ಬ್ರೇಕಿಂಗ್ ನ್ಯೂಸ್
22-03-23 06:46 pm Mangalore Correspondent ಕ್ರೈಂ
ಮಂಗಳೂರು, ಮಾ.22: 13 ವರ್ಷದ ಬಾಲಕಿಯನ್ನು ಪುಸಲಾಯಿಸಿ ಲಾಡ್ಜ್ ಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಬಸ್ ಚಾಲಕ ವೃತ್ತಿಯಲ್ಲಿದ್ದ ವ್ಯಕ್ತಿಯೊಬ್ಬನಿಗೆ ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ ಶಿಕ್ಷೆ ನೀಡಿದೆ.
ಕಾವೂರು ಠಾಣೆ ವ್ಯಾಪ್ತಿಯ ಮರಕಡ ನಿವಾಸಿ ದಯಾನಂದ ದಾನನ್ನವರ್(30) ಶಿಕ್ಷೆಗೊಳಗಾದ ವ್ಯಕ್ತಿ. ಅಪ್ರಾಪ್ತ ಬಾಲಕಿ ಈತನಿಗೆ ಇನ್ ಸ್ಟಾ ಗ್ರಾಮ್ ಮೂಲಕ ಪರಿಚಯ ಆಗಿದ್ದಳು. ಆನಂತರ, ಬಸ್ ಚಾಲಕನಾಗಿದ್ದ ವ್ಯಕ್ತಿ ಆಕೆಯನ್ನು ತನ್ನೊಂದಿಗೆ ಬರುವಂತೆ ಪುಸಲಾಯಿಸುತ್ತಿದ್ದ. ಆದರೆ ಬರಲು ಕೇಳದೇ ಇದ್ದಾಗ 2022ರ ಜನವರಿ 28ರಂದು ಮರಕಡದಿಂದ ಆಟೋ ರಿಕ್ಷಾದಲ್ಲಿ ಕರೆದೊಯ್ದಿದ್ದು, ನೇರವಾಗಿ ಹಂಪನಕಟ್ಟೆ ಬಳಿಯ ಲಾಡ್ಜ್ ಒಂದಕ್ಕೆ ಕರೆದೊಯ್ದಿದ್ದ. ಅಲ್ಲಿ ಲೈಂಗಿಕ ಕಿರುಕುಳ ನೀಡಿದ್ದು, ಆನಂತರ ಆಕೆಯನ್ನು ಮನೆಗೆ ಕಳುಹಿಸಿಕೊಟ್ಟಿದ್ದ.
ಅಲ್ಲದೆ, ಮನೆಯಲ್ಲಿ ಯಾರಿಗೂ ಈ ಬಗ್ಗೆ ಹೇಳಬೇಡ. ಹೇಳಿದರೆ ಜೀವ ಸಹಿತ ಬಿಡುವುದಿಲ್ಲ ಎಂದು ದಯಾನಂದ ಬೆದರಿಕೆ ಒಡ್ಡಿದ್ದ. ಆದರೆ ಬಾಲಕಿ ತನ್ನ ಮೇಲಾದ ಕಿರುಕುಳದ ಬಗ್ಗೆ ಮನೆಯಲ್ಲಿ ಹೇಳಿದ್ದು ಹೆತ್ತವರು ಕಾವೂರು ಠಾಣೆಗೆ ದೂರು ನೀಡಿದ್ದರು. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಧಾಕೃಷ್ಣ ಆರೋಪಿಗೆ 20 ವರ್ಷಗಳ ಶಿಕ್ಷೆ ವಿಧಿಸಿದ್ದಾರೆ. ಅಲ್ಲದೆ, 50 ಸಾವಿರ ದಂಡ ವಿಧಿಸಿದ್ದು, ದಂಡ ತೆರಲು ತಪ್ಪಿದಲ್ಲಿ ನಾಲ್ಕು ತಿಂಗಳ ಶಿಕ್ಷೆ ಅನುಭವಿಸುವಂತೆ ತೀರ್ಪು ನೀಡಿದ್ದಾರೆ.
ಇದಲ್ಲದೆ, ಸಂತ್ರಸ್ತ ಯುವತಿಗೆ ಮೂರು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಜಿಲ್ಲಾಡಳಿತಕ್ಕೆ ಆದೇಶ ಮಾಡಿದೆ. ಅದರಲ್ಲಿ ಒಂದು ಲಕ್ಷ ಕೂಡಲೇ ಆಕೆಯ ಶಿಕ್ಷಣಕ್ಕಾಗಿ ಬಿಡುಗಡೆ ಮಾಡಬೇಕು. ಉಳಿದ ಎರಡು ಲಕ್ಷ ರೂ.ವನ್ನು ಆಕೆಯ ಹೆಸರಲ್ಲಿ ರಾಷ್ಟ್ರೀಯ ಬ್ಯಾಂಕ್ ಖಾತೆಯಲ್ಲಿ ಠೇವಣಿ ಇಡಬೇಕು ಎಂದು ಆದೇಶ ಮಾಡಿದ್ದಾರೆ. ಇನ್ಸ್ ಪೆಕ್ಟರ್ ಎಸ್ ಎಚ್ ಭಜಂತ್ರಿ ತನಿಖೆ ನಡೆಸಿ ದೋಷಾರೋಪ ಸಲ್ಲಿಸಿದ್ದರು. ಸರಕಾರದ ಪರವಾಗಿ ವೆಂಕಟರಮಣ ಸ್ವಾಮಿ ವಾದಿಸಿದ್ದರು.
Additional sessions and FTSC-2 (POCSO) court of the city sentenced a man, accused of sexual harassment of minor to 20 years in prison.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm