ಬ್ರೇಕಿಂಗ್ ನ್ಯೂಸ್
24-10-20 12:31 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 24: ಅತ್ತ ಮಹಾನಗರ ಪಾಲಿಕೆ ಹೊರ ರಾಜ್ಯದ, ಹೊರ ಜಿಲ್ಲೆಗಳ ಬೀಫ್ ಮಾಂಸ ತಂದು ಮಾರುವಂತಿಲ್ಲ ಎಂದು ಸೂಚನೆ ಕೊಟ್ಟಿರುವಾಗಲೇ ಕುದ್ರೋಳಿ ಕಸಾಯಿಖಾನೆಯಲ್ಲಿ ಹೊರಗಿನಿಂದ ತರುತ್ತಿದ್ದ ದನದ ಮಾಂಸ ಪತ್ತೆಯಾಗಿದೆ.
ಟಾಟಾ ಏಸ್ ವಾಹನದಲ್ಲಿ ಎರಡು ಕ್ವಿಂಟಾಲ್ ನಷ್ಟು ದನದ ಮಾಂಸವನ್ನು ತರಲಾಗಿದೆ. ವಾಹನದಲ್ಲಿ ಮಾಂಸ ತರುತ್ತಿದ್ದ ಮಾಹಿತಿ ತಿಳಿದ ಬಜರಂಗದಳ ಕಾರ್ಯಕರ್ತರು ಬೆನ್ನಟ್ಟಿ ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ, ಟಾಟಾ ಏಸ್ ವಾಹನ ತಪ್ಪಿಸಿಕೊಂಡು ಬಂದು ಕುದ್ರೋಳಿ ಕಸಾಯಿಖಾನೆಗೆ ನುಗ್ಗಿದೆ.



ಈ ಬಗ್ಗೆ ಬಜರಂಗದಳ ಕಾರ್ಯಕರ್ತರು, ಬಂದರು ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಕಸಾಯಿಖಾನೆಯಲ್ಲಿ ಪರಿಶೀಲಿಸಿದಾಗ, ಟಾಟಾ ಏಸ್ ವಾಹನದಲ್ಲಿ ಮಾಂಸ ಪತ್ತೆಯಾಗಿದ್ದು ಮಾಂಸ ಸಹಿತ ವಾಹನವನ್ನು ವಶಕ್ಕೆ ಪಡೆದು ಠಾಣೆಯಲ್ಲಿ ಇರಿಸಿದ್ದಾರೆ. ಅದರಲ್ಲಿದ್ದ ಚಾಲಕ ಪರಾರಿಯಾಗಿದ್ದಾನೆ.
ಮಹಾನಗರ ಪಾಲಿಕೆಯಿಂದ ಅಕ್ರಮ ಗೋಹತ್ಯೆ ತಡೆಯುವ ಸಲುವಾಗಿ ಕೆಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ 20 ಬೀಫ್ ಸ್ಟಾಲ್ ಗಳಿದ್ದು ಎಲ್ಲದಕ್ಕೂ ಮಂಗಳೂರಿನ ಅಧಿಕೃತ ಕುದ್ರೋಳಿ ಕಸಾಯಿಖಾನೆಯಿಂದಲೇ ಮಾಂಸ ಪಡೆಯಬೇಕು. ಹೊರ ಜಿಲ್ಲೆಗಳಿಂದ ಮಾಂಸ ತಂದು ಮಾಡುವಂತಿಲ್ಲ. ಜೊತೆಗೆ ಕಸಾಯಿಖಾನೆಯಿಂದ ಮಾಂಸ ಪಡೆದಿದ್ದಕ್ಕೆ ಸೂಕ್ತ ರಶೀದಿ, ದಾಖಲಾತಿ ಇಟ್ಟುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಪಾಲಿಕೆಯ ಈ ಕ್ರಮದಿಂದಾಗಿ ಒಂದು ಹಂತಕ್ಕೆ ಅಕ್ರಮ ಗೋಸಾಗಾಟ ಮತ್ತು ಗೋಮಾಂಸ ಸಾಗಾಟಕ್ಕೆ ಬ್ರೇಕ್ ಬೀಳಬಹುದೆಂಬ ನಿರೀಕ್ಷೆಯಿದೆ.
A tempo van that was illegally transporting about 2 quintals of beef meat was held by Bunder police at Kudroli after Bajarang Dal Activities informed the cops here on Saturday 24 October 2020.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm