ಬ್ರೇಕಿಂಗ್ ನ್ಯೂಸ್
02-03-23 10:16 pm Mangalore Correspondent ಕ್ರೈಂ
ಮಂಗಳೂರು, ಮಾ.2: ಒಂದು ತಿಂಗಳ ಹಿಂದೆ ನಗರದ ಮಿಲಾಗ್ರಿಸ್ ಬಳಿ ಜುವೆಲ್ಲರಿ ಉದ್ಯೋಗಿಯನ್ನು ಕತ್ತು ಕೊಯ್ದು ಹತ್ಯೆಗೈದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಸರಗೋಡು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಲ್ಲಿಕೋಟೆಯ ಕೊಯಿಲಾಂಡಿ ನಿವಾಸಿ ಶಿಫಾಸ್ (33) ವಶಕ್ಕೆ ಪಡೆದ ಆರೋಪಿ. ಗುರುವಾರ ಮಧ್ಯಾಹ್ನ ಕ್ಯಾಲಿಕಟ್ ನಿಂದ ರೈಲಿನಲ್ಲಿ ಕಾಸರಗೋಡು ರೈಲು ನಿಲ್ದಾಣಕ್ಕೆ ಬಂದಿದ್ದ ಶಿಫಾಸ್, ಕಾಸರಗೋಡು ನಗರದ ಮಲ್ಲಿಕಾರ್ಜುನ ದೇವಸ್ಥಾನದ ಆವರಣಕ್ಕೆ ಬಂದಾಗಲೇ ಸಿವಿಲ್ ಡ್ರೆಸ್ ನಲ್ಲಿದ್ದ ಪೊಲೀಸರು ಬಲೆಗೆ ಹಾಕಿದ್ದಾರೆ. ಕಾಸರಗೋಡು ಡಿವೈಎಸ್ಪಿ ಸುಧಾಕರನ್ ಮತ್ತು ಡಿಸಿ ಆರ್ ಬಿ ಡಿವೈಎಸ್ಪಿ ಅಬ್ದುಲ್ ರಹೀಂ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.


ಫೆ.3ರಂದು ಮಂಗಳೂರಿನಲ್ಲಿ ಜುವೆಲ್ಲರಿ ನುಗ್ಗಿ ರಾಘವ ಆಚಾರ್ಯ ಎಂಬವರನ್ನು ಹತ್ಯೆಗೈದಿದ್ದ ಆಗಂತುಕ ವ್ಯಕ್ತಿ ಆನಂತರ ಯಾರ ಕೈಗೂ ಸಿಗದೆ ತಲೆಮರೆಸಿಕೊಂಡಿದ್ದ. ಈ ನಡುವೆ, ಆರೋಪಿ ಪತ್ತೆಗಾಗಿ ಸಿಸಿಟಿವಿಯಲ್ಲಿ ದೊರೆತ ಫೋಟೊಗಳನ್ನು ಮಂಗಳೂರು ಪೊಲೀಸರು ಬಿಡುಗಡೆ ಮಾಡಿದ್ದರು. ಮುಖಕ್ಕೆ ಮಾಸ್ಕ್, ತಲೆಗೆ ಟೋಪಿ ಹಾಕಿ ಪರಾರಿಯಾಗಿದ್ದ ಆರೋಪಿಯ ಚಹರೆಯನ್ನು ಪೊಲೀಸರು ನೋಟೀಸ್ ಮೂಲಕ ವಿವಿಧ ಕಡೆಗಳಲ್ಲಿ ಅಂಟಿಸಿದ್ದರು. ಆರೋಪಿ ಮಾಹಿತಿ ಸಿಕ್ಕಲ್ಲಿ ಪೊಲೀಸರಿಗೆ ನೀಡುವಂತೆ ಕೇಳಿಕೊಂಡಿದ್ದರು.


ಒಂದು ತಿಂಗಳ ಕಾಲವೂ ತಲೆಮರೆಸಿಕೊಂಡಿದ್ದ ಆರೋಪಿ ಇದೀಗ ಅಚಾನಕ್ಕಾಗಿ ಬಲೆಗೆ ಬಿದ್ದಿದ್ದಾನೆ. ಆದರೆ ಯಾಕಾಗಿ ಈ ಕೃತ್ಯ ಎಸಗಿದ್ದಾನೆ ಎನ್ನೋದು ಭಾರೀ ಕುತೂಹಲ ಸೃಷ್ಟಿಸಿದೆ. ಮಂಗಳೂರು ಪೊಲೀಸರು ಇನ್ನಷ್ಟೇ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಷ್ಟೆ.
Jewellery shop staffer murdered in Mangaluru, accused arrested in Kasaragod after months. The arrested has been identifed as Shifas (33) from kerala. Raghavendra Acharya alias Raghu (55), working in the shop since seven months, was murdered inside the shop at Hampankatta
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm