ಬ್ರೇಕಿಂಗ್ ನ್ಯೂಸ್
02-03-23 10:16 pm Mangalore Correspondent ಕ್ರೈಂ
ಮಂಗಳೂರು, ಮಾ.2: ಒಂದು ತಿಂಗಳ ಹಿಂದೆ ನಗರದ ಮಿಲಾಗ್ರಿಸ್ ಬಳಿ ಜುವೆಲ್ಲರಿ ಉದ್ಯೋಗಿಯನ್ನು ಕತ್ತು ಕೊಯ್ದು ಹತ್ಯೆಗೈದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಸರಗೋಡು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಲ್ಲಿಕೋಟೆಯ ಕೊಯಿಲಾಂಡಿ ನಿವಾಸಿ ಶಿಫಾಸ್ (33) ವಶಕ್ಕೆ ಪಡೆದ ಆರೋಪಿ. ಗುರುವಾರ ಮಧ್ಯಾಹ್ನ ಕ್ಯಾಲಿಕಟ್ ನಿಂದ ರೈಲಿನಲ್ಲಿ ಕಾಸರಗೋಡು ರೈಲು ನಿಲ್ದಾಣಕ್ಕೆ ಬಂದಿದ್ದ ಶಿಫಾಸ್, ಕಾಸರಗೋಡು ನಗರದ ಮಲ್ಲಿಕಾರ್ಜುನ ದೇವಸ್ಥಾನದ ಆವರಣಕ್ಕೆ ಬಂದಾಗಲೇ ಸಿವಿಲ್ ಡ್ರೆಸ್ ನಲ್ಲಿದ್ದ ಪೊಲೀಸರು ಬಲೆಗೆ ಹಾಕಿದ್ದಾರೆ. ಕಾಸರಗೋಡು ಡಿವೈಎಸ್ಪಿ ಸುಧಾಕರನ್ ಮತ್ತು ಡಿಸಿ ಆರ್ ಬಿ ಡಿವೈಎಸ್ಪಿ ಅಬ್ದುಲ್ ರಹೀಂ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.


ಫೆ.3ರಂದು ಮಂಗಳೂರಿನಲ್ಲಿ ಜುವೆಲ್ಲರಿ ನುಗ್ಗಿ ರಾಘವ ಆಚಾರ್ಯ ಎಂಬವರನ್ನು ಹತ್ಯೆಗೈದಿದ್ದ ಆಗಂತುಕ ವ್ಯಕ್ತಿ ಆನಂತರ ಯಾರ ಕೈಗೂ ಸಿಗದೆ ತಲೆಮರೆಸಿಕೊಂಡಿದ್ದ. ಈ ನಡುವೆ, ಆರೋಪಿ ಪತ್ತೆಗಾಗಿ ಸಿಸಿಟಿವಿಯಲ್ಲಿ ದೊರೆತ ಫೋಟೊಗಳನ್ನು ಮಂಗಳೂರು ಪೊಲೀಸರು ಬಿಡುಗಡೆ ಮಾಡಿದ್ದರು. ಮುಖಕ್ಕೆ ಮಾಸ್ಕ್, ತಲೆಗೆ ಟೋಪಿ ಹಾಕಿ ಪರಾರಿಯಾಗಿದ್ದ ಆರೋಪಿಯ ಚಹರೆಯನ್ನು ಪೊಲೀಸರು ನೋಟೀಸ್ ಮೂಲಕ ವಿವಿಧ ಕಡೆಗಳಲ್ಲಿ ಅಂಟಿಸಿದ್ದರು. ಆರೋಪಿ ಮಾಹಿತಿ ಸಿಕ್ಕಲ್ಲಿ ಪೊಲೀಸರಿಗೆ ನೀಡುವಂತೆ ಕೇಳಿಕೊಂಡಿದ್ದರು.


ಒಂದು ತಿಂಗಳ ಕಾಲವೂ ತಲೆಮರೆಸಿಕೊಂಡಿದ್ದ ಆರೋಪಿ ಇದೀಗ ಅಚಾನಕ್ಕಾಗಿ ಬಲೆಗೆ ಬಿದ್ದಿದ್ದಾನೆ. ಆದರೆ ಯಾಕಾಗಿ ಈ ಕೃತ್ಯ ಎಸಗಿದ್ದಾನೆ ಎನ್ನೋದು ಭಾರೀ ಕುತೂಹಲ ಸೃಷ್ಟಿಸಿದೆ. ಮಂಗಳೂರು ಪೊಲೀಸರು ಇನ್ನಷ್ಟೇ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಷ್ಟೆ.
Jewellery shop staffer murdered in Mangaluru, accused arrested in Kasaragod after months. The arrested has been identifed as Shifas (33) from kerala. Raghavendra Acharya alias Raghu (55), working in the shop since seven months, was murdered inside the shop at Hampankatta
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm