ಬ್ರೇಕಿಂಗ್ ನ್ಯೂಸ್
14-03-23 09:40 pm Mangalore Correspondent ಕ್ರೈಂ
ಮಂಗಳೂರು, ಮಾ.14: ಕೊಲೆ, ಕೊಲೆಯತ್ನ ಸೇರಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ ಜಪಾನ್ ಮಂಗ ಅಲಿಯಾಸ್ ರೋಹನ್ ರೆಡ್ಡಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಿಂದ ಬಂಧಿಸಿದ್ದಾರೆ.
2013ರಲ್ಲಿ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ನಡೆದ ಬಸ್ ಚಾಲಕ ಪ್ರಸನ್ನ ಕೊಲೆ ಪ್ರಕರಣ, ಸುರತ್ಕಲ್ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣ, ಕದ್ರಿಯಲ್ಲಿ ಉದ್ಯಮಿಯೊಬ್ಬರ ಕೊಲೆಯತ್ನ, ಮಂಗಳೂರು ಜೈಲಿನಲ್ಲಿ ಹಲ್ಲೆ ಪ್ರಕರಣ, ನ್ಯಾಯಾಲಯ ಆವರಣದಲ್ಲಿ ಯುವಕನ ಅಟ್ಟಾಡಿಸಿ ಕೊಲೆಯತ್ನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯ ಪತ್ತೆಗೆ ನ್ಯಾಯಾಲಯದಿಂದ ವಾರಂಟ್ ಹೊರಡಿಸಲಾಗಿತ್ತು.
ಮಂಗಳೂರಿನಿಂದ ತಪ್ಪಿಸಿಕೊಂಡು ಬೆಂಗಳೂರು ತೆರಳಿದ್ದ ಆರೋಪಿ ಜಪಾನ್ ಮಂಗ ಅಲ್ಲಿ ತಲೆಮರೆಸಿಕೊಂಡು ಬೇರೆ ಹೆಸರಿನಲ್ಲಿ ನೆಲೆಸಿದ್ದ. ತನ್ನ ಹೆಸರನ್ನು ರೋಹನ್ ರೆಡ್ಡಿ ಎಂಬುದಾಗಿ ಬದಲಿಸಿ ನಕಲಿ ದಾಖಲೆಯನ್ನು ಸೃಷ್ಟಿಸಿದ್ದಲ್ಲದೆ, ಅದೇ ಹೆಸರಿನಲ್ಲಿ ಆಧಾರ್ ಕಾರ್ಡ್ ಮಾಡಿಕೊಂಡಿದ್ದ. ಆಧಾರ್ ಕಾರ್ಡ್ ತೋರಿಸಿ ಹೊಸತಾಗಿ ಮೊಬೈಲ್ ಸಿಮ್ ಖರೀದಿಸಿದ್ದ. 2017ರಲ್ಲಿ ಮಂಗಳೂರಿನ ಕೋರ್ಟಿಗೆ ಕೊನೆಯ ಬಾರಿಗೆ ಹಾಜರಾಗಿದ್ದು, ಆನಂತರ ನಾಪತ್ತೆಯಾಗಿದ್ದ.
2022ರಲ್ಲಿ ಬೆಂಗಳೂರು ನಗರದ ಚಾಮರಾಜಪೇಟೆ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿರುವುದಲ್ಲದೆ, ಪೊಲೀಸ್ ಸಿಬಂದಿಗೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಭಾಗಿಯಾಗಿದ್ದ. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ವಿಭಾಗದ ಎಸಿಪಿ ಪಿ.ಎ. ಹೆಗಡೆ ನೇತೃತ್ವದಲ್ಲಿ ಸಿಬಂದಿ ಪಾಲ್ಗೊಂಡಿದ್ದರು.
Mangalore Notorious criminal Japan Manga absconding since years arrested by police in Bangalore. Japan Manga was wanted in several criminal cases. Commissioner Kuldeep kumar jain who was closely monitoring old cases have succeeded in nabbing the many accused in Mangalore.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 07:23 pm
Mangalore Correspondent
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
07-11-25 08:05 pm
HK News Desk
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm