ಬ್ರೇಕಿಂಗ್ ನ್ಯೂಸ್
14-03-23 09:40 pm Mangalore Correspondent ಕ್ರೈಂ
ಮಂಗಳೂರು, ಮಾ.14: ಕೊಲೆ, ಕೊಲೆಯತ್ನ ಸೇರಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ ಜಪಾನ್ ಮಂಗ ಅಲಿಯಾಸ್ ರೋಹನ್ ರೆಡ್ಡಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಿಂದ ಬಂಧಿಸಿದ್ದಾರೆ.
2013ರಲ್ಲಿ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ನಡೆದ ಬಸ್ ಚಾಲಕ ಪ್ರಸನ್ನ ಕೊಲೆ ಪ್ರಕರಣ, ಸುರತ್ಕಲ್ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣ, ಕದ್ರಿಯಲ್ಲಿ ಉದ್ಯಮಿಯೊಬ್ಬರ ಕೊಲೆಯತ್ನ, ಮಂಗಳೂರು ಜೈಲಿನಲ್ಲಿ ಹಲ್ಲೆ ಪ್ರಕರಣ, ನ್ಯಾಯಾಲಯ ಆವರಣದಲ್ಲಿ ಯುವಕನ ಅಟ್ಟಾಡಿಸಿ ಕೊಲೆಯತ್ನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯ ಪತ್ತೆಗೆ ನ್ಯಾಯಾಲಯದಿಂದ ವಾರಂಟ್ ಹೊರಡಿಸಲಾಗಿತ್ತು.
ಮಂಗಳೂರಿನಿಂದ ತಪ್ಪಿಸಿಕೊಂಡು ಬೆಂಗಳೂರು ತೆರಳಿದ್ದ ಆರೋಪಿ ಜಪಾನ್ ಮಂಗ ಅಲ್ಲಿ ತಲೆಮರೆಸಿಕೊಂಡು ಬೇರೆ ಹೆಸರಿನಲ್ಲಿ ನೆಲೆಸಿದ್ದ. ತನ್ನ ಹೆಸರನ್ನು ರೋಹನ್ ರೆಡ್ಡಿ ಎಂಬುದಾಗಿ ಬದಲಿಸಿ ನಕಲಿ ದಾಖಲೆಯನ್ನು ಸೃಷ್ಟಿಸಿದ್ದಲ್ಲದೆ, ಅದೇ ಹೆಸರಿನಲ್ಲಿ ಆಧಾರ್ ಕಾರ್ಡ್ ಮಾಡಿಕೊಂಡಿದ್ದ. ಆಧಾರ್ ಕಾರ್ಡ್ ತೋರಿಸಿ ಹೊಸತಾಗಿ ಮೊಬೈಲ್ ಸಿಮ್ ಖರೀದಿಸಿದ್ದ. 2017ರಲ್ಲಿ ಮಂಗಳೂರಿನ ಕೋರ್ಟಿಗೆ ಕೊನೆಯ ಬಾರಿಗೆ ಹಾಜರಾಗಿದ್ದು, ಆನಂತರ ನಾಪತ್ತೆಯಾಗಿದ್ದ.
2022ರಲ್ಲಿ ಬೆಂಗಳೂರು ನಗರದ ಚಾಮರಾಜಪೇಟೆ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿರುವುದಲ್ಲದೆ, ಪೊಲೀಸ್ ಸಿಬಂದಿಗೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಭಾಗಿಯಾಗಿದ್ದ. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ವಿಭಾಗದ ಎಸಿಪಿ ಪಿ.ಎ. ಹೆಗಡೆ ನೇತೃತ್ವದಲ್ಲಿ ಸಿಬಂದಿ ಪಾಲ್ಗೊಂಡಿದ್ದರು.
Mangalore Notorious criminal Japan Manga absconding since years arrested by police in Bangalore. Japan Manga was wanted in several criminal cases. Commissioner Kuldeep kumar jain who was closely monitoring old cases have succeeded in nabbing the many accused in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am