ಬ್ರೇಕಿಂಗ್ ನ್ಯೂಸ್
04-03-23 05:04 pm Mangaluru Correspondent ಕ್ರೈಂ
ಮಂಗಳೂರು, ಮಾ.4: ಕೊಣಾಜೆ ಠಾಣೆ ವ್ಯಾಪ್ತಿಯ ಪಾವೂರಿನ ಮಲಾರ್ ಗ್ರಾಮದ ಪಲ್ಲಿಯಬ್ಬ ಕೊಲೆ ಪ್ರಕರಣದಲ್ಲಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಎಲ್ಲ ಐದು ಆರೋಪಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸಿದೆ.
ಮಲಾರ್ ಗ್ರಾಮದ ನಿವಾಸಿಗಳಾದ ಮೊಹಮ್ಮದ್ ಹಂಝ(47), ಅಜರುದ್ದೀನ್ ಅಲಿಯಾಸ್ ಅಜರ್ (29), ಸಜಿಪ ನಡು ನಿವಾಸಿಗಳಾದ ಅಮೀರ್ ಅಲಿಯಾಸ್ ಅಮ್ಮಿ(29), ಮೊಹಮ್ಮದ್ ಅಫ್ರಾಜ್(23), ಅತ್ತಾವುಲ್ಲಾ ಅಲಿಯಾಸ್ ಅಲ್ತಾಫ್(23) ಜೀವಾವಧಿ ಶಿಕ್ಷೆಗೊಳಗಾದವರು.
2020ರ ಅಕ್ಟೋಬರ್ 20ರಂದು ಮಲಾರ್ ಗ್ರಾಮದ ಪಲ್ಲಿಯಬ್ಬ ನಾಪತ್ತೆ ಬಗ್ಗೆ ಕೊಣಾಜೆ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿದಾಗ, ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದರು. ಪಲ್ಲಿಯಬ್ಬ ಅದೇ ಗ್ರಾಮದ ಮೊಹಮ್ಮದ್ ಹಂಝನಿಗೆ 72 ಸಾವಿರ ರೂ. ನೀಡಿದ್ದರು. ಹಣ ಮರಳಿಸುವಂತೆ ಒತ್ತಡ ಹೇರುತ್ತಿದ್ದರು. ಹಣದ ವಿಚಾರದಲ್ಲಿ ವಾಗ್ವಾದವೂ ನಡೆದಿತ್ತು. ಆನಂತರ, ಹಂಝ ಮತ್ತು ಅಜರ್ ಹಣವನ್ನು ಕೊಣಾಜೆಯಲ್ಲಿ ಕೊಡಿಸುತ್ತೇನೆಂದು ಆಟೋದಲ್ಲಿ ಕರೆದೊಯ್ದಿದ್ದು, ಇರಾ ಪದವಿನ ನಿರ್ಜನ ಪ್ರದೇಶದಲ್ಲಿ ಇನ್ನಿತರ ಯುವಕರ ಜೊತೆಗೆ ಸೇರಿ ಪಲ್ಲಿಯಬ್ಬ ಅವರನ್ನು ಕೊಲೆಗೈದು ಸುಟ್ಟು ಹಾಕಿದ್ದರು.
ಪಲ್ಲಿಯಬ್ಬ ಅವರ ಸೋದರ ನಾಪತ್ತೆ ಕೇಸು ನೀಡಿದ್ದು ಮತ್ತು ಹಣದ ವಿಚಾರದಲ್ಲಿ ಜಗಳ ಆಗಿರುವ ಬಗ್ಗೆ ಮಾಹಿತಿ ನೀಡಿದ್ದರಿಂದ ತನಿಖೆ ನಡೆಸಿದ ಪೊಲೀಸರು ಕೊಲೆ ಕೃತ್ಯ ಪತ್ತೆ ಮಾಡಿದ್ದರು. ಕೊಣಾಜೆ ಇನ್ಸ್ ಪೆಕ್ಟರ್ ಮಧುಸೂದನ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಬಿಬಿ ಜಕಾತಿ ಅವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಿದ್ದಲ್ಲದೆ, 3 ಲಕ್ಷ ದಂಡ ವಿಧಿಸಿದ್ದಾರೆ. ದಂಡದ ಮೊತ್ತವನ್ನು ಪಲ್ಲಿಯಬ್ಬ ಅವರ ಪುತ್ರಿಗೆ ನೀಡುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ. ಸಂತ್ರಸ್ತರ ಪರವಾಗಿ ಸರಕಾರಿ ವಕೀಲ ನಾರಾಯಣ ಶೇರಿಗಾರ್ ವಾದಿಸಿದ್ದರು.
The city court has sentenced the persons involved in the Palliabba murder case to life imprisonment. The accused who were convicted are Mohammed Hamza (47), Azharuddin alias Azhar (29), residents of Malar, Ameer alias Ammi (29), Mohammed Afraz (23) and Ataullah alias Altaf (23), residents of Sajipa Nadu village. Palliabba was running a finance business, and his brother registered a missing complaint with the police on October 29, 2020. The investigation revealed that Palliabba had gone in an autorickshaw with Hamza, Afraz, Ameer, and Altaf.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am