ಬ್ರೇಕಿಂಗ್ ನ್ಯೂಸ್
02-04-23 09:05 pm Mangalore Correspondent ಕ್ರೈಂ
ಮಂಗಳೂರು, ಎ.2: ಸಲಿಂಗ ಕಾಮ ವಿಚಾರದಲ್ಲಿ ಜಯಾನಂದ ಆಚಾರ್ಯ ಎಂಬ ವ್ಯಕ್ತಿಯ ಹತ್ಯೆ ಮಾಡಿದ್ದ ಆರೋಪಿ ರಾಜೇಶ್ ಪೂಜಾರಿ ಆಲಿಯಾಸ್ ರಾಜಾ ಎಂಬಾತನಿಗೆ ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ.
2022ರ ಅಕ್ಟೋಬರ್ 7ರಂದು ಜಯಾನಂದ ಆಚಾರ್ಯ ಆರೋಪಿಯನ್ನು ಸಲಿಂಗ ಕಾಮಕ್ಕೆ ಬಳಸಿಕೊಂಡಿದ್ದರು. ಆದರೆ, ತಾವು ನೀಡಿದ ಭರವಸೆಯಂತೆ ಅನೈಸರ್ಗಿಕ ಲೈಂಗಿಕ ಕ್ರಿಯೆಯ ನಂತರ ಆರೋಪಿಗೆ ಹಣ ನೀಡಿರಲಿಲ್ಲ. ಇದರಿಂದ ಕೋಪಗೊಂಡ ಆರೋಪಿ ರಾಜೇಶ್ ಪೂಜಾರಿ ಆಲಿಯಾಸ್ ರಾಜಾ ಪ್ಲಾಸ್ಟಿಕ್ ದಾರದಿಂದ ಕುತ್ತಿಗೆ ಬಿಗಿದು ಉಸಿರುಕಟ್ಟಿಸಿ ಕೊಲೆ ಮಾಡಿದ್ದ ಎಂದು ಆರೋಪಿಸಲಾಗಿತ್ತು.
ಜಯಾನಂದ ಆಚಾರ್ಯ ಅವರನ್ನು ಹತ್ಯೆ ಮಾಡಿದ ಬಳಿಕ ಮೃತದೇಹದ ಮೇಲೆ ಲುಂಗಿ ಹೊದಿಸಿ ಆರೋಪಿ ಪರಾರಿಯಾಗಿರುವುದು ತನಿಖೆ ಮತ್ತು ಸಾಕ್ಷ್ಯಾಧಾರಗಳಿಂದ ಸಾಬೀತಾಗಿದೆ ಎಂದು ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು. ಆರೋಪಿ ವಿರುದ್ಧದ ಆರೋಪವು ಮೇಲ್ನೋಟಕ್ಕೆ ಸಾಬೀತಾಗಿದ್ದು, ಸಿಸಿಟಿವಿ ದೃಶ್ಯಾವಳಿ ಮತ್ತು ಆರೋಪಿಯ ತಪ್ಪೊಪ್ಪಿಗೆ ಹೇಳಿಕೆಯೂ ಇದಕ್ಕೆ ಪೂರಕವಾಗಿದೆ. ಮರಣದಂಡನೆ ಶಿಕ್ಷೆ ವಿಧಿಸುವ ಪ್ರಕರಣ ಇದಾಗಿದ್ದು, ಆರೋಪಿಗೆ ಜಾಮೀನು ನೀಡಬಾರದು ಎಂದು ಪ್ರಾಸಿಕ್ಯೂಷನ್ ಪರ ಸರ್ಕಾರಿ ವಕೀಲರು ವಾದ ಮಂಡಿಸಿದ್ದರು.
ಆರೋಪಿ ಅಪರಾಧ ಹಿನ್ನೆಲೆ ಹೊಂದಿದ್ದು, ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ಇಂಥದ್ದೇ ಅಪರಾಧಗಳನ್ನು ನಡೆಸುವ ಸಾಧ್ಯತೆ ಇದೆ ಎಂದು ಅವರು ವಾದಿಸಿದ್ದರು. ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಪೊಲೀಸರು ಆರೋಪ ಪಟ್ಟಿಯನ್ನೂ ಸಲ್ಲಿಸಿದ್ದಾರೆ. ಲಭ್ಯ ಸಾಕ್ಷ್ಯಾಧಾರಗಳನ್ನು ಪೊಲೀಸರು ಈಗಾಗಲೇ ಸಂಗ್ರಹಿಸಿದ್ದು, ಆರೋಪಿ ಸ್ಥಳೀಯನಾಗಿದ್ದ ಕಾರಣ ನ್ಯಾಯ ವಿಚಾರಣೆಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಆರೋಪಿ ಪರ ವಕೀಲರು ವಾದಿಸಿದ್ದರು. ಇದನ್ನು ಪರಿಗಣಿಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರವೀಂದ್ರ ಎಂ. ಜೋಷಿ, ಆರೋಪಿಗೆ ಷರತ್ತುಬದ್ಧ ಜಾಮೀನು ನೀಡಿದ್ದಾರೆ. ಆರೋಪಿ ಪರವಾಗಿ ಮಂಗಳೂರಿನ ವಕೀಲ ಹರ್ಷಕುಮಾರ್ ವಾದಿಸಿದ್ದರು.
Gay partner murder in Mangalore, police register fake charge sheet, court issues bail to Rajesh Poojari.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am