಗಳನ್ನು ಸೀಜ್ ಮಾಡಿ, ನೂರಕ್ಕೂ ಹೆಚ್ಚು ಮಂದಿಯನ್ನು ಬೀದಿಗೆ ತಳ್ಳಿದ ಘಟನೆ ರಾಜಾಜಿನಗರದಲ್ಲಿ ನಡೆದಿದೆ.
ರಾಜಾಜಿನಗರದ ಶಿವನಹಳ್ಳಿಯ ಐಶ್ವರ್ಯ ಅಪಾರ್ಟ್ಮೆಂಟ್ ನಲ್ಲಿ ಘಟನೆ ನಡೆದಿದೆ. ಶಿವಣ್ಣ ಎಂಬವರಿಗೆ ಸೇರಿದ ಅಪಾರ್ಟ್ಮೆಂಟ್ ಇದಾಗಿದ್ದು, ಬ್ಯಾಂಕ್ ಸಾಲ ಮರುಪಾವತಿ ಮಾಡಿಲ್ಲವೆಂದು ಅಲ್ಲಿರುವ ಮನೆಗಳನ್ನು ಜಪ್ತಿ ಮಾಡಿದ್ದಾರೆ. ಇದರಿಂದ 25 ವರ್ಷಗಳಿಂದ ಮನೆಗಳನ್ನು ಲೀಸ್ ಪಡೆದಿದ್ದವರು ಶಾಕ್ ಆಗಿದ್ದಾರೆ. 29 ಮನೆಗಳ ಸಂಸಾರವನ್ನು ಏಕಾಏಕಿ ಬ್ಯಾಂಕ್ ಸಿಬಂದಿ ಮತ್ತು ಜೊತೆಗೆ ಬಂದಿದ್ದ ಮೂರನೇ ವ್ಯಕ್ತಿಗಳು ದೌರ್ಜನ್ಯ ನಡೆಸಿ ಬೀದಿಗೆ ತಳ್ಳಿದ್ದಾರೆ. ಮನೆಮಂದಿ ಕೂಡಲೇ ಮನೆ ಖಾಲಿ ಮಾಡಬೇಕೆಂದು ಹೇಳಿ ದೌರ್ಜನ್ಯ ಎಸಗಿದ್ದಾರೆ.

ಅಪಾರ್ಟ್ಮೆಂಟ್ ಹೆಸರಲ್ಲಿ ಕೆನರಾ ಬ್ಯಾಂಕ್ ನಿಂದ 15 ಕೋಟಿ ಸಾಲ ಪಡೆದಿದ್ದಾರೆ ಎನ್ನಲಾಗುತ್ತಿದೆ. ಬಹುತೇಕ ಎಲ್ಲ ಕುಟುಂಬದವರು ಮನೆಗಳನ್ನು ಲೀಸ್ ಮೇಲೆ ಪಡೆದಿದ್ದು, ಈಗ ಏಕಾಏಕಿ ಎದ್ದು ಹೋಗಿ ಅಂದರೆ ಎಲ್ಲಿ ಹೋಗುವುದು ಎಂದು ಕಂಗಾಲಾಗಿದ್ದಾರೆ. ಮಾಲೀಕರು ಮಾಡಿದ ದೋಖಾಗೆ ಮನೆಗಳನ್ನು ಭೋಗ್ಯಕ್ಕೆ ಪಡೆದವರು ಈಗ ಸಿಕ್ಕಿಬೀಳುವಂತಾಗಿದೆ ಎನ್ನುವ ಆರೋಪ ಕೇಳಿಬಂದಿದೆ.
25 ವರ್ಷಗಳಿಂದ ನಾವು ಮನೆಯಲ್ಲಿದ್ದೀವಿ, ಇದುವರೆಗೂ ಸಾಲದ ಬಗ್ಗೆ ನಮಗೆ ಗೊತ್ತಿಲ್ಲ, ಇಬ್ಬರು ಬ್ಯಾಂಕ್ ಸಿಬಂದಿ, ಥರ್ಡ್ ಪಾರ್ಟಿಯವರನ್ನು ಕರೆಸ್ಕೊಂಡು ಬಂದು ಮನೆ ಒಳಗಡೆ ನುಗ್ಗಿ ದಾಂಧಲೆ ನಡೆಸಿದ್ದಾರೆ, ಅಮ್ಮನ ಮೇಲೆ ಕಾಲಲ್ಲಿ ಒದ್ದಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದೇ ಇದ್ದಾಗ ಮಧ್ಯಾಹ್ನ ಹೊತ್ತಲ್ಲಿ ಬಂದು ದಾಂಧಲೆ ನಡೆಸಿದರೆ ಹೇಗೆ ಎಂದು ಮಾದೇಶ್ ಎಂಬವರು ಸುದ್ದಿ ವಾಹಿನಿಯ ಜೊತೆಗೆ ಅಲವತ್ತುಕೊಂಡಿದ್ದಾರೆ.
Big scam, 15 crore loan in the name of Aishwarya Apartment in Bengaluru, 29 flats seized by Bank in Bangalore, hundreds homeless. Flat residents were shocked after a sudden raid by bank officials.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm