ಬ್ರೇಕಿಂಗ್ ನ್ಯೂಸ್
03-03-23 11:22 am Mangalore Correspondent ಕ್ರೈಂ
ಮಂಗಳೂರು, ಮಾ.3 : ದರೋಡೆ ಉದ್ದೇಶದಿಂದಲೇ ಜುವೆಲ್ಲರಿ ಉದ್ಯೋಗಿಯನ್ನು ಹತ್ಯೆ ಮಾಡಿದ್ದಾಗಿ ಆರೋಪಿ ಶಿಫಾಸ್ ತಪ್ಪೊಪ್ಪಿಕೊಂಡಿದ್ದು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಮಾಹಿತಿ ನೀಡಿದ್ದು ಕಾಸರಗೋಡು, ಮಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿ ಶಿಫಾಸ್ ನನ್ನು ಸೆರೆಹಿಡಿಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಕೋಜಿಕ್ಕೋಡ್ ಜಿಲ್ಲೆಯ ಚೆಮ್ಮಂಚೇರಿ ಪೂಕಾಡ್ ನಿವಾಸಿ ಶಿಫಾಸ್ ಬಂಧಿತ ಆರೋಪಿ. ಈ ಹಿಂದೆ ಮಂಗಳೂರಿನ ಕರಾವಳಿ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಶಿಕ್ಷಣಕ್ಕೆ ಪ್ರವೇಶ ಪಡೆದಿದ್ದ ಶಿಫಾಸ್, ಅಲ್ಲಿ ಬಿಇ ಕೋರ್ಸ್ ಪೂರೈಸದೆ ಎರಡು ವರ್ಷದಲ್ಲಿ ಕಾಲೇಜು ಬಿಟ್ಟು ಹೋಗಿದ್ದ. ಆನಂತರ, 2014ರಿಂದ 2019ರ ವರೆಗೆ ದುಬೈನಲ್ಲಿ ಕೆಲಸ ಮಾಡಿದ್ದ ಶಿಫಾಸ್ ಮತ್ತೆ ಊರಿಗೆ ಬಂದು ಎಸ್ಎನ್ಎನ್ ಗ್ಲೋಬಲ್ ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿದ್ದ.

ಮಂಗಳೂರಿನಲ್ಲಿ ಫೆ.3ರಂದು ಜುವೆಲ್ಲರಿ ಉದ್ಯೋಗಿಯನ್ನು ಕೊಲೆಗೈದು ನಾಪತ್ತೆಯಾಗಿದ್ದ ಆರೋಪಿ, ಕೃತ್ಯದ ಬಳಿಕ ತನ್ನ ಊರು ಕೋಜಿಕ್ಕೋಡ್ ಜಿಲ್ಲೆಗೆ ತೆರಳಿ ತಲೆಮರೆಸಿಕೊಂಡಿದ್ದ. ಈ ನಡುವೆ, ಮಂಗಳೂರು ಪೊಲೀಸರು ಸಿಸಿಟಿವಿ ಆಧರಿಸಿ ಕಾರ್ಯಾಚರಣೆ ನಡೆಸಿದ್ದರು. ಆರೋಪಿ ಕಾಸರಗೋಡು ಮೂಲಕ ತೆರಳಿರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಯ ಚಲನವಲನದ ಬಗ್ಗೆ ಅಲ್ಲಿನ ಪೊಲೀಸರ ಸಹಾಯದಿಂದ ನಿಗಾ ಇಟ್ಟಿದ್ದರು. ಸಿಸಿಟಿವಿಯಲ್ಲಿ ದೊರೆತ ಚಿತ್ರಗಳನ್ನು ರೈಲು ನಿಲ್ದಾಣ, ಬಸ್ ನಿಲ್ದಾಣ ಸೇರಿ ಸಾರ್ವಜನಿಕ ಪ್ರದೇಶಗಳಲ್ಲಿ ಅಂಟಿಸಿ, ಈತನ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರು ಕೇಳಿಕೊಂಡಿದ್ದರು.
ಗುರುವಾರ ಕೋಜಿಕ್ಕೋಡ್ ನಿಂದ ರೈಲು ಮೂಲಕ ಕಾಸರಗೋಡಿಗೆ ಬಂದಿದ್ದು ಎರಡೆರಡು ಶರ್ಟ್ ಧರಿಸಿದ್ದ. ಮುಖಕ್ಕೆ ಮಾಸ್ಕ್ ಹಾಕ್ಕೊಂಡಿದ್ದ. ಹಿಂದಿನ ರೀತಿಯಲ್ಲೇ ದರೋಡೆ ಉದ್ದೇಶದಿಂದ ಸ್ಕೆಚ್ ಹಾಕುತ್ತಿದ್ದ. ಇದೇ ವೇಳೆ, ಕಾಸರಗೋಡು ಪೊಲೀಸರು ಆರೋಪಿಯನ್ನು ಸಂಶಯದಿಂದ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ದರೋಡೆ ಕೃತ್ಯ ಬೆಳಕಿಗೆ ಬಂದಿದೆ.
ಆರೋಪಿ ಶಿಫಾಸ್ ಕ್ಯಾಲಿಕಟ್ ನಲ್ಲಿ ತಂದೆ, ತಾಯಿ, ಪತ್ನಿ ಮತ್ತು ಒಬ್ಬಳು ಮಗಳ ಜೊತೆ ವಾಸ ಮಾಡುತ್ತಿದ್ದ. ಈತನ ಇಬ್ಬರು ಸೋದರರು ದುಬೈನಲ್ಲಿ ಕೆಲಸ ಮಾಡುತ್ತಿದ್ದಾರೆ. ಆರೋಪಿಯನ್ನು ಮಂಗಳೂರಿನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ಕಸ್ಟಡಿಗೆ ಪಡೆಯಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಮಾಹಿತಿ ನೀಡಿದ್ದಾರೆ.
Mangalore Hampankatta jewellery shop staff murder Accused arrested from kerala, intention was robbery claims Police. The Kasargod police have arrested the prime suspect in the murder case at a jewellery shop in Hampankatta. The accused has been identified as 33-year-old Shifaz, a resident of Kozhikode.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am