ಬ್ರೇಕಿಂಗ್ ನ್ಯೂಸ್
06-03-23 08:46 pm HK News Desk ಕ್ರೈಂ
ಮುಂಬೈ, ಮಾ.6 : ಪ್ರೀತಿ ನೆಪದಲ್ಲಿ ಗರ್ಭಿಣಿಯಾಗಿದ್ದ 15ರ ಹರೆಯದ ಬಾಲಕಿಯೊಬ್ಬಳು ಮನೆಯವರಿಗೆ ತಿಳಿಯದಂತೆ ಮುಚ್ಚಿಟ್ಟಿದ್ದಲ್ಲದೆ, ಕೊನೆಗೆ ಯೂಟ್ಯೂಬ್ ನೋಡಿ ಮನೆಯಲ್ಲೇ ಹೆರಿಗೆ ಮಾಡಿಕೊಂಡು, ನವಜಾತ ಶಿಶುವನ್ನು ಕತ್ತು ಹಿಸುಕಿ ಕೊಂದ ಭಯಾನಕ ಘಟನೆ ಮಹಾರಾಷ್ಟದಲ್ಲಿ ನಡೆದಿದೆ.
ನಾಗ್ಪುರದ ಅಂಬಾಜಾರಿ ಪ್ರದೇಶದ ಅಪ್ರಾಪ್ತ ಬಾಲಕಿ ಕೃತ್ಯ ಎಸಗಿರುವಾಕೆ. ಸಾಮಾಜಿಕ ಜಾಲತಾಣದಲ್ಲಿ ಸ್ನೇಹ ಬೆಳೆಸಿದ್ದ ಬಾಲಕಿ ಬಳಿಕ ಹುಡುಗನ ಜೊತೆಗೆ ದೈಹಿಕ ಸಂಬಂಧ ಇರಿಸಿಕೊಂಡಿದ್ದಳು. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದಲ್ಲದೆ 9 ತಿಂಗಳ ಕಾಲವೂ ಮನೆಯವರಿಗೆ ತಿಳಿಸದೆ ಮುಚ್ಚಿಟ್ಟಿದ್ದಳು.
ಆರೋಗ್ಯ ಸಮಸ್ಯೆ ಎಂದು ಮನೆಯವರಿಗೆ ಸುಳ್ಳು
ಬಾಲಕಿಯ ಹೊಟ್ಟೆ ನೋಡಿ ತಾಯಿ ಕೇಳಿದಾಗಲೆಲ್ಲಾ ಹುಡುಗಿ ತನಗೆ ಆರೋಗ್ಯ ಸಮಸ್ಯೆ ಇದೆ ಎಂದು ಸುಳ್ಳು ಹೇಳುತ್ತ ಬಂದಿದ್ದಳು. ಮನೆಯವರಿಂದ ವಿಷಯವನ್ನು ಮುಚ್ಚಿಟ್ಟಿದ್ದ ಬಾಲಕಿ, ವಿಷಯ ಯಾರಿಗೂ ತಿಳಿಯದಂತೆ ತಾನೇ ಹೆರಿಗೆ ಮಾಡಿಕೊಳ್ಳಬೇಕೆಂದು ತೀರ್ಮಾನಿಸಿದ್ದಾಳೆ. ಅದಕ್ಕಾಗಿ ಆಕೆ ಆಯ್ಕೆ ಮಾಡಿಕೊಂಡಿದ್ದು ಯೂಟ್ಯೂಬ್. ಪ್ರತಿದಿನ ಹೆರಿಗೆ ಮಾಡಿಸುವ ವಿಡಿಯೋಗಳನ್ನು ನೋಡಲು ಶುರು ಮಾಡಿದ್ದಳು. ಸ್ವತಃ ಹೆರಿಗೆ ಮಾಡಿಕೊಳ್ಳುವ ಬಗ್ಗೆ ವಿಡಿಯೋಗಳ ಮೂಲಕ ತಿಳಿದುಕೊಂಡ ಬಾಲಕಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹೆರಿಗೆ ಮಾಡಿಕೊಂಡಿದ್ದಾಳೆ.
ಕತ್ತು ಹಿಸುಕಿ ನವಜಾತ ಶಿಶು ಹತ್ಯೆ
ಯೂಟ್ಯೂಬ್ ನೋಡಿಕೊಂಡೇ ಮಾರ್ಚ್ 2ರಂದು ಹೆರಿಗೆ ಮಾಡಿದ್ದ ಬಾಲಕಿ, ಗರ್ಭದಿಂದ ಹೊರಬಂದ ಮಗು ಚೇತರಿಸಿಕೊಳ್ಳುವ ಮುನ್ನವೇ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಬಳಿಕ ಶವವನ್ನು ಮನೆಯಲ್ಲಿದ್ದ ಪೆಟ್ಟಿಗೆಯಲ್ಲಿ ಬಚ್ಚಿಟ್ಟಿದ್ದಾಳೆ. ತಾಯಿ ಹೊರ ಹೋಗಿದ್ದಾಗ ಘಟನೆ ನಡೆದಿದ್ದು ಬಳಿಕ ಬಂದ ತಾಯಿ ತೀವ್ರ ಆಘಾತಗೊಂಡು ಮಲಗಿದ್ದ ಬಾಲಕಿಯನ್ನು ವಿಚಾರಿಸಿದ್ದಾರೆ. ತೀವ್ರ ವಿಚಾರಣೆ ನಡೆಸಿದಾಗ ಬಾಲಕಿ ಸಂಪೂರ್ಣ ತಿಳಿಸಿದ್ದಾಳೆ. ನಂತರ ಬಾಲಕಿಯನ್ನು ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ವಿಷಯ ತಿಳಿದ ಪೊಲೀಸರು ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅಲ್ಲದೆ, ಅಪ್ರಾಪ್ತ ಬಾಲಕಿ ಮತ್ತು ಆಕೆಯ ಪ್ರಿಯಕರನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
A 15-year-old pregnant victim of sexual exploitation watched YouTube videos to train herself and delivered her own baby, and thereafter killed it. Police said after delivery, the girl, who was home alone, strangled the baby with a belt so that the cries would not alert the neighbours.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm