ಬ್ರೇಕಿಂಗ್ ನ್ಯೂಸ್
24-10-20 12:31 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 24: ಅತ್ತ ಮಹಾನಗರ ಪಾಲಿಕೆ ಹೊರ ರಾಜ್ಯದ, ಹೊರ ಜಿಲ್ಲೆಗಳ ಬೀಫ್ ಮಾಂಸ ತಂದು ಮಾರುವಂತಿಲ್ಲ ಎಂದು ಸೂಚನೆ ಕೊಟ್ಟಿರುವಾಗಲೇ ಕುದ್ರೋಳಿ ಕಸಾಯಿಖಾನೆಯಲ್ಲಿ ಹೊರಗಿನಿಂದ ತರುತ್ತಿದ್ದ ದನದ ಮಾಂಸ ಪತ್ತೆಯಾಗಿದೆ.
ಟಾಟಾ ಏಸ್ ವಾಹನದಲ್ಲಿ ಎರಡು ಕ್ವಿಂಟಾಲ್ ನಷ್ಟು ದನದ ಮಾಂಸವನ್ನು ತರಲಾಗಿದೆ. ವಾಹನದಲ್ಲಿ ಮಾಂಸ ತರುತ್ತಿದ್ದ ಮಾಹಿತಿ ತಿಳಿದ ಬಜರಂಗದಳ ಕಾರ್ಯಕರ್ತರು ಬೆನ್ನಟ್ಟಿ ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ, ಟಾಟಾ ಏಸ್ ವಾಹನ ತಪ್ಪಿಸಿಕೊಂಡು ಬಂದು ಕುದ್ರೋಳಿ ಕಸಾಯಿಖಾನೆಗೆ ನುಗ್ಗಿದೆ.



ಈ ಬಗ್ಗೆ ಬಜರಂಗದಳ ಕಾರ್ಯಕರ್ತರು, ಬಂದರು ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಕಸಾಯಿಖಾನೆಯಲ್ಲಿ ಪರಿಶೀಲಿಸಿದಾಗ, ಟಾಟಾ ಏಸ್ ವಾಹನದಲ್ಲಿ ಮಾಂಸ ಪತ್ತೆಯಾಗಿದ್ದು ಮಾಂಸ ಸಹಿತ ವಾಹನವನ್ನು ವಶಕ್ಕೆ ಪಡೆದು ಠಾಣೆಯಲ್ಲಿ ಇರಿಸಿದ್ದಾರೆ. ಅದರಲ್ಲಿದ್ದ ಚಾಲಕ ಪರಾರಿಯಾಗಿದ್ದಾನೆ.
ಮಹಾನಗರ ಪಾಲಿಕೆಯಿಂದ ಅಕ್ರಮ ಗೋಹತ್ಯೆ ತಡೆಯುವ ಸಲುವಾಗಿ ಕೆಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ 20 ಬೀಫ್ ಸ್ಟಾಲ್ ಗಳಿದ್ದು ಎಲ್ಲದಕ್ಕೂ ಮಂಗಳೂರಿನ ಅಧಿಕೃತ ಕುದ್ರೋಳಿ ಕಸಾಯಿಖಾನೆಯಿಂದಲೇ ಮಾಂಸ ಪಡೆಯಬೇಕು. ಹೊರ ಜಿಲ್ಲೆಗಳಿಂದ ಮಾಂಸ ತಂದು ಮಾಡುವಂತಿಲ್ಲ. ಜೊತೆಗೆ ಕಸಾಯಿಖಾನೆಯಿಂದ ಮಾಂಸ ಪಡೆದಿದ್ದಕ್ಕೆ ಸೂಕ್ತ ರಶೀದಿ, ದಾಖಲಾತಿ ಇಟ್ಟುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಪಾಲಿಕೆಯ ಈ ಕ್ರಮದಿಂದಾಗಿ ಒಂದು ಹಂತಕ್ಕೆ ಅಕ್ರಮ ಗೋಸಾಗಾಟ ಮತ್ತು ಗೋಮಾಂಸ ಸಾಗಾಟಕ್ಕೆ ಬ್ರೇಕ್ ಬೀಳಬಹುದೆಂಬ ನಿರೀಕ್ಷೆಯಿದೆ.
A tempo van that was illegally transporting about 2 quintals of beef meat was held by Bunder police at Kudroli after Bajarang Dal Activities informed the cops here on Saturday 24 October 2020.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm