ಬ್ರೇಕಿಂಗ್ ನ್ಯೂಸ್
22-03-23 06:46 pm Mangalore Correspondent ಕ್ರೈಂ
ಮಂಗಳೂರು, ಮಾ.22: 13 ವರ್ಷದ ಬಾಲಕಿಯನ್ನು ಪುಸಲಾಯಿಸಿ ಲಾಡ್ಜ್ ಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಬಸ್ ಚಾಲಕ ವೃತ್ತಿಯಲ್ಲಿದ್ದ ವ್ಯಕ್ತಿಯೊಬ್ಬನಿಗೆ ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ ಶಿಕ್ಷೆ ನೀಡಿದೆ.
ಕಾವೂರು ಠಾಣೆ ವ್ಯಾಪ್ತಿಯ ಮರಕಡ ನಿವಾಸಿ ದಯಾನಂದ ದಾನನ್ನವರ್(30) ಶಿಕ್ಷೆಗೊಳಗಾದ ವ್ಯಕ್ತಿ. ಅಪ್ರಾಪ್ತ ಬಾಲಕಿ ಈತನಿಗೆ ಇನ್ ಸ್ಟಾ ಗ್ರಾಮ್ ಮೂಲಕ ಪರಿಚಯ ಆಗಿದ್ದಳು. ಆನಂತರ, ಬಸ್ ಚಾಲಕನಾಗಿದ್ದ ವ್ಯಕ್ತಿ ಆಕೆಯನ್ನು ತನ್ನೊಂದಿಗೆ ಬರುವಂತೆ ಪುಸಲಾಯಿಸುತ್ತಿದ್ದ. ಆದರೆ ಬರಲು ಕೇಳದೇ ಇದ್ದಾಗ 2022ರ ಜನವರಿ 28ರಂದು ಮರಕಡದಿಂದ ಆಟೋ ರಿಕ್ಷಾದಲ್ಲಿ ಕರೆದೊಯ್ದಿದ್ದು, ನೇರವಾಗಿ ಹಂಪನಕಟ್ಟೆ ಬಳಿಯ ಲಾಡ್ಜ್ ಒಂದಕ್ಕೆ ಕರೆದೊಯ್ದಿದ್ದ. ಅಲ್ಲಿ ಲೈಂಗಿಕ ಕಿರುಕುಳ ನೀಡಿದ್ದು, ಆನಂತರ ಆಕೆಯನ್ನು ಮನೆಗೆ ಕಳುಹಿಸಿಕೊಟ್ಟಿದ್ದ.
ಅಲ್ಲದೆ, ಮನೆಯಲ್ಲಿ ಯಾರಿಗೂ ಈ ಬಗ್ಗೆ ಹೇಳಬೇಡ. ಹೇಳಿದರೆ ಜೀವ ಸಹಿತ ಬಿಡುವುದಿಲ್ಲ ಎಂದು ದಯಾನಂದ ಬೆದರಿಕೆ ಒಡ್ಡಿದ್ದ. ಆದರೆ ಬಾಲಕಿ ತನ್ನ ಮೇಲಾದ ಕಿರುಕುಳದ ಬಗ್ಗೆ ಮನೆಯಲ್ಲಿ ಹೇಳಿದ್ದು ಹೆತ್ತವರು ಕಾವೂರು ಠಾಣೆಗೆ ದೂರು ನೀಡಿದ್ದರು. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಧಾಕೃಷ್ಣ ಆರೋಪಿಗೆ 20 ವರ್ಷಗಳ ಶಿಕ್ಷೆ ವಿಧಿಸಿದ್ದಾರೆ. ಅಲ್ಲದೆ, 50 ಸಾವಿರ ದಂಡ ವಿಧಿಸಿದ್ದು, ದಂಡ ತೆರಲು ತಪ್ಪಿದಲ್ಲಿ ನಾಲ್ಕು ತಿಂಗಳ ಶಿಕ್ಷೆ ಅನುಭವಿಸುವಂತೆ ತೀರ್ಪು ನೀಡಿದ್ದಾರೆ.
ಇದಲ್ಲದೆ, ಸಂತ್ರಸ್ತ ಯುವತಿಗೆ ಮೂರು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಜಿಲ್ಲಾಡಳಿತಕ್ಕೆ ಆದೇಶ ಮಾಡಿದೆ. ಅದರಲ್ಲಿ ಒಂದು ಲಕ್ಷ ಕೂಡಲೇ ಆಕೆಯ ಶಿಕ್ಷಣಕ್ಕಾಗಿ ಬಿಡುಗಡೆ ಮಾಡಬೇಕು. ಉಳಿದ ಎರಡು ಲಕ್ಷ ರೂ.ವನ್ನು ಆಕೆಯ ಹೆಸರಲ್ಲಿ ರಾಷ್ಟ್ರೀಯ ಬ್ಯಾಂಕ್ ಖಾತೆಯಲ್ಲಿ ಠೇವಣಿ ಇಡಬೇಕು ಎಂದು ಆದೇಶ ಮಾಡಿದ್ದಾರೆ. ಇನ್ಸ್ ಪೆಕ್ಟರ್ ಎಸ್ ಎಚ್ ಭಜಂತ್ರಿ ತನಿಖೆ ನಡೆಸಿ ದೋಷಾರೋಪ ಸಲ್ಲಿಸಿದ್ದರು. ಸರಕಾರದ ಪರವಾಗಿ ವೆಂಕಟರಮಣ ಸ್ವಾಮಿ ವಾದಿಸಿದ್ದರು.
Additional sessions and FTSC-2 (POCSO) court of the city sentenced a man, accused of sexual harassment of minor to 20 years in prison.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am